PRABHAVAA.COM

ಸಿದ್ದರಾಮಯ್ಯ ಆಡಳಿತ ನೆನೆದು ಲಕ್ಷ್ಮೀ ಹೆಬ್ಬಾಳಕರ್ ಭಾವನಾತ್ಮಕ ಪೋಸ್ಟ್

Belagavi:

Font size:

ಸಿದ್ದರಾಮಯ್ಯ ಆಡಳಿತ ನೆನೆದು ಲಕ್ಷ್ಮೀ ಹೆಬ್ಬಾಳಕರ್ ಭಾವನಾತ್ಮಕ ಪೋಸ್ಟ್

ಸಿದ್ದರಾಮಯ್ಯ ಆಡಳಿತ ನೆನೆದು ಲಕ್ಷ್ಮೀ ಹೆಬ್ಬಾಳಕರ್ ಭಾವನಾತ್ಮಕ ಪೋಸ್ಟ್

ಬೆಳಗಾವಿ: ಸ್ಥಾನಗಳು ಬದಲಾಗಬಹುದು, ಆದರೆ ಜನಮನದಲ್ಲಿ ಶಾಶ್ವತವಾಗಿ ಉಳಿಯುವ ನಾಯಕನಿಗೆ ವಿದಾಯ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಮತ್ತು ವ್ಯಕ್ತಿತ್ವ ನೆನೆದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ಮೈಸೂರಿನ ನೆಲದ ಒಂದು ಸಾಮಾನ್ಯ ರೈತ ಕುಟುಂಬದಿಂದ ಹೊರಟು, ಕರ್ನಾಟಕದ ಅತ್ಯುನ್ನತ ಹುದ್ದೆಯಾದ ಮುಖ್ಯಮಂತ್ರಿಯ ಸ್ಥಾನವನ್ನು ಅಲಂಕರಿಸಿದರೂ, ತಮ್ಮ ಅಧಿಕಾರದ ಕೊನೆಯ ಕ್ಷಣದವರೆಗೂ ಬಡವರ, ಹಿಂದುಳಿದವರ, ಶೋಷಿತರ ಮತ್ತು ದುರ್ಬಲರ ಧ್ವನಿಯಾಗಿಯೇ ಉಳಿದವರು ನಮ್ಮೆಲ್ಲರ ಪ್ರೀತಿಯ ನಾಯಕ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಎಂದಿದ್ದಾರೆ.

ಇಂದು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಬಹುದು. ಆದರೆ ಒಂದು ಹುದ್ದೆಯಿಂದ ಇಳಿಯುವುದು ಮತ್ತು ಜನರ ಹೃದಯದಿಂದ ಇಳಿಯುವುದು ಎರಡು ಬೇರೆ ಸಂಗತಿಗಳು. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಸಾಮಾಜಿಕ ನ್ಯಾಯ, ಸಮಾನ ಅವಕಾಶ ಮತ್ತು ಜನಪರ ಆಡಳಿತದ ಹೆಸರಿನಲ್ಲಿ ಅವರು ಬರೆದ ಅಧ್ಯಾಯ ಎಂದೆಂದಿಗೂ ಅಳಿಸಲಾಗದಂತಹದ್ದು. ಅವರು ಕೇವಲ ಮುಖ್ಯಮಂತ್ರಿ ಆಗಿರಲಿಲ್ಲ; ಅನೇಕ ಬಡ ಕುಟುಂಬಗಳ ಭರವಸೆ, ಅಸಂಖ್ಯಾತ ಯುವಕರ ಕನಸು, ಕೋಟ್ಯಂತರ ಕನ್ನಡಿಗರ ಆತ್ಮವಿಶ್ವಾಸವಾಗಿದ್ದರು ಎಂದು ಲಕ್ಷ್ಮೀ ಹೆಬ್ಬಾಳಕರ್ ಸ್ಮರಿಸಿದ್ದಾರೆ.

ನನ್ನ ವೈಯಕ್ತಿಕ ಜೀವನದಲ್ಲೂ ಸಿದ್ದರಾಮಯ್ಯನವರು ಕೇವಲ ರಾಜಕೀಯ ನಾಯಕನಲ್ಲ. ನಾನು ಸಂಕಷ್ಟಗಳನ್ನು ಎದುರಿಸಿದ ಸಂದರ್ಭಗಳಲ್ಲಿ ತಂದೆಯಂತೆ ಬೆನ್ನು ತಟ್ಟಿ ಧೈರ್ಯ ತುಂಬಿದವರು. ನನ್ನ ಮೇಲೆ ನಂಬಿಕೆ ಇಟ್ಟು ಅವಕಾಶ ನೀಡಿದವರು. ಅವರ ಸಂಪುಟದಲ್ಲಿ ಸಚಿವೆಯಾಗಿ ಕೆಲಸ ಮಾಡುವ ಅವಕಾಶ ನನ್ನ ರಾಜಕೀಯ ಬದುಕಿನ ಅತ್ಯಂತ ಅಮೂಲ್ಯ ಅಧ್ಯಾಯವಾಗಿದೆ. ಅವರ ರಾಜಕೀಯ ದೂರದೃಷ್ಟಿ, ನಿರ್ಧಾರ ಸಾಮರ್ಥ್ಯ ಮತ್ತು ಜನರ ನೋವಿಗೆ ಸ್ಪಂದಿಸುವ ಮನಸ್ಸನ್ನು ಹತ್ತಿರದಿಂದ ಕಂಡು ಕಲಿಯುವ ಅವಕಾಶ ನನಗೆ ದೊರೆತದ್ದು ನನ್ನ ಸೌಭಾಗ್ಯ ಎಂದಿದ್ದಾರೆ.

ರಾಜಕೀಯದಲ್ಲಿ ಅಧಿಕಾರ ಮತ್ತು ಹುದ್ದೆಗಳು ಶಾಶ್ವತವಲ್ಲ. ಆದರೆ ಜನರಿಗಾಗಿ ಬದುಕಿದ ನಾಯಕರ ಸೇವೆ, ಅವರ ಆದರ್ಶಗಳು ಮತ್ತು ಆಶೀರ್ವಾದಗಳು ಶಾಶ್ವತವಾಗಿರುತ್ತವೆ. ಸಿದ್ದರಾಮಯ್ಯನವರು ಅಧಿಕಾರದ ಕುರ್ಚಿಯಿಂದ ಎದ್ದಿರಬಹುದು; ಆದರೆ ಅವರು ಕಟ್ಟಿದ ಸಾಮಾಜಿಕ ನ್ಯಾಯದ ಚಳವಳಿ, ಬಡವರ ಪರದ ನಿಲುವು ಮತ್ತು ಜನಪರ ರಾಜಕಾರಣ ಎಂದೆಂದಿಗೂ ನಮ್ಮನ್ನು ಮುನ್ನಡೆಸುತ್ತಲೇ ಇರುತ್ತವೆ.

ಮುಂದಿನ ದಿನಗಳಲ್ಲಿಯೂ ಅವರ ಅನುಭವ, ಮಾರ್ಗದರ್ಶನ ಮತ್ತು ಆಶೀರ್ವಾದ ನಮಗೆ ಶಕ್ತಿಯಾಗಲಿ. ಕರ್ನಾಟಕದ ಅಭಿವೃದ್ಧಿ, ಸಮಾನತೆ ಮತ್ತು ಸೌಹಾರ್ದತೆಯ ಕನಸನ್ನು ಸಾಕಾರಗೊಳಿಸುವ ಅವರ ಹಾದಿಯಲ್ಲಿ ನಾವು ಎಲ್ಲರೂ ದೃಢವಾಗಿ ಸಾಗೋಣ.

ನಾಯಕತ್ವ ಎಂದರೆ ಕೇವಲ ಅಧಿಕಾರವಲ್ಲ; ಜನರ ಹೃದಯದಲ್ಲಿ ಅಚ್ಚಳಿಯದ ಗುರುತು ಮೂಡಿಸುವುದು. ಅಂತಹ ಅಪರೂಪದ ನಾಯಕನಿಗೆ ನನ್ನ ಹೃತ್ಪೂರ್ವಕ ಗೌರವ, ಕೃತಜ್ಞತೆ ಮತ್ತು ಪ್ರೀತಿ.
ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರಿಗೆ ನನ್ನ ನಮನಗಳು ಎಂದು ತಿಳಿಸಿದ್ದಾರೆ.

Comments

Leave a Comment

Prev Post ಘನ ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ಒಂದು “ಮಾದರಿ ರಾಜ್ಯ”ವನ್ನಾಗಿ ಮಾಡಲು ಶ್ರಮಿಸುವಂತೆ ಡಾ. ಶಾಲಿನಿ ರಜನೀಶ್ ಕರೆ
Next Post “ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಡಿ.ಕೆ. ಶಿವಕುಮಾರ್ ಆಯ್ಕೆ – ಜೂನ್ 3ರಂದು ಪ್ರಮಾಣವಚನ!”

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News