ಸಚಿವಾಲಯದ ಜಂಟಿ ಮತ್ತು ಉಪ ಕಾರ್ಯದರ್ಶಿಗಳಿಗೆ ಸ್ಥಳನಿಯುಕ್ತಿ
ಬೆಂಗಳೂರು, ಏ. 10- ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ಸಚಿವಾಲಯದ ಸೇವೆಗೆ ಸೇರಿದ ಜಂಟಿ ಮತ್ತು ಉಪ ಕಾರ್ಯದರ್ಶಿ ವೃಂದದ ಅಧಿಕಾರಿಗಳ ಚಲನವಲನ ಹಾಗೂ ಸ್ಥಳನಿಯುಕ್ತಿಗೆ ಸಂಬಂಧಿಸಿದ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮಾನ್ಯವಾಗಲಿದೆ.
1. ಶ್ರೀ ನಾಗರಾಜ ಆರ್. – ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ. ಇವರನ್ನು ಕಾರ್ಮಿಕ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
2. ಶ್ರೀಮತಿ ಪುಷ್ಪ ಎನ್. – ಪ್ರವಾಸೋದ್ಯಮ ಇಲಾಖೆಯ ಜಂಟಿ ಕಾರ್ಯದರ್ಶಿ. ಇವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಚಲನವಲನಗೊಳಿಸಲಾಗಿದೆ.
3. ಶ್ರೀಮತಿ ರಾಜ್ಯಶ್ರೀ ವಿ.ಟಿ. – ಕಾರ್ಮಿಕ ಇಲಾಖೆಯ ಉಪ ಕಾರ್ಯದರ್ಶಿ. ಇವರನ್ನು ಉನ್ನತ ಶಿಕ್ಷಣ ಇಲಾಖೆಯ (ವಿಶ್ವವಿದ್ಯಾಲಯಗಳು ಮತ್ತು ಸಮನ್ವಯ) ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
4. ಶ್ರೀ ಶಶಿಧರ ಜಿ.– ಪ್ರಸ್ತುತ ಸ್ಥಳ ನಿರೀಕ್ಷಣೆಯಲ್ಲಿರುವ ಉಪ ಕಾರ್ಯದರ್ಶಿ. ಇವರನ್ನು ಪ್ರವಾಸೋದ್ಯಮ ಇಲಾಖೆಯ ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
5. ಶ್ರೀಮತಿ ಅಕ್ಕಮಹಾದೇವಿ ವಿ. – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ. ಇವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಚಲನವಲನಗೊಳಿಸಲಾಗಿದೆ.
6. ಶ್ರೀ ಪುಟ್ಟರಾಮು ಆರ್. – ಪ್ರಸ್ತುತ ಸ್ಥಳ ನಿರೀಕ್ಷಣೆಯಲ್ಲಿರುವ ಉಪ ಕಾರ್ಯದರ್ಶಿ. ಇವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
7. ಶ್ರೀ ಮುರಳೀಧರ ಎಸ್. ತಳಿಕೇರಿ – ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಉಪ ಕಾರ್ಯದರ್ಶಿ (ಪ್ರಸ್ತುತ ಸ್ಥಳ ನಿರೀಕ್ಷಣೆಯಲ್ಲಿ). ಇವರನ್ನು ಸಮನ್ವಯ ಕೋಶದ ಉಪ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.






Comments
Krishnappa M
April 10, 2026, 6:56 p.m.👍
Leave a Comment