PRABHAVAA.COM

ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ವಿಶಿಷ್ಟ ‘ಸಾಮರ್ಥ್ಯ ವನ ಪಾರ್ಕ್’ ನಿರ್ಮಾಣ ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಿಲಾನ್ಯಾಸ

Udupi:

Font size:

ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ವಿಶಿಷ್ಟ ‘ಸಾಮರ್ಥ್ಯ ವನ ಪಾರ್ಕ್’ ನಿರ್ಮಾಣ ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಿಲಾನ್ಯಾಸ

ಉಡುಪಿ, ಮೇ 16

ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ “ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್” ನಿರ್ಮಾಣ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಪಂ ವತಿಯಿಂದ ಪಾರ್ಕ್ ನಿರ್ಮಿಸಲಾಗುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ‌

ವಿಕಲಚೇತನರಿಗೆ ಸಮಗ್ರ ಪುನರ್ವಸತಿ, ಚಿಕಿತ್ಸಕ ಸೇವೆಗಳು, ಉದ್ಯೋಗವಕಾಶ ಮತ್ತು ಸ್ವತಂತ್ರ ಜೀವನಕ್ಕೆ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಇದಕ್ಕಾಗಿ ಜಿಪಂ ಸಿಇಓ ಅಧ್ಯಕ್ಷತೆಯಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಾಮರ್ಥ್ಯ ಟ್ರಸ್ಟ್ ರಚಿಸಲಾಗಿದೆ. ಒಂದೂವರೆ ಕೋಟಿ ಸರ್ಕಾರಿ ಅನುದಾನ ಮತ್ತು ಇತರ ಸಂಘ- ಸಂಸ್ಥೆಗಳ ನೆರವಿನಲ್ಲಿ ಒಟ್ಟು 4.90 ಕೋಟಿ ವೆಚ್ಚದಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣವಾಗಲಿದೆ.

ಉಡುಪಿ ಜಿಲ್ಲೆಯಲ್ಲಿ 15 ವರ್ಷ ಒಳಗಿನ 1228 ವಿಕಲ ಚೇತನ ಮಕ್ಕಳಿದ್ದು ಇವರು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಲು ಪಾರ್ಕ್ ಅನುಕೂಲವಾಗಲಿದೆ. ಇದಲ್ಲದೆ, ಇದರಲ್ಲಿ ಥೆರಪಿ ಸ್ವಿಂಗ್ಸ್ ಗಳು, ಬ್ಯಾಲನ್ಸ್ ಬೀಮ್ಸ್ ಗಳು, ಸಂಗೀತ ವಾದ್ಯಗಳು, ಸ್ಪರ್ಶ ಸಂವೇದನಾ ಮಾರ್ಗಗಳು, ಮರಳು ಮತ್ತು ನೀರಿನ‌ ಆಟದ ವಲಯಗಳು ಇರಲಿದೆ. ಹೂಗಳ ಸುವಾಸನೆ ವೈವಿಧ್ಯ ಅರಿಯಲು ಸೆನ್ಸೇಶನ್ ಸೆನ್ಸರಿ ಪಾರ್ಕ್ ಕೂಡ ಬರಲಿದೆ.‌

ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೊಂದು ಇಡೀ ರಾಜ್ಯ, ದೇಶಕ್ಕೆ ಮಾದರಿ ಆಗಬಲ್ಲ ಪಾರ್ಕ್ ಆಗಲಿದೆ. ಇದನ್ನು ನಾಲ್ಕು ವರ್ಷದಲ್ಲಿ ಪೂರ್ಣಗೊಳಿಸಲು ಯೋಜನೆ ಹಾಕಿದ್ದಾರೆ. ಆದರೆ ಎರಡೇ ವರ್ಷದಲ್ಲಿ ಕಾಮಗಾರಿ ಪೂರ್ತಿಗೊಳಿಸಿ ನಮ್ಮ ಅವಧಿಯಲ್ಲೇ ಉದ್ಘಾಟನೆ ಮಾಡುವಂತಾಗಬೇಕು. ನಮ್ಮ ಇಲಾಖೆಯಿಂದಲೂ ಶೀಘ್ರ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಾಲ್, ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ರುದ್ರಣ್ಣ, ಶ್ರೀಮತಿ ರತ್ನ, ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ, ಜೈ ವಿಠ್ಠಲ್, ಹರಿಪ್ರಸಾದ ರಾಯ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಲಕ್ಕುಂಡಿಯನ್ನು ಜಾಗತಿಕ ಪಾರಂಪರಿಕ ತಾಣವನ್ನಾಗಿ ರೂಪಿಸಲು ಸರ್ಕಾರ ಬದ್ಧವಾಗಿದೆ: ಸಚಿವ ಎಚ್‌.ಕೆ. ಪಾಟೀಲ್
Next Post ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?: ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News