ಚಿಕ್ಕನಾಯಕನಹಳ್ಳಿಯ ಬುಕ್ಕಾಪಟ್ಟಣದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ನಿಖಿಲ್ ಕುಮಾರಸ್ವಾಮಿ

Chikkanayakanahally:

Font size:

ಅಭಿವೃದ್ಧಿ ಹೆಸರಲ್ಲಿ ರಾಜ್ಯ ಸರ್ಕಾರ ಲೂಟಿ ಹೊಡೆಯುತ್ತಿದೆ ಜೆಡಿಎಸ್ ಭವಿಷ್ಯ ಭದ್ರವಾಗಿದೆ, ಸುಭದ್ರವಾಗಿದೆ ಎಂದು ವಿರೋಧಿಗಳಿಗೆ ನಿಖಿಲ್ ಟಾಂಗ್ ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ-ನಿಖಿಲ್

ತುಮಕೂರು: ಜೆಡಿಎಸ್ ಭವಿಷ್ಯದ ಬಗ್ಗೆ ಯಾರು ತಲೆ ಕೆಡಿಸಕೊಳ್ಳಬೇಕಾಗಿಲ್ಲ ಭದ್ರವಾಗಿದೆ ಸುಭದ್ರವಾಗಿದೆ ಅದು ಕಾರ್ಯಕರ್ತರ ಕೈಯಲ್ಲಿದೆ ಎಂದು ನಿಖಿಲ್ ಕುಮಾರಸ್ವಾಮಿ ವಿರೋಧಿಗಳಿಗೆ ಟಾಂಗ್ ನೀಡಿದರು.

ತುಮಕೂರಿನ ಚಿಕ್ಕನಾಯಕನಹಳ್ಳಿಯ ಬುಕ್ಕಾ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಎರಡನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ನಮ್ಮ ಪಕ್ಷದಲ್ಲಿ ನಾಯಕರನ್ನ ಬೆಳಸುವಂತಹ ಕಾರ್ಯಕರ್ತರಿದ್ದಾರೆ. ಎಷ್ಟೋ ಜನ ದೊಡ್ಡ ದೊಡ್ಡ ನಾಯಕರು ನಮ್ಮ ಪಕ್ಷದಿಂದ ಬೆಳೆದು ಬೇರೆ ಪಕ್ಷಕ್ಕೆ ಹೋಗಿರುವ ಇತಿಹಾಸ ಇದೆ. ನಾಯಕರ ಫ್ಯಾಕ್ಟರಿಯನ್ನು ಸೃಷ್ಟಿ ಮಾಡುವ ಶಕ್ತಿ ನಮ್ಮ ಕಾರ್ಯಕರ್ತರಿಗಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ಸಾಲಕ್ಕೆ ಸಿಲುಕಿದೆ ಎಂಬ ಮಾಧ್ಯಮದವರು ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದಾದರೂ ಉಪಚುನಾವಣೆ ಮತ್ತು ಎಂಪಿ ಚುನಾವಣೆ ಬರಲಿ ಅಂತ ಕಾಯ್ತಿದ್ದಾರೆ. ಆಗ ಗ್ಯಾರಂಟಿ ಹಣ ಹಾಕ್ತಾರೆ. ಅಭಿವೃದ್ಧಿ ಹೆಸರಿನಲ್ಲಿ ಕಾಂಗ್ರೆಸ್ ಲೂಟಿ ಹೊಡೆಯುತ್ತಿದೆ ಎಂದು ಅವರು ಕಿಡಿಕಾರಿದರು.

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅವರ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಯನ್ನ ಪ್ರತಿ ತಿಂಗಳು ಕೊಡ್ತೀವಿ ಎಂದು ಮಾತು ಕೊಟ್ಟಿದ್ರು. ಇವತ್ತು ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ರಾಜ್ಯದ ಜನತೆಗೆ ಐದು ಗ್ಯಾರಂಟಿ ಯೋಜನೆ ಹೋಗ್ತಿಲ್ಲ ಎಂದು ಅವರು ಆರೋಪಿಸಿದರು.

*ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ.

ಗ್ಯಾರಂಟಿ ಯೋಜನೆ ಜನಕ್ಕೆ ತಲುಪುತ್ತಿಲ್ಲ ಇದು ರಾಜ್ಯದ ಜನರ ಅಭಿಪ್ರಾಯ.ಗ್ಯಾರಂಟಿ ಕೊಡುವುದು ತಪ್ಪು ಅಂತ ಹೇಳ್ತಿಲ್ಲ. ಗ್ಯಾರಂಟಿ ಜೊತೆಗೆ ಅಭಿರುದ್ದಿ ಮಾಡಿ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಅಭಿವೃದ್ಧಿ ಕಾಣುತ್ತಿಲ್ಲ. ಕಳೆದ ಎರಡು ವರ್ಷದಲ್ಲಿ ಎಷ್ಟು ಶಾಸಕರಿಗೆ ಎಷ್ಟು ಅನುದಾನ ಕೊಟ್ಟಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಕಾಂಗ್ರೆಸ್ ಲೂಟಿ ಹೊಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಜನರೊಂದಿಗೆ ಜನತಾದಳ ಅಭಿಯಾನವನ್ನ ರಾಜ್ಯವ್ಯಾಪಿ ಎರಡನೇ ದಿನಕ್ಕೆ ಕಾಲಿಟ್ಟಿದ್ದೇವೆ. ವಿಶೇಷವಾಗಿ ಬುಕ್ಕಾಪಟ್ಟಣ ಜನತಾದಳ ಪಕ್ಷಕ್ಕೆ ಆಶೀರ್ವಾದ ಮಾಡಿದ ಕ್ಷೇತ್ರ. ಈಗಾಗಲೇ ಸದಸ್ಯತ್ವ ನೋಂದಣಿ ರಾಜ್ಯವ್ಯಾಪಿ ನಡೆಯುತ್ತಿದೆ. ಈಗಾಗಲೇ1.50 ಲಕ್ಷ ಜನ ಪಕ್ಷದ ಸಕ್ರಿಯ ಸದಸ್ಯರಾಗಿದ್ದಾರೆ. ಇಡೀ ರಾಜ್ಯದ ಜನತೆ ನಮ್ಮ ಪಕ್ಷದ ಕಾರ್ಯಕರ್ತರು ಉತ್ಸಾಹಕತೆಯಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಶಾಸಕರಾದ ಎಂ.ಟಿ ಕೃಷ್ಣಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಶಿರಾ ಉಗ್ರೇಶ್, ತುಮಕೂರು ಜಿಲ್ಲಾಧ್ಯಕ್ಷರಾದ ಅಂಜಿನಪ್ಪ, ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಮತಿ ರಶ್ಮಿ ರಾಮೇಗೌಡ ಅವರು, ಚಿಕ್ಕನಾಯಕನಹಳ್ಳಿ ತಾಲ್ಲೂಕು ಅಧ್ಯಕ್ಷರಾದ ರಾಮಚಂದ್ರು ಅವರು,ಎಸ್.ಆರ್ ಗೌಡ ಅವರು ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

*|| ಎಸ್ ಟಿಸಿಪಿ ಮತ್ತು ಟಿಎಸ್ ಪಿ ಹಣವನ್ನು ನುಂಗಿ ತೆಲಂಗಾಣ ಬಳ್ಳಾರಿ ಚುನಾವಣೆಗೆ ಬಳಸಿದ್ದಾರೆ||*

ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆದರೇ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ನನ್ನ ರಾಜ್ಯ ಪ್ರವಾಸ ಕಾರ್ಯಕರ್ತರ ಜೊತೆ ನಾನಿದ್ದೇನೆ ಎಂದು ಹೇಳುವುದ್ದಕ್ಕೆ-ನಿಖಿಲ್

ಒಂದು ದಟ್ಟವಾದ ಹೆಜ್ಜೆ ಇಟ್ಟಿದ್ದೇನೆ. ನಿಮ್ಮ ಪ್ರೀತಿ ಸಹಕಾರ ನನ್ನ ಮೇಲೆ ಇರಲಿ

2028ರವರೆಗೆ ಯಾರು ಹಾರಾ- ತುರಾಯಿ ತರಬೇಡಿ ಕಾರ್ಯಕರ್ತರಿಗೆ ನಿಖಿಲ್ ಮನವಿ

*****
ತುಮಕೂರು, ಪಾವಗಡ : ಕರ್ನಾಟಕ ಮತ್ತು ಆಂಧ್ರ ಗಡಿಭಾಗದಲ್ಲಿರುವ ಪಾವಗಡ ಕ್ಷೇತ್ರಕ್ಕೆ ಕಮಾರಣ್ಣನ ಕೊಡುಗೆ ಅಪಾರ. ಹತ್ತು ಪ್ರೌಢ ಶಾಲೆ, ಬಸ್ ಡಿಪೋ ಮತ್ತು ನೀರಾವರಿಗೆ ಭದ್ರಾ ಮೇಲ್ದಂಡೆ ಯೋಜನೆಯಿಂದ ಶಾಶ್ವತವಾಗಿ ನೀರಾವರಿ ಹಾಗೂ ಸುವರ್ಣ ಗ್ರಾಮ ಹಲವಾರು ಯೋಜನೆಗಳು ಕುಮಾರಣ್ಣ ಅವಧಿಯಲ್ಲಿ ಆಗಿದೆ ಎಂದು ತಿಳಿಸಿದರು.

ಆದರೆ ಇವತ್ತು ಪಾವಗಡದ ತಾಲ್ಲೂಕಿನಲ್ಲಿ ಏನಾಗಿದೆ ಪರಿಸ್ಥಿತಿ. ಇಲ್ಲಿರುವ ಶಾಸಕರು ಕ್ಷೇತ್ರಕ್ಕೆ ಎಷ್ಟು ಅನುಧಾನ ತಂದಿದ್ದಾರೆ. ಯಾವ ರೀತಿ ಅಭಿವೃದ್ಧಿ ಮಾಡಿದ್ದಾರೆ. ಕುಮಾರಣ್ಣ ಕಾಲದಲ್ಲಿ ಆಗಿರುವ ಕೆಲಸದಲ್ಲಿ ಶೇ 10% ಆಗಿಲ್ಲ ಕಳೆದ ಎರಡು ವರ್ಷದಲ್ಲಿ ಒಂದು ರೂಪಾಯಿ ಅನುಧಾನ ತಂದಿಲ್ಲ ಎಂದು ಕಿಡಿಕಾರಿದರು.

*ಎಸ್ಇಪಿ, ಟಿಎಸ್ಪಿ ಹಣವನ್ನ ತೆಲಂಗಾಣ ಚುನಾವಣೆಗೆ ಬಳಸಿದ್ದಾರೆ*

ಇವತ್ತು ಬಾಯಿಬಿಟ್ರೆ ನಾನು ಹಿಂದುಳಿದ ವರ್ಗಕ್ಕೆ ನಾನು ಸಮಾಜವಾದಿ ನಾಯಕ, ಚಾಂಪಿಯನ್ ಲೀಡರ್ ಅಂತ ಕೊಚ್ಚಿಕೊಳ್ಳುತ್ತಾರೆ ರಾಜ್ಯದ ಮುಖ್ಯಮಂತ್ರಿಗಳು. ಆದ್ರೆ ಎಸ್ಇಪಿ, ಟಿಎಸ್ಪಿ ಹಣವನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಅಭಿವೃದ್ಧಿಗೆ ಮಿಸಲಿಟ್ಟಿದ್ದ ಸಾವಿರಾರು ಕೋಟಿಯನ್ನ ಹಣವನ್ನು ಲೂಟಿ ಮಾಡಿದ್ರು ಎಂದು ಅವರು ರಾಜ್ಯ ಸರ್ಕಾರ ವಿರುದ್ಧ ಕಿಡಿಕಾರಿದರು.

*ನನ್ನ ಪ್ರವಾಸ ಕಾರ್ಯಕರ್ತರ ಜೊತೆ ನಾನಿದ್ದೇನೆ ಎಂದು ಹೇಳುವುದ್ದಕ್ಕೆ*

ನಾನು ಮಾಡುತ್ತಿರುವುದು ಒಂದು ದಿನದ ಪ್ರವಾಸ ಅಲ್ಲ, ನನ್ನ ಪ್ರವಾಸ 58 ದಿನಗಳ ಕಾಲ ಇಡೀ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತೇನೆ. ನಾನು ಹೋಗುತ್ತಿರುವುದು ಮುಖಂಡರು ಮತ್ತು ಕಾರ್ಯಕರ್ತರ ಜೊತೆ ನಾನಿದ್ದೇನೆ ಎಂದು ಹೇಳುವುದ್ದಕ್ಕೆ. ಮತ್ತು ಯಾವ ಯಾವ ಜಿಲ್ಲೆಗಳಲ್ಲಿ ಏನೇನು ಸಮಸ್ಯೆಗಳಿದೆ, ಸ್ಥಳೀಯರ ಸಮಸ್ಯೆ ಏನು.? ಅದಕ್ಕೆ ಉತ್ತರ ಏನು ಪಡೆದುಕೊಳ್ಳುವುದಕ್ಕೆ ಎಂದು ತಿಳಿಸಿದರು.

*2028ರ ವರೆಗೆ ಹಾರಾ- ತುರಾಯಿ ತರಬೇಡಿ*

ಕಾರ್ಯಕರ್ತ ಬಂಧುಗಳಿಗೆ ನನ್ನ ಮನವಿ.ಹಾರಾ- ತುರಾಯಿ, ಹೂ ಗುಚ್ಛವನ್ನ ಹಣವನ್ನು ಖರ್ಚು ಮಾಡಿಕೊಂಡು ದಯವಿಟ್ಟು ತರಬೇಡಿ. ನಿಮ್ಮ ಮನಸಿನಲ್ಲಿ ಪ್ರೀತಿ ಇಟ್ಟುಕೊಳ್ಳಿ. ನಿಮ್ಮ ವಿಶ್ವಾಸಕ್ಕೆ ತಕಂತೆ ಹೆಜ್ಜೆ ಹಾಕುತ್ತೇನೆ. ಇಷ್ಟು ಹಣ ಖರ್ಚು ಮಾಡಿ ತರಬೇಡಿ ಇದು ಯಾವಾಗ ತಗೊಂಡು ಬರಬೇಕು ಅಂದರೆ ನಮ್ಮ ಹೋರಾಟ ದಡ ಮುಟ್ಟಿ ಕುಮಾರಣ್ಣನ ಸಿಎಂ ಮಾಡುವ ವರೆಗೂ ತರಬೇಡಿ ಎಂದ ಮನವಿ ಮಾಡಿದರು.

ಒಂದು ದಟ್ಟವಾದ ದೊಡ್ಡ ಹೆಜ್ಜೆ ಹಿಟ್ಟಿದ್ದೇನೆ. ನಿಮ್ಮ ಪ್ರೀತಿ ಸಹಕಾರ ನನ್ನ ಮೇಲೆ ಇರಲಿ ದೇವೇಗೌಡರು ಮತ್ತು ಕುಮಾರಣ್ಣನವರ ಮೇಲೆ ನೀವು ಇಟ್ಟಿರುವ ಅಭಿಮಾನ ನನಗೂ ಅದೇ ರೀತಿ ನಿಮ್ಮ ಹೃದಯಲ್ಲಿ ಕೊಡಿ ಎಂದು ಮನವಿ ಮಾಡಿದರು.

ಜೆಡಿಎಸ್ ಪಕ್ಷವನ್ನು ಪಾವಗಡ ಕ್ಷೇತ್ರದಲ್ಲಿ ದೊಡ್ಡ ಮಟ್ಟದಲ್ಲಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಮನವಿ ಮಾಡಿದರು. ನನ್ನ ಮನವಿಗೆ ಸ್ಪಂದಿಸಿದ ಕಾರ್ಯಕರ್ತ ಬಂಧುಗಳು ಬೂತ್ ಮಟ್ಟದಲ್ಲಿ ತಂಡಗಳನ್ನು ಕಟ್ಟಿಕೊಂಡು ಪಕ್ಷ ಸಂಘಟಿಸುವ ಭರವಸೆ ನೀಡಿದರು.

ನಾವೆಲ್ಲರೂ ಹಗಲಿರುಳು ಶ್ರಮಿಸುವ ಮೂಲಕ 2028 ಕ್ಕೆ ಕುಮಾರಣ್ಣನವರಿಗೆ ಅಧಿಕಾರ ಕೊಡಿಸುವ ಸಂಕಲ್ಪ ಮಾಡೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ತಿಮ್ಮರಾಯಪ್ಪ ರವರು, ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಮತಿ ರಶ್ಮಿ ರಾಮೇಗೌಡ್ರು, ಜಿಲ್ಲಾಧ್ಯಕ್ಷರಾದ ಆರ್.ಸಿ. ಅಂಜನಪ್ಪ ರವರು, ತಾಲ್ಲೂಕು ಅಧ್ಯಕ್ಷರಾದ ಈರಣ್ಣ ರವರು ಸೇರಿದಂತೆ ಪ್ರಮುಖ ಮುಖಂಡರು, ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Prev Post ಅಧ್ಯಯನಕ್ಕಾಗಿ ಮಲೇಶಿಯಾಕ್ಕೆ ತೆರಳಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್
Next Post ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ನೇತೃತ್ವದಲ್ಲಿ ಸ್ವೀಡನ್ ಪ್ರವಾಸ ಮೈಸೂರಿನಲ್ಲಿನ ಸೀಲ್ಸ್‌ ತಯಾರಿಕಾ ಘಟಕದ ಸಾಮರ್ಥ್ಯ ದುಪ್ಪಟ್ಟು: ಎಸ್‌ಕೆಎಫ್‌