PRABHAVAA.COM

ಫ್ರೀಡಂ ಪಾರ್ಕ್ ಸಭಾಂಗಣಕ್ಕೆ ಪ್ರೋ ಎಚ್.ಎಸ್. ದೊರೆಸ್ವಾಮಿ ಹೆಸರಿಡಿ: ಸ್ವಾತಂತ್ರ್ಯ ಉದ್ಯಾನ ಉಳಿಸಿ ಹೋರಾಟ ಸಮಿತಿ ಆಗ್ರಹ

:

Font size:

ಫ್ರೀಡಂ ಪಾರ್ಕ್ ಸಭಾಂಗಣಕ್ಕೆ ಪ್ರೋ ಎಚ್.ಎಸ್. ದೊರೆಸ್ವಾಮಿ ಹೆಸರಿಡಿ: ಸ್ವಾತಂತ್ರ್ಯ ಉದ್ಯಾನ ಉಳಿಸಿ ಹೋರಾಟ ಸಮಿತಿ ಆಗ್ರಹ

ಫ್ರೀಡಂ ಪಾರ್ಕ್ ಸಭಾಂಗಣಕ್ಕೆ ಪ್ರೋ ಎಚ್.ಎಸ್. ದೊರೆಸ್ವಾಮಿ ಹೆಸರಿಡಿ: ಸ್ವಾತಂತ್ರ್ಯ ಉದ್ಯಾನ ಉಳಿಸಿ ಹೋರಾಟ ಸಮಿತಿ ಆಗ್ರಹ
ಬೆಂಗಳೂರು,ಏ.15: ಸ್ವಾತಂತ್ರ್ಯ ಉದ್ಯಾನವದಲ್ಲಿ ನಿರ್ಮಾಣವಾಗಿರುವ ಫ್ರೀಡಂ ಪಾರ್ಕ್ ಸಭಾಂಗಣಕ್ಕೆ ನಾಡಿನ ಸಾಕ್ಷಿ ಪ್ರಜ್ಞೆ, ಮಹಾನ್ ಸ್ವಾತಂತ್ರ ಹೋರಾಟಗಾರರಲ್ಲಿ ಒಬ್ಬರಾದ ಪ್ರೋ ಎಚ್.ಎಸ್. ದೊರೆಸ್ವಾಮಿ ಹೆಸರನ್ನು ನಾಮಕರಣ ಮಾಡುವಂತೆ ಸ್ವಾತಂತ್ರ್ಯ ಉದ್ಯಾನ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಎಚ್.ಎಸ್. ದೊರೆಸ್ವಾಮಿ. ಅವರು ತಮ್ಮ ಜೀವನವನ್ನೇ ದೇಶದ ಸ್ವಾತಂತ್ರ್ಯಕ್ಕಾಗಿ ಸಮರ್ಪಿಸಿದ ಧೈರ್ಯಶಾಲಿಯಾಗಿದ್ದರು. ಅವರು ಪತ್ರಕರ್ತರಾಗಿ, ಸಾಹಿತಿಯಾಗಿ, ನಾಡು, ನುಡಿಗಾಗಿ ಟೊಂಕ ಕಟ್ಟಿ ನಿಂತು ಹೋರಾಟ ಮಾಡಿದ ಮಹಾನ್ ಚೇತನ. ದೇಶಕ್ಕಾಗಿ ಸೆರೆ ವಾಸ ಅನುಭವಿಸಿದ್ದರು. ಜೈಲಿನಲ್ಲಿದ್ದಾಗಲೂ ಅವರು ದೇಶಭಕ್ತಿಯ ಚಿಂತನೆಗಳನ್ನು ಮುಂದುವರಿಸಿದರು. ಅವರು ಸಹ ಹೋರಾಟಗಾರರಿಗೆ ಪ್ರೇರಣೆ ನೀಡುತ್ತಿದ್ದರು. ಸ್ವಾತಂತ್ರ್ಯಕ್ಕಾಗಿ ಅವರು ಅನುಭವಿಸಿದ ಕಷ್ಟಗಳು ಅವರ ತ್ಯಾಗ ಮನೋಭಾವ ನಮಗೆಲ್ಲರಿಗೂ ಮಾದರಿ ಎಂದಿದ್ಧಾರೆ.
ಇದೇ ಸೆರೆ ಮನೆ ಆವರಣವನ್ನು ಇದೀಗ ಫ್ರೀಡಂ ಪಾರ್ಕ್ [ಸ್ವಾತಂತ್ರ್ಯ ಉದ್ಯಾನವನ] ಎಂದು ನಾಮಕರಣ ಮಾಡಲಾಗಿದೆ. ಇದು ನಾಡಿನ ಹೋರಾಟಗಾರರ ಕರ್ಮಭೂಮಿಯಾಗಿದೆ. ಫ್ರೀಡಂ ಪಾರ್ಕ್ ಉಳಿಸಲು ಎಚ್.ಎಸ್. ದೊರೆಸ್ವಾಮಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರು ಫ್ರೀಡಂ ಪಾರ್ಕ್ ಉಳಿಸಿ ಹೋರಾಟ ಸಮಿತಿಯ ಗೌರವಾಧ್ಯಕ್ಷರಾಗಿ ನಮ್ಮೊಂದಿಗೆ ಅಚಲವಾಗಿ ನಿಂತಿದ್ದರು.
ಎಚ್.ಎಸ್. ದೊರೆಸ್ವಾಮಿ ಅವರ ಜೀವನವು ಯುವ ಪೀಳಿಗೆಗೆ ಒಂದು ಮಾದರಿ. ಅವರ ಧೈರ್ಯ, ತ್ಯಾಗ ಮತ್ತು ದೇಶಭಕ್ತಿ ನಮ್ಮೆಲ್ಲರಿಗೂ ಸ್ಪೂರ್ತಿ ನೀಡುತ್ತದೆ. ಇಂತಹ ಮಹಾನ್ ಹೋರಾಟಗಾರರ ಸೇವೆಯನ್ನು ನಾವು ಸದಾ ಸ್ಮರಿಸಲು, ಅವರ ಹೆಸರು ಅಜರಾಮರವಾಗಿ ಉಳಿಯಬೇಕು ಎನ್ನುವ ದೃಷ್ಟಿಯಿಂದ ಹೊಸದಾಗಿ ಎಚ್.ಎಸ್.ದೊರೆಸ್ವಾಮಿ ಅವರ ಹೆಸರನ್ನು ನಾಮಕರಣ ಮಾಡಬೇಕು. ಇದರಿಂದ ಹೋರಾಟಗಾರರ ನೈತಿಕ ಸ್ಥೈರ್ಯ ಹೆಚ್ಚಿಸಿದಂತಾಗುತ್ತದೆ. ಸರ್ಕಾರ ಕೂಡ ಹಿರಿಯ ಚೇತನರನ್ನು ಸ್ಮರಿಸಿ ಗೌರವಿಸಿದಂಗಾಗುತ್ತದೆ ಎಂದು ಗಂಡಸಿ ಸದಾನಂದ ಸ್ವಾಮಿ ಹೇಳಿದ್ದಾರೆ.

Comments

Leave a Comment

Prev Post ನಮ್ಮ ಪಕ್ಷವನ್ನ ಏನೆಂದುಕೊಡಿದ್ದೀರಾ.? ಸಿಪಿ ಯೋಗೇಶ್ವರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
Next Post ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು:ಈಶ್ವರ ಖಂಡ್ರೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News