PRABHAVAA.COM

ನನ್ನ ಮತ್ತು ಮೋದಿಯವರ ನಡುವಿನ ಬಾಂಧವ್ಯ ಒಂದು ರಾಜ್ಯಸಭೆ ಸ್ಥಾನವನ್ನು ಮೀರಿದ್ದು ಎಂದ ಹೆಚ್.ಡಿ.ದೇವೇಗೌಡರು

Bengaluru Urban:

Font size:

ಸುಮ್ಮನೆ ಕೂರುವುದಿಲ್ಲ, ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದ ಗೌಡರು

ನನ್ನ ಮತ್ತು ಮೋದಿಯವರ ನಡುವಿನ ಬಾಂಧವ್ಯ ಒಂದು ರಾಜ್ಯಸಭೆ ಸ್ಥಾನವನ್ನು ಮೀರಿದ್ದು ಎಂದ ಹೆಚ್.ಡಿ.ದೇವೇಗೌಡರು

ರಾಜ್ಯಸಭೆ ಸ್ಥಾನದ ಬಗ್ಗೆ ನನಗೆ ವ್ಯಾಮೋಹವಿಲ್ಲ, ಅದರ ಬಗ್ಗೆ ನಾನು ಬೇಡಿಕೆ ಇಟ್ಟಿರಲಿಲ್ಲ

ಕಳೆದೆರಡು ದಿನಗಳಿಂದ ನಡೆಯುತ್ತಿರುವ ಅನಗತ್ಯ ಚರ್ಚೆಗೆ ತೆರೆಯದ ಮಾಜಿ ಪ್ರಧಾನಿಗಳು

ಸುಮ್ಮನೆ ಕೂರುವುದಿಲ್ಲ, ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದ ಗೌಡರು

ಬೆಂಗಳೂರು 10 ಜೂನ್ 2026

ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಬಾಂಧವ್ಯವು ರಾಜ್ಯಸಭೆ ಸ್ಥಾನವನ್ನು ಮೀರಿದ್ದು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನೇರ ಮಾತುಗಳಲ್ಲಿ ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕಿಕ್ಕಿರಿದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಮಾಜಿ ಪ್ರಧಾನಿಗಳು.

ಎಪ್ಪತ್ತು ವರ್ಷಗಳ ಸುದೀರ್ಘ ರಾಜಕೀಯ ಜೀವನ ಸವೆಸಿರುವ ನನಗೆ ರಾಜ್ಯಸಭೆ ಸದಸ್ಯನಾಗಬೇಕು ಎಂಬ ವ್ಯಾಮೋಹವಿಲ್ಲ. ಸುದೀರ್ಘ ರಾಜಕೀಯ ಜೀವನದಲ್ಲಿ ಅಧಿಕಾರಕ್ಕಿಂತ ಜನಸೇವೆಯೇ ಮುಖ್ಯವಾಗಿತ್ತು ಎಂಬುದನ್ನು ಅತ್ಯಂತ ವಿನಯಪೂರ್ವಕವಾಗಿ ಹೇಳಲು ಬಯಸುತ್ತೇನೆ ಎಂದರು ಅವರು.

ಕಳೆದೆರಡು ದಿನಗಳಿಂದ ರಾಜ್ಯಸಭೆ ಸ್ಥಾನದ ವಿಚಾರದಲ್ಲಿ ತಮ್ಮ ಬಗ್ಗೆ ನಡೆಯುತ್ತಿರುವ ಚರ್ಚೆಗೆ ತೆರೆ ಎಳೆದ ಮಾಜಿ ಪ್ರಧಾನಿಗಳು; ಈ ಚರ್ಚೆ ಅನಗತ್ಯ. ಕೆಲವರು ಸುಖಾಸುಮ್ಮನೆ ಮಾತಾಡುತ್ತಿದ್ದಾರೆ. ಈ ವಿಚಾರದಲ್ಲಿ ನನಗೆ ಅಪಮಾನವಾಗಿದೆ ಎಂಬ ಹೇಳಿಕೆಗಳಿಗೆ ಯಾವುದೇ ಮಹತ್ವವನ್ನು ನಾನು ನೀಡುವುದಿಲ್ಲ. ಅದರಲ್ಲಿ ಯಾವುದೇ ಅರ್ಥವೂ ಇಲ್ಲ ಎಂದು ಹೇಳಿದರು.

ನನ್ನ ಮತ್ತು ಪ್ರಧಾನಿ ಮೋದಿ ಅವರ ನಡುವೆ ಉತ್ತಮ ಬಾಂಧವ್ಯ ಇದೆ. ಒಂದು ರಾಜ್ಯಸಭೆ ಸ್ಥಾನ ಇಂತಹ ಉತ್ತಮ ಬಾಂಧವ್ಯವನ್ನು ಹಾಳು ಮಾಡುತ್ತದೆ ಎಂದು ಯಾರಾದರೂ ಭಾವಿಸಿದ್ದರೆ ಅದು ಅವರ ಮೂರ್ಖತನ. ಒಂದು ಕಾಲದಲ್ಲಿ ನಾನು ಮೋದಿಯವರನ್ನು ಕಟುವಾಗಿ ಟೀಕಿಸಿದ್ದೆ ಎಂಬುದು ನಿಜ. ಆದರೆ ಕಳೆದ ಹಲವು ವರ್ಷಗಳಿಂದ ನಾನು ಅವರನ್ನು ಬಹಳಷ್ಟು ಅರ್ಥ ಮಾಡಿಕೊಂಡಿದ್ದೇನೆ. ಅವರಲ್ಲಿ ವಿಶ್ವಾಸ ಇರಿಸಿದ್ದೇನೆ. ಅವರ ಒಳ್ಳೆಯ ಕೆಲಸಗಳನ್ನು ಹೃದಯಪೂರ್ವಕವಾಗಿ ಶ್ಲಾಘಿಸಿದ್ದೇನೆ ಎಂದು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು.

ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆಗಳಿಗೆ ಅತೀವ ಬೇಸರ ವ್ಯಕ್ತಪಡಿಸಿದ ದೇವೇಗೌಡರು; ನಾನು ಸುಮ್ಮನೆ ಕೂರುವುದಿಲ್ಲ. ಪಕ್ಷದ ಬಲವರ್ಧನೆಗೆ ನನ್ನ ಶಕ್ತಿ ಮೀರಿ‌ ಕೆಲಸ‌ ಮಾಡುತ್ತೇನೆ. ರಾಜ್ಯ ಮತ್ತು ದೇಶದ ವಿಚಾರಗಳನ್ನು ಸಂಸತ್ತಿನ ಒಳಗೆ ಮತ್ತು ಹೊರಗೆಯು ನೇರವಾಗಿ ಮಾತನಾಡಿದ್ದೇನೆ ಎಂದು ಹೇಳಿದರು.

ನರೇಂದ್ರ ಮೋದಿ ಅವರ ಬಗ್ಗೆ ಭಾರತ ಅಷ್ಟೇ ಅಲ್ಲ ಜಗತ್ತಿನ ಎಲ್ಲಾ ಭಾಗಗಳಲ್ಲಿಯೂ ಗೌರವಭಾವ ಇದೆ. ಅದರಿಂದ ರಾಷ್ಟ್ರಕೂ ಒಳ್ಳೆಯದಾಗುತ್ತಿದೆ. ಅವರ ಮಟ್ಟಕ್ಕೆ ಯಾವ ನಾಯಕನು ಬೆಳೆಯಲು ಸಾಧ್ಯವಿಲ್ಲ. ಅವರೊಂದಿಗೆ ನಾನು ಹೊಂದಿರುವ ಬಾಂಧವ್ಯ ವೈಯಕ್ತಿಕ ಮಟ್ಟದ್ದು. ಅದನ್ನು ರಾಜಕೀಯ ಕಾರಣಕ್ಕಾಗಿ ಕಳೆದುಕೊಳ್ಳಲು ಬಯಸುವುದಿಲ್ಲ. ನಾನು ಸಂಸತ್ತಿನಲ್ಲಿ ಇರಲಿ ಇಲ್ಲರಲಿ ಮೋದಿ ಅವರ ನಡುವಿನ ಸಂಬಂಧಕ್ಕೆ ದಕ್ಕೆ ಬರುವುದಿಲ್ಲ. ಕೊನೆಯವರೆಗೂ ನಮ್ಮ ಸಂಬಂಧ ಹೀಗೆ ಇರುತ್ತದೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟಪಡಿಸಿದರು.

ತಮ್ಮ ರಾಜಕೀಯ ಜೀವನದ ಆರಂಭದ ದಿನಗಳನ್ನು ಸ್ಮರಿಸಿದ ದೇವೇಗೌಡರು, 'ನಾನು ರಾಜಕಾರಣಕ್ಕೆ ಬಂದು ಎಷ್ಟು ವರ್ಷವಾಯಿತು ಎಂದು ಒಮ್ಮೆ ಯೋಚಿಸಿ. 1954-55 ರಿಂದಲೇ ನಾನು ಸಕ್ರಿಯ ರಾಜಕಾರಣದಲ್ಲಿದ್ದೇನೆ. ಅಂದು ಕೇವಲ ಗುತ್ತಿಗೆ ಕೆಲಸ ಮಾಡುತ್ತಿದ್ದ ನಾನು, ಅದರ ಜೊತೆಜೊತೆಗೆ ಜನರ ಕಷ್ಟಗಳಿಗೆ ಸ್ಪಂದಿಸುತ್ತಾ ರಾಜಕೀಯಕ್ಕೆ ಬಂದವನು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಜನರ ಮಧ್ಯೆಯೇ ಇದ್ದೇನೆ. ಹಾಗಾಗಿ, ಇಂದು ಒಂದು ಸ್ಥಾನಕ್ಕಾಗಿ ನಾನು ಹಾತೊರೆಯುವ ಅಗತ್ಯವಿಲ್ಲ ಎಂದರು.

ರಾಜ್ಯಸಭೆ ಸ್ಥಾನ ತಪ್ಪಿಸಿ ಬಿಜೆಪಿ ದೇವೇಗೌಡರಿಗೆ ಅಪಮಾನ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಪದೇಪದೇ ದೂರುತ್ತಿದ್ದಾರಲ್ಲ ಎನ್ನುವ ಪ್ರಶ್ನೆಗೆ ಖಡಕ್ಕಾಗಿ ಉತ್ತರಿಸಿದ ದೇವೇಗೌಡರು; ಮೋದಿ ಅವರ ವಿಶ್ವಾಸದ ಮುಂದೆ ಇವರೆಲ್ಲರ ಹೇಳಿಕೆಗಳು ಟೀಕೆ ಟಿಪ್ಪಣಿಗಳು ಬಹಳ ಸಣ್ಣವು ಎಂದರು.

ಕೆಲವರು ನನ್ನ ಬಗ್ಗೆ ಕಾಳಜಿಯಿಂದ ಮಾತನಾಡುತ್ತಿದ್ದಾರೆ. ಬಹಳ ಅಪಮಾನವಾಯಿತು ಎಂದು ನೋವು ವ್ಯಕ್ತಪಡಿಸುತ್ತಿದ್ದಾರೆ. ಆದರೆ, ನನ್ನ ಹೆಸರು ಪರಿಗಣನೆಗೆ ಬರುತ್ತದೆ ಎಂದು ಮಾಧ್ಯಮಗಳಲ್ಲಿ ಪ್ರಚಾರವಾಗಿದ್ದು ಬಿಟ್ಟರೆ, ನಾನು ಆ ಬಗ್ಗೆ ಎಲ್ಲಿಯೂ ನನಗೆ ರಾಜ್ಯಸಭೆ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿರಲಿಲ್ಲ. ಈ ಬಗ್ಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರು ಆಗಿರುವ ಕುಮಾರಸ್ವಾಮಿಯವರು ಸ್ಪಷ್ಟವಾಗಿಯೇ ಹೇಳಿದ್ದಾರೆ. ಇದರಲ್ಲಿ ಮತ್ತೊಮ್ಮೆ ನಾನು ಹೇಳುವಂಥದ್ದು ಏನು ಇಲ್ಲ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟಪಡಿಸಿದರು.

ಆದರೆ ಕಾಂಗ್ರೆಸ್ ಪಕ್ಷದ ಸ್ನೇಹಿತರು ಮಾತ್ರ ಇದನ್ನೇ ದೊಡ್ಡದಾಗಿ ಬಿಂಬಿಸಿ, ಅದಕ್ಕೆ ರಾಜಕೀಯ ಬಣ್ಣ ಲೇಪಿಸಲು ಪ್ರಯತ್ನ ಮಾಡುತ್ತಿದ್ದಾರೆ. ಒಂದು ವೇಳೆ ರಾಜ್ಯಸಭೆಗೆ ಸ್ಪರ್ಧಿಸುವ ಆಸಕ್ತಿ ನನಗೆ ಇದ್ದಿದ್ದೇ ಆದಲ್ಲಿ ಕಳೆದ ಮೇ 26ರಂದು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕಾಗಿ ನವದೆಹಲಿಗೆ ಹೋಗಿದ್ದಾಗ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದೆ. ನಾನು ಯಾರೊಂದಿಗೂ ಈ ಬಗ್ಗೆ ಮಾತುಕತೆ ನಡೆಸಲಿಲ್ಲ. ಅಂದಿನ ಕಾರ್ಯಕ್ರಮ ಮುಗಿದ ಕೂಡಲೇ ನಾನು ಬೆಂಗಳೂರಿಗೆ ವಾಪಸ್ ಬಂದೆ ಎಂದು ಮಾಧ್ಯಮಗಳಿಗೆ ಮಾಜಿ ಪ್ರಧಾನಿಗಳು ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷ ನೀಡುತ್ತಿರುವ ಹೇಳಿಕೆಗಳು ಮತ್ತು ಮಾಡುತ್ತಿರುವ ಟೀಕೆಗಳ ಬಗ್ಗೆ ಉತ್ತರಿಸಲು ನನಗೆ ಆಸಕ್ತಿ ಇಲ್ಲ ಎಂದ ದೇವೇಗೌಡರು; ಪಕ್ಷಕ್ಕಾಗಿ ಮತ್ತು ಕಾರ್ಯಕರ್ತರ ಸಲುವಾಗಿ ನಾನು ಕೆಲಸ ಮಾಡಲು ಸದಾ ಮುಂದೆ ಇರುತ್ತೇನೆ. ಈಗಲೂ ನಿಮ್ಮೆಲ್ಲರನ್ನು (ಮಾಧ್ಯಮ ಮಿತ್ರರು) ಭೇಟಿಯಾಗಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದರು.

ಇವತ್ತು ಒಂದು ವಿಷಯ ಇಟ್ಟುಕೊಂಡು ನನ್ನ ಬಗ್ಗೆ ಇಷ್ಟೆಲ್ಲಾ ಅನುಕಂಪದ ನಾಟಕ ಆಡುತ್ತಿರುವ ಕಾಂಗ್ರೆಸ್ ನಾಯಕರು ಹಿಂದೆಲ್ಲಾ ನನ್ನ ವಿಚಾರದಲ್ಲಿ ಹೇಗೆಲ್ಲಾ ನಡೆದುಕೊಂಡರು ಎಂಬುದು ಗೊತ್ತಿದೆ. ಇದರ ಬಗ್ಗೆ ಹೇಳುತ್ತಾ ಹೋದರೆ ಬಹಳಷ್ಟು ಹೇಳಬಹುದು. ನನಗೆ ಅದರ ಬಗ್ಗೆ ಆಸಕ್ತಿ ಇಲ್ಲ ಎಂದು ಅವರು ತಿಳಿಸಿದರು.

ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕರಾದ ಕೆ.ಎ.ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ದೊಡ್ಡನಗೌಡ ಪಾಟೀಲ್, ಜೆಡಿಎಸ್ ರಾಜ್ಯ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಚಂದನ್ ಸೇರಿದಂತೆ ಪಕ್ಷದ ಹಲವಾರು ಮುಖಂಡರು ಹಾಜರಿದ್ದರು.

Comments

Leave a Comment

Prev Post ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಪ್ರಜಾಪ್ರಭುತ್ವದ ಮೇಲೆ ದಾಳಿ”ಸಿದ್ದರಾಮಯ್ಯ ಆರೋಪ:
Next Post ನೂರು ದಿನಗಳಲ್ಲಿ ಕೆಐಎಡಿಬಿ ಸಂಪೂರ್ಣ ಡಿಜಿಟಲೀಕರಣ: ಎಂ ಬಿ ಪಾಟೀಲ ಕಟ್ಟುನಿಟ್ಟಿನ ಗಡುವು

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News