ಮಂಗಳೂರು ;ಅಡ್ಯಾರ್ ತಜಿಪೋಡಿಯಲ್ಲಿ ಗೋ ಕಳ್ಳತನ/ಆರೋಪಿಗಳ ಬಂಧನ

Mangalore:

Font size:

ಮಂಗಳೂರು ;ಅಡ್ಯಾರ್ ತಜಿಪೋಡಿಯಲ್ಲಿ ಗೋ ಕಳ್ಳತನ/ಆರೋಪಿಗಳ ಬಂಧನ

From ; Jayaram Udupi

ಮಂಗಳೂರು

ಅಡ್ಯಾರ್ ತಜಿಪೋಡಿಯಲ್ಲಿ ಗೋ ಕಳ್ಳತನವಾಗಿದ್ದು, ಕಂಕನಾಡಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಗೋವು ಜೀವಂತ ಪತ್ತೆಯಾಗಿದೆ ಮತ್ತು ಆರೋಪಿಗಳನ್ನು ಬಂಧಿಸಲಾಗಿದೆ.

ಸೆ.13 ರಂದು ಬೆಳಗಿನ ಜಾವ ಮಂಗಳೂರು ನಗರದ ತಜಿಪೋಡಿ ಮನೆ, ಅಡ್ಯಾರ್ ಎಂಬಲ್ಲಿ ಉಮೇಶ್ ಆಳ್ವ ಎಂಬವರ ಮನೆಯ ಅಂಗಳದಿಂದ ಒಂದು ಕ್ರಾಸ್ ಜರ್ಸಿ ಹಸುವನ್ನು ಕಳ್ಳತನ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳುವಾದ ಹಸುವನ್ನು ಕಂಕನಾಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಜೀವಂತವಾಗಿ ಪತ್ತೆ ಮಾಡಿ ಈ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

ಆರೋಪಿಗಳನ್ನು ಅಡ್ಯಾರ್, ಕಣ್ಣುರು ನಿವಾಸಿ ಶಾಬಾಜ್ ಅಹಮ್ಮದ್,ಅರ್ಕುಳ ವಳಚ್ಚಿಲ್ ನಿವಾಸಿ ಮೊಹಮ್ಮದ್ ಸುಹಾನ್ ಹಾಗೂ ಅಡ್ಯಾರ್ ನಿವಾಸಿ ವಳಚ್ಚಿಲ್ ಖಾದರ್ ಮೊಹಮ್ಮದ್ ಎಂದು ತಿಳಿದುಬಂದಿದೆ.

ಶಾಬಾಜ್ ಕಣ್ಣೂರು ಮತ್ತು ಸುಹಾನ್ ವಳಚ್ಚಿಲ್ ದನ ಕಳ್ಳತನ ಮಾಡಿ, ವಳಚ್ಚಿಲ್ ಖಾದರ್ ನಿಗೆ ಮಾರಾಟ ಮಾಡಿದ್ದು, ಆತನು ಅದನ್ನು ಮಾಂಸ ಮಾಡಲು ಖರೀದಿಸಿದ್ದು, ದನವನ್ನು ರಕ್ಷಿಸಿ, ವಶಕ್ಕೆ ಪಡೆದು, ಆರೋಪಿಗಳನ್ನು ಬಂಧಿಸಲಾಗಿದೆ. ಶಾಬಾಜ್ ಅಹ್ಮದ್ ಕಣ್ಣೂರು ಎಂಬಾತನ ವಿರುದ್ದ ಈಗಾಗಲೇ ಮಂಗಳೂರು ಗ್ರಾಮಾಂತರ ಮತ್ತು ಕಂಕನಾಡಿ ಠಾಣೆಯಲ್ಲಿ ಒಂದು ಕೊಲೆ, ಎರಡು ಕೊಲೆ ಪ್ರಯತ್ನ ಮತ್ತು ಒಂದು ದೊಂಬಿ ಪ್ರಕರಣಗಳಿದ್ದು ಮೊಹಮ್ಮದ್ ಸುಹಾನ್, ಅರ್ಕುಳ ಎಂಬಾತನ ವಿರುದ್ದ ಉಳ್ಳಾಲ ಠಾಣೆಯಲ್ಲಿ ಒಂದು ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕರಣ ಹಾಗೂ ವಳಚ್ಚಿಲ್ ಖಾದರ್ ಮೊಹಮ್ಮದ್ @ ಕೋಳಿ ಮಹಮದ್, ಅಡ್ಯಾರ್ ಎಂಬಾತನ ವಿರುದ್ದ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ 2024 ರಲ್ಲಿ ಒಂದು ಗೋ ಹತ್ಯೆ ಪ್ರಕರಣ ದಾಖಲಾಗಿದೆ.

ಆರೋಪಿಗಳು ದನ ಕಳ್ಳತನ ಮಾಡಿ ಅದನ್ನು ವಳಚಿಲ್ ಅಬ್ದುಲ್ ಖಾದರ್ ಮನೆಗೆ ಹೊಂದಿಕೊಂಡ ಶೆಡ್ ನಲ್ಲಿ ಹತ್ಯೆ ಮಾಡಿ ಮಾಂಸ ಮಾಡಲು ಸಿದ್ಧತೆ ಮಾಡಿಕೊಂಡ ಹಿನ್ನೆಲೆಯಲ್ಲಿ ಜಾಗವನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆದ್ಯಾದೇಶ -2020 ರಲ್ಲಿ ಪ್ರದತ್ತವಾದ ಅಧಿಕಾರದಂತೆ ಜಪ್ತಿ ಮಾಡಿ, ಸರಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿರುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Prev Post ಧರ್ಮಸ್ಥಳ ಪ್ರಕರಣದಲ್ಲಿ 'ಮಾಸ್ಕ್ ಮ್ಯಾನ್' ಚಿನ್ನಯ್ಯನಿಗೆ ಜೈಲೇ ಗತಿ, ಜಾಮೀನು ಅರ್ಜಿ ವಜಾ
Next Post ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (PPP) ಶಿರಾದಲ್ಲಿ ಹೆರಿಟೇಜ್ ಪಾರ್ಕ್ ನಿರ್ಮಾಣಕ್ಕೆ ನಿರ್ಧಾರ