ಈ ಸರಕಾರದಲ್ಲಿ ಹಣವಿಲ್ಲ; ಹೀಗಾಗಿ ಜಿಬಿಎ, ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ ನಡೆಯಲ್ಲ ರಾಜ್ಯ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ ಹೆಚ್.ಡಿ. ಕುಮಾರಸ್ವಾಮಿ

Tumakuru:

Font size:

ರಾಜ್ಯದ ಜನ ತತ್ತರಿಸುತ್ತಿದ್ದರೆ ಇವರು ಸಿಎಂ ಕುರ್ಚಿ ಕಾಳಗದಲ್ಲಿ ಮೈಮರೆತಿದ್ದಾರೆ ರಾಜ್ಯದ ಸಾಲ ಕಳವಳಕಾರಿ ಸ್ಥಿತಿಯಲ್ಲಿದೆ ಎಂದ ಕೇಂದ್ರ ಸಚಿವರು ತುರುವೇಕೆರೆ, ಕುಣಿಗಲ್ ನಲ್ಲಿ ನೂತನ ದೇಗುಲಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಹೆಚ್ಡಿಕೆ

ತುಮಕೂರು (ತುರುವೇಕೆರೆ, ಕುಣಿಗಲ್ 27 ಏಪ್ರಿಲ್ 2026

ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಹದಗೆಡಿಸಿದೆ ಎಂದು ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಹಣವಿಲ್ಲದ ಕಾರಣಕ್ಕೆ ಗ್ರೇಟರ್ ಬೆಂಗಳೂರು ಎಲೆಕ್ಷನ್ ಮಾಡುವುದಕ್ಕೂ ಈ ಸರ್ಕಾರಕ್ಕೆ ಹಣವಿಲ್ಲ ಎಂದು ನೇರ ಆರೋಪ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನು ಜೂನ್ 30ರ ಬದಲು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಜಾತಿಗಣತಿ ಮತ್ತು ಮತದಾರರ ಪಟ್ಟಿಯ ತಿದ್ದುಪಡಿ ಕಾರ್ಯಗಳಲ್ಲಿ ಸಿಬ್ಬಂದಿ ನಿರತರಾಗಿರುವುದು ಹಾಗೂ ಹಣಕಾಸಿನ ಕೊರತೆ ಇದಕ್ಕೆ ಕಾರಣವಾಗಿದ್ದು, ಆಯೋಗವು ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದೆ. ಅಲ್ಲಿಗೆ ರಾಜ್ಯ ಸರ್ಕಾರ ಆರ್ಥಿಕವಾಗಿ ದುರ್ಭರ ಸ್ಥಿತಿಯಲ್ಲಿದೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಸೊರವನಹಳ್ಳಿ ಮತ್ತು ಕುಣಿಗಲ್ ತಾಲೂಕಿನ ಮಾದಪ್ಪನಹಳ್ಳಿ ಗ್ರಾಮಗಳಲ್ಲಿ ನೂತನ ದೇವಾಲಯಗಳ ಲೋಕಾರ್ಪಣೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸಚಿವರು ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ಉಚಿತ ಗ್ಯಾರಂಟಿಗಳನ್ನು ನೀಡಿದೆ ಸರಿ, ಆದರೆ ಈ ಗ್ಯಾರಂಟಿಗಳಿಂದ ಖಜಾನೆಯನ್ನು ಖಾಲಿ ಮಾಡಿದೆ. ಈಗಾಗಲೇ ರಾಜ್ಯದ ಒಟ್ಟು 7,26,000 ಲಕ್ಷ ಕೋಟಿ ಮೀರಿದೆ. ಪ್ರತಿ ಕನ್ನಡಿಗನ ಮೇಲೆಯೂ ತಲಾ ಒಂದು ಲಕ್ಷ ರೂಪಾಯಿ ಸಾಲವಿದೆ. ಈ ಸಾಲವನ್ನು ತೀರಿಸುವುದು ಹೇಗೆ? ಇಂತಹ ಸರ್ಕಾರಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸಾಧ್ಯ ಆಗುತ್ತದೆಯೇ? ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯುವುದಿಲ್ಲ. ಗ್ರೇಟರ್ ಬೆಂಗಳೂರು ಎಲೆಕ್ಷನ್ ಕೂಡ ಆಗುವುದಿಲ್ಲ. ಕರ್ನಾಟಕ ರಾಜ್ಯ ಚುನಾವಣಾ ಆಯೋಗವೇ ನ್ಯಾಯಾಲಯಕ್ಕೆ ಈ ಸರ್ಕಾರ ಹಣ ಕೊಡುತ್ತಿಲ್ಲ ಎಂದು ಹೇಳಿದೆ. ಇದಕ್ಕಿಂತ ದುಸ್ಥಿತಿ ಇನ್ನೇನಿದೆ ಎಂದು ಸಚಿವರು ಹೇಳಿದರು.

ರಾಜ್ಯದ ಜನ ತತ್ತರಿಸುತ್ತಿದ್ದರೆ ಇವರು ಸಿಎಂ ಕುರ್ಚಿ ಕಾಳಗದಲ್ಲಿ ಮೈಮರೆತಿದ್ದಾರೆ:

ರಾಜ್ಯದ ಜನರು ಒಂದು ಕಡೆ ಕುಡಿಯುವ ನೀರಿನ ಸಮಸ್ಯೆಗೆ ತತ್ತರಿಸುತ್ತಿದ್ದರೆ, ಇನ್ನೊಂದು ಕಡೆ ಅಕಾಲಿಕ ಮಳೆಯಿಂದ ಭಾರೀ ಬೆಳೆ ನಷ್ಟಕ್ಕೆ ತುತ್ತಾಗಿದ್ದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಿಎಂ ಕುರ್ಚಿ ಕಾಳಗದಲ್ಲಿ ಮೈಮರೆತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಕಿ ರೀತಿಯ ಬೇಸಿಗೆಯನ್ನು ನೋಡುತ್ತಿದ್ದೇವೆ. ಉಷ್ಣಗಾಳಿಗೆ ಜನರು ತತ್ತರಿಸುತ್ತಿದ್ದಾರೆ. ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ರೈತರು ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಜನರ ನೆರವಿಗೆ ಧಾವಿಸುವುದು ಇರಲಿ, ಅವರ ಬಗ್ಗೆ ಕನಿಕರದ ಮಾತನ್ನು ಕೂಡ ಆಡುತ್ತಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸರಕಾರಕ್ಕೆ ಜನರು ಎಂದರೆ ಭಯಭಕ್ತಿ ಇಲ್ಲವಾಗಿದೆ ಎಂದ ಅವರು, ಕೇವಲ ಗ್ಯಾರಂಟಿಗಳನ್ನು ಕೊಟ್ಟು ಜೀವನ ಉತ್ತಮಗೊಳಿಸಬಹುದು ಎಂದು ಆಡಳಿತ ನಡೆಸುವವರು ನಂಬಿದ್ದಾರೆ. ಆದರೆ, ಸ್ವಾಭಿಮಾನದ ಜನರನ್ನು ಪರಾವಲಂಬಿಗಳನ್ನಾಗಿ ಮಾಡಿ ಕೈಯೊಡ್ಡಿ ಬೇಡುವ ಸ್ಥಿತಿಗೆ ತಂದು ನಿಲ್ಲಿಸಿದ್ದಾರೆ ಎಂದು ಕೇಂದ್ರ ಸಚಿವರು ರಾಜ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಭಾರತ ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿ ಆಗುವತ್ತ ನಾಗಾಲೋಟದಲ್ಲಿ ಸಾಗುತ್ತಿದೆ. ಆದರೆ, ಕರ್ನಾಟಕ ಮಾತ್ರ ಕಾಂಗ್ರೆಸ್ ಕೈಗೆ ಸಿಕ್ಕಿ ಅಭಿವೃದ್ಧಿ ಹಿಮ್ಮುಖವಾಗಿ ಚಲಿಸುತ್ತಿದೆ. ಸಂಬಳ ಕೊಡುವುದಕ್ಕೂ ಕಷ್ಟ ಎನ್ನುವಂಥ ಧಾರುಣ ಪರಿಸ್ಥಿತಿಗೆ ರಾಜ್ಯವನ್ನು ತಂದು ನಿಲ್ಲಿಸಿದ್ದಾರೆ ಎಂದು ಹೆಚ್ಡಿಕೆ ಅವರು ಕಿಡಿಕಾರಿದರು.

ತುರುವೇಕೆರೆ ತಾಲ್ಲೂಕಿನ ಸೊರವನಹಳ್ಳಿ ಗ್ರಾಮದ ಶ್ರೀ ಕಾಳಘಟ್ಟ ದೇವಿ ಅಮ್ಮನವರ ದೇಗುಲ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಎಂ.ಟಿ. ಕೃಷ್ಣಪ್ಪ, ಪಕ್ಷದ ಮುಖಂಡ ಚಂದ್ರೇಶ್, ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ನಿಂಗಪ್ಪ, ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಾಯಕ ನಾಗರಾಜ್ ಸೇರಿ ಅನೇಕ ಗಣ್ಯರು ಹಾಜರಿದ್ದರು.

ಹಾಗೆಯೇ, ಕುಣಿಗಲ್ ತಾಲೂಕಿನ ಮಾದಪ್ಪನಹಳ್ಳಿ ಗ್ರಾಮದ ಶ್ರೀ ವೆಂಕಟೇಶ್ವರ ಸ್ವಾಮಿ ದೇಗುಲ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಡಿ. ನಾಗರಾಜಯ್ಯ, ಮುನಿರತ್ನ, ಜೆಡಿಎಸ್ ಮುಖಂಡರಾದ ರವಿ, ಜಗದೀಶ್, ಬಿಜೆಪಿ ಮುಖಂಡ ಕೃಷ್ಣಕುಮಾರ್ ಸೇರಿ ಅನೇಕ ಮುಖಂಡರು ಭಾಗಿಯಾಗಿದ್ದರು.

Comments

Leave a Comment

Prev Post ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Next Post ಚಿತ್ರದುರ್ಗ: ‘ಯಡಿಯೂರಪ್ಪ ಅಭಿಮಾನೋತ್ಸವ’ ಕ್ಕೆ ಭೂಮಿಪೂಜೆ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News