ಬೆಂಗಳೂರು ವಾರ್ಡ್ ಮರುವಿಂಗಡಣೆ ಕುರಿತ ಚರ್ಚೆ ಬಗ್ಗೆ ಕುಮಾರಸ್ವಾಮಿಗೆ ಅರಿವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Bengaluru Urban:

Font size:

ಬೆಂಗಳೂರು ವಾರ್ಡ್ ಮರುವಿಂಗಡಣೆ ಕುರಿತ ಚರ್ಚೆ ಬಗ್ಗೆ ಕುಮಾರಸ್ವಾಮಿಗೆ ಅರಿವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು, ಏ.21:

"ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನುಗುಣವಾಗಿ ವಿರೋಧ ಪಕ್ಷದ ಶಾಸಕರು, ಸಾರ್ವಜನಿಕರನ್ನು ವಿಶ್ವಾಸಕ್ಕೆ ಪಡೆದು ಜಿಬಿಎ ಪಾಲಿಕೆಗಳು ಹಾಗೂ ವಾರ್ಡ್ ಗಳ ಮರುವಿಂಗಡಣೆ ಮಾಡಲಾಗಿದೆ. ಆದರೆ ಈ ಬಗ್ಗೆ ಕುಮಾರಸ್ವಾಮಿ ಅವರಿಗೆ ಅರಿವಿಲ್ಲ. ಬೇಕಿದ್ದರೇ ಅವರ ಶಾಸಕರನ್ನೇ ಕೇಳಿ ತಿಳಿದುಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸರ್ಕಾರದ ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿಧೇಯಕ ಸಮರ್ಥಿಸಿಕೊಳ್ಳುವ ಭರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಬೆಂಗಳೂರು ಪಾಲಿಕೆಗಳ ವಾರ್ಡ್ ಮರುವಿಂಗಡಣೆ ಬಗ್ಗೆ ಯಾರೊಂದಿಗೂ ಚರ್ಚೆ ನಡೆಸಿಲ್ಲ ಎಂದು ಮಾಡಿರುವ ಆರೋಪದ ಬಗ್ಗೆ ಕೇಳಿದಾಗ, “ಬೆಂಗಳೂರು ವಾರ್ಡ್ ಗಳ ಮರುವಿಂಗಡಣೆ ವೇಳೆ ಎಲ್ಲಾ ಪಕ್ಷದ ಶಾಸಕರನ್ನು ಒಳಗೊಂಡ ಸಮಿತಿ ರಚಿಸಲಾಗಿತ್ತು. ಅವರ ಪಕ್ಷದ ಶಾಸಕರು ಸಮಿತಿಯ ಭಾಗವಾಗಿದ್ದರು. ಜೆಡಿಎಸ್ ಹಾಗೂ ಬಿಜೆಪಿ ಶಾಸಕರ ಜತೆ ಚರ್ಚೆ ಮಾಡಿ, ಅವರೆಲ್ಲರ ಅಭಿಪ್ರಾಯ ಪಡೆದ ನಂತರವೇ ಅಂತಿಮ ತೀರ್ಮಾನ ಮಾಡಲಾಗಿದೆ” ಎಂದರು.

“ಕುಮಾರಸ್ವಾಮಿ ಅವರು ದೊಡ್ಡ ವ್ಯಕ್ತಿ ಇರಬಹುದು. ನನಗೂ ಸಣ್ಣ ಅನುಭವವಿದೆ. ಈ ಅನುಭವದ ಮೇಲೆ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ಶಾಸಕರು, ನಾಯಕರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬುದು ನನಗೂ ಗೊತ್ತಿದೆ. ನಾನು ಅವರ ಶಾಸಕರ ಜತೆ ಎಷ್ಟು ಗಂಟೆಗಳ ಕಾಲ ಚರ್ಚೆ ಮಾಡಿದ್ದೇನೆ, ಎಷ್ಟು ಗಂಟೆಗಳ ಕಾಲ ಸಾರ್ವಜನಿಕರೊಂದಿಗೆ ಸಂವಾದ ಮಾಡಲಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿದುಕೊಂಡು ಮಾತನಾಡುವುದು ಸೂಕ್ತ” ಎಂದು ಛೇಡಿಸಿದರು.

ಜಿಬಿಎ ಪಾಲಿಕೆಗಳ ಚುನಾವಣೆ ಯಾವಾಗ ನಡೆಯಲಿದೆ ಎಂದು ಕೇಳಿದಾಗ, “ನಾವು ಚುನಾವಣೆಗೆ ಸಿದ್ಧವಿರುವುದಾಗಿ ತಿಳಿಸಿದ್ದೇವೆ. ಉಳಿದಂತೆ ಆ ಪ್ರಕ್ರಿಯೆ ನಡೆಸಲು ರಾಜ್ಯ ಚುನಾವಣಾ ಆಯೋಗವಿದೆ, ನ್ಯಾಯಾಲಯವಿದೆ” ಎಂದು ತಿಳಿಸಿದರು.

ಮುಸಲ್ಮಾನರ ಬಗ್ಗೆ ಹಗೆ ಸುಳ್ಳು ಆರೋಪ

ಮುಸಲ್ಮಾನ ಸಮುದಾಯದ ಮುಖಂಡರು ಹೈಕಮಾಂಡ್ ನಾಯಕರಿಗೆ ಪತ್ರ ಬರೆದು ಸಮುದಾಯದ ಮೇಲೆ ಹಗೆ ಸಾಧಿಸಲಾಗುತ್ತಿದೆ ಎಂದು ಆರೋಪ ಮಾಡಿರುವ ಬಗ್ಗೆ ಕೇಳಿದಾಗ, “ಅದೆಲ್ಲ ಸುಳ್ಳು. ಯಾರೂ ಹಗೆ ಸಾಧಿಸುತ್ತಿಲ್ಲ. ಪಕ್ಷವು ಶಿಸ್ತು ಪಾಲನೆಗೆ ಆದ್ಯತೆ ನೀಡುತ್ತಿದೆ. ಎಲ್ಲರೂ ಶಿಸ್ತು ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದರು.

ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ನೀರಿನ ಸಮಸ್ಯೆ ನಿರ್ವಹಣೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಈಗಾಗಲೇ ಬಿಡಬ್ಲ್ಯೂಎಸ್ಎಸ್ ಬಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಅಂತರ್ಜಲ ಹೆಚ್ಚಳದ ಬಗ್ಗೆ ಮಾತನಾಡಿದ್ದು, ಏನೇ ಸಮಸ್ಯೆ ಬಂದರೂ ನಾವು ಅದನ್ನು ಸಮರ್ಥವಾಗಿ ನಿಭಾಯಿಸುತ್ತೇವೆ” ಎಂದು ತಿಳಿಸಿದರು.

Comments

Leave a Comment

Prev Post 22.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
Next Post ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿದೆ: ಸಿಎಂ ಸಿದ್ದರಾಮಯ್ಯ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News