PRABHAVAA.COM

ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶೀಘ್ರವೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಬಿ.ವೈ.ವಿಜಯೇಂದ್ರ

Bengaluru Urban:

Font size:

ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶೀಘ್ರವೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಬಿ.ವೈ.ವಿಜಯೇಂದ್ರ

ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶೀಘ್ರವೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿನ ಅಡ್ಡ ಮತದಾನದ ಆರೋಪ ಕುರಿತಂತೆ ಅತಿ ಶೀಘ್ರದಲ್ಲೇ ಧರ್ಮಸ್ಥಳದ ಶ್ರೀ ಕ್ಷೇತ್ರದಲ್ಲಿ ನಮ್ಮ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿರುವುದಾಗಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಅವರಿಗ ಸಭೆ ಕರೆಯುವ ಸಂಬಂಧ ಮಾತನಾಡುವೆ; ನಾವೆಲ್ಲರೂ ದೇವರನ್ನು ನಂಬುವವರು. ಧರ್ಮಸ್ಥಳದಲ್ಲಿ ಸಭೆ ಕರೆದು ತಾಯಿಗೆ ದ್ರೋಹ ಮಾಡಿದ ಶಾಸಕರ ಮತ್ತು ಸತ್ಯದ ಬಗ್ಗೆ ಗೊತ್ತಾಗಬೇಕಿದೆ. ಶ್ರೀ ಕ್ಷೇತ್ರದಲ್ಲಿ ತೀರ್ಮಾನ ಆಗಬೇಕೆಂದು ನಿರ್ಧಾರ ಮಾಡಿದ್ದೇನೆ ಎಂದು ವಿವರಿಸಿದರು.
ಕಾರ್ಯಕರ್ತರಿಗೆ ನೋವಾಗುವುದು ಸಹಜ. ಅಡ್ಡ ಮತದಾನವನ್ನು ನನ್ನ ಮನಸಾಕ್ಷಿ ಒಪ್ಪುತ್ತಿಲ್ಲ; ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಟೀಕೆಗಳ ಬಗ್ಗೆ ನಾನು ಕೂಡ ಗಮನಿಸಿದ್ದೇನೆ. ಇದನ್ನೇ ನೆಪ ಮಾಡಿಕೊಂಡು ಪರೋಕ್ಷ ದಾಳಿ ಮಾಡುವ ಕೆಲಸ ಹಾಗೂ ಕುತಂತ್ರ ನಡೆಯುತ್ತಿದೆ ಎಂದು ಆಕ್ಷೇಪಿಸಿದರು. ಈ ಸಂಬಂಧ ಸತ್ಯಾಸತ್ಯತೆಯನ್ನು ನಾವು ಜನರ ಮುಂದೆ ಇಡಬೇಕಾಗಿದೆ. ಪಕ್ಷದ ಗೌರವ ಉಳಿಸಬೇಕಿದೆ. ಕಾರ್ಯಕರ್ತರಿಗೆ ನೆಮ್ಮದಿ ನೀಡಬೇಕಿದೆ ಎಂದು ಅವರು ನುಡಿದರು.
ಮೊನ್ನೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದಲೂ 4 ಅಡ್ಡ ಮತದಾನ ಆಗಿರುವ ಬಗ್ಗೆ ಚರ್ಚೆ ಮಾಧ್ಯಮಗಳಲ್ಲಿ ನಡೆಯುತ್ತಿದೆ. ಪತ್ರಿಕೆಗಳಲ್ಲೂ ಬಂದಿದೆ. ಸಾಮಾಜಿಕ ಜಾಲತಾಣದಲ್ಲೂ ಅತಿ ಹೆಚ್ಚು ಚರ್ಚೆ ಆಗುತ್ತಿದೆ ಎಂದರು. ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ನಮ್ಮ ಶಾಸಕರ ನಡವಳಿಕೆ ಬಗ್ಗೆ ಬಹಳ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯ 63 ಶಾಸಕರ ಬಗ್ಗೆ ಅನುಮಾನ ಹುಟ್ಟುವಂತಾಗಿದೆ ಎಂದು ತಿಳಿಸಿದರು.
ರಾಜ್ಯದ ಅಧ್ಯಕ್ಷನಾಗಿ ಈ ಬೆಳವಣಿಗೆ ನನಗೂ ಸಾಕಷ್ಟು ಬೇಸರ ತಂದಿದೆ. ನಾನು ಬೆಳಿಗ್ಗೆ 3 ಗಂಟೆಗೇ ಎದ್ದು ಕೂತಿದ್ದೇನೆ. ಇದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕೆಂಬ ವಿಚಾರವನ್ನು ಮುಂದಿಟ್ಟುಕೊಂಡು ನಿನ್ನೆ ಬೆಳಿಗ್ಗೆ 7 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷರಿಗೆ ದೂರವಾಣಿ ಕರೆ ಮಾಡಿದ್ದೇನೆ ಎಂದು ವಿಜಯೇಂದ್ರ ಅವರು ತಿಳಿಸಿದರು. ನಾನು ಮತ್ತು ಆರ್.ಅಶೋಕ್ ಅವರು ದೆಹಲಿಗೆ ಹೋಗಲಿದ್ದೇವೆ ಎಂದ ಅವರು, ಮತ್ತೊಂದು ಕಡೆ ಸತ್ಯಶೋಧನಾ ಸಮಿತಿ ಮಾಡಿದ್ದೇವೆ. ಸಿ.ಟಿ.ರವಿ, ಮಹೇಶ್ ಟೆಂಗಿನಕಾಯಿ, ಮಾಜಿ ಸಚಿವ ಕೊಳ್ಳೇಗಾಲ ಮಹೇಶ್ ಅವರು ಈ ಸಮಿತಿಯಲ್ಲಿದ್ದಾರೆ ಎಂದರು.
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ನಾವು ಶಾಸಕರಾಗಿ ಗೆಲ್ಲಲು ಪಕ್ಷದ ಆಶೀರ್ವಾದವಿದೆ. ಕಾರ್ಯಕರ್ತರ ಪರಿಶ್ರಮವೂ ಇದೆ. ಇದರಿಂದ ಕಾರ್ಯಕರ್ತರಿಗೆ ಆಘಾತ, ನೋವಾಗಿದೆ. ಮತದಾರರು ಇವತ್ತು ನರೇಂದ್ರ ಮೋದಿಜೀ ಅವರನ್ನು ನೋಡಿಕೊಂಡು ಮತ ಕೊಟ್ಟಿದ್ದಾರೆ. ನಮ್ಮ ಯೋಗ್ಯತೆ ಒಂದು ಕಡೆ ಬದಿಗಿಡಿ. ಶಾಸಕರು ಯಾರೆಷ್ಟೇ ದೊಡ್ಡವರಾಗಿದ್ದರೂ ಗೌಪ್ಯ ಮತದಾನ ನಡೆದ ಕಾರಣ ನನ್ನನ್ನೂ ಸೇರಿ 63 ಶಾಸಕರನ್ನೂ ಅನುಮಾನ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು. ಪುಕ್ಸಟ್ಟೆ ಮತ ಹಾಕಿರಲು ಸಾಧ್ಯ ಇಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆದ್ದು ತೋರಿಸಲಿ..
ಬಿಜೆಪಿಯಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕು; ವಿಪಕ್ಷ ನಾಯಕನ ಸ್ಥಾನವನ್ನು ಯತ್ನಾಳ್‍ರಿಗೆ ಕೊಡಬೇಕೆಂಬ ಕುಮಾರ್ ಬಂಗಾರಪ್ಪ ಅವರ ಹೇಳಿಕೆ ಕುರಿತಂತೆ ಪತ್ರಕರ್ತರು ಗಮನ ಸೆಳೆದರು. ಯಾರಿಗೆ ಏನು ಉತ್ತರ ಕೊಡಬೇಕೋ ಕೊಡುತ್ತೇನೆ. ಪುಕ್ಸಟ್ಟೆ ಹೇಳಿಕೆ ಕೊಡುವವರು ತಮ್ಮ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಬಂದು ನಿಂತುಕೊಳ್ಳಲಿ. ವಿಧಾನಸಭಾ ಚುನಾವಣೆ ದೂರದ ಮಾತು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ನಿಂತು ಗೆದ್ದು ತೋರಿಸಲಿ. ಆಮೇಲೆ ಅದರ ಬಗ್ಗೆ ಮಾತನಾಡುವೆ ಎಂದು ಸವಾಲೆಸೆದರು.

Comments

Leave a Comment

Prev Post ಯೋಗವು ಆರೋಗ್ಯಕರ ಮತ್ತು ಸಮತೋಲಿತ ಜೀವನಕ್ಕೆ ಅತ್ಯಂತ ವಿಶ್ವಾಸಾರ್ಹ ಸಾಧನ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
Next Post ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಾಯ, ಜನಶಕ್ತಿ ಮತ್ತು ಸಂಕಲ್ಪದ ಸಂಭ್ರಮ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News