PRABHAVAA.COM

ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – ಸಿಐಟಿಯು ಬೆಂಬಲ

Bengaluru Urban:

Font size:

ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – ಸಿಐಟಿಯು ಬೆಂಬಲ

ರಾಜ್ಯ ಸಾರಿಗೆ ನೌಕರರಿಗೆ 4 ದಿನಗಳ ಸಾಂಕೇತಿಕ ಪ್ರತಿಭಟನೆ ಘೋಷಣೆ – ಸಿಐಟಿಯು ಬೆಂಬಲ
ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20ರಿಂದ ನಾಲ್ಕು ದಿನಗಳ ಸಾಂಕೇತಿಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಈ ಹೋರಾಟಕ್ಕೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU) ಬೆಂಬಲ ವ್ಯಕ್ತಪಡಿಸಿದೆ.
ಸಿಐಟಿಯು ರಾಜ್ಯ ಸಮಿತಿಯ ಪ್ರಕಟಣೆಯ ಪ್ರಕಾರ, ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಕೆಕೆಆರ್‌ಟಿಸಿ ಹಾಗೂ ಬಿಎಂಟಿಸಿ ನೌಕರರು ಕಳೆದ ಹಲವು ವರ್ಷಗಳಿಂದ ವೇತನ ಪರಿಷ್ಕರಣೆ, ಬಾಕಿ ಇರುವ 38 ತಿಂಗಳ ಅರಿಯರ್ಸ್ ಪಾವತಿ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆದರೂ ಪರಿಹಾರ ದೊರಕಿಲ್ಲ ಎಂದು ಆರೋಪಿಸಲಾಗಿದೆ.
2020 ಜನವರಿ 1ರಿಂದ 2023 ಫೆಬ್ರವರಿ 28ರವರೆಗೆ ಬಾಕಿ ಇರುವ 38 ತಿಂಗಳ ವೇತನ ಬಾಕಿಯನ್ನು 2024 ಜನವರಿಯಿಂದ 2025 ಏಪ್ರಿಲ್ ವರೆಗೆ ಕೇವಲ 15 ತಿಂಗಳ ಕಂತುಗಳಲ್ಲಿ ಪಾವತಿಸಲಾಗಿದ್ದು, ಇನ್ನೂ 12 ತಿಂಗಳ ಬಾಕಿ ಉಳಿದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದಲ್ಲದೆ, ಸರ್ಕಾರವು ಕೇವಲ 12.5 ಶೇಕಡಾ ವೇತನ ಹೆಚ್ಚಳ ಘೋಷಿಸಿರುವುದನ್ನು ನೌಕರರು ತಿರಸ್ಕರಿಸಿದ್ದು, ಕನಿಷ್ಠ 25 ಶೇಕಡಾ ವೇತನ ಪರಿಷ್ಕರಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಸಿಐಟಿಯು ನಾಯಕರು ಮಾತನಾಡಿ, ಸಾರಿಗೆ ನೌಕರರು ದಿನನಿತ್ಯ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿದರು.
ಮೇ 20ರಿಂದ ಆರಂಭವಾಗುವ ಈ ಪ್ರತಿಭಟನೆಗೆ ರಾಜ್ಯದ ವಿವಿಧ ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿರುವುದಾಗಿ ತಿಳಿದುಬಂದಿದೆ.
ಮುಖ್ಯ ಬೇಡಿಕೆಗಳು:
2024 ಜನವರಿ 1ರಿಂದ ಅನ್ವಯವಾಗುವಂತೆ 25% ವೇತನ ಹೆಚ್ಚಳ ಜಾರಿಗೆ ತರಬೇಕು.
ಬಾಕಿ ಇರುವ 38 ತಿಂಗಳ ಅರಿಯರ್ಸ್ ಪಾವತಿಸಬೇಕು.
ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಕೆಕೆಆರ್‌ಟಿಸಿ ಹಾಗೂ ಬಿಎಂಟಿಸಿ ನೌಕರರಿಗೆ ಸಮಾನ ವೇತನ ಹಾಗೂ ಸೌಲಭ್ಯಗಳನ್ನು ಕಲ್ಪಿಸಬೇಕು. ಸುದ್ದಿ ಗೋಷ್ಠಿ ಯಲ್ಲಿ. ಎಸ್ ವರಲಕ್ಷ್ಮಿ, ಪ್ರಧಾನಕಾರ್ಯದರ್ಶಿ, ರೇವಪ್ಪ,ಮಜುನಾಥ ಎಚ್ ಎಸ್, ರಾಘವೇಂದ್ರ,, ಬಿ.ವಿ, ಗಂಡಸಿ ಸದಾನಂದ ಸ್ವಾಮಿ.

Comments

Leave a Comment

Prev Post ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ, ರಾಜ್ಯದಲ್ಲಿ ಉತ್ತಮ ಮಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ: ಡಿ.ಕೆ. ಶಿವಕುಮಾರ್
Next Post ತುಮಕೂರಿನ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ: ವಿಜಯೇಂದ್ರ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News