PRABHAVAA.COM

ಮುಖ್ಯಮಂತ್ರಿಗಳ ಪಂಥಾಹ್ವಾನಕ್ಕೆ ಕುಮಾರಣ್ಣ ಸಿದ್ಧ: ಬೈರಮಂಗಲ ಸರ್ಕಲ್‌ಗೆ ಬನ್ನಿ ರೈತರೇ ಅಂತಿಮ ತೀರ್ಪುಗಾರರು; ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

Ramanagara:

Font size:

ಮುಖ್ಯಮಂತ್ರಿಗಳ ಪಂಥಾಹ್ವಾನಕ್ಕೆ ಕುಮಾರಣ್ಣ ಸಿದ್ಧ: ಬೈರಮಂಗಲ ಸರ್ಕಲ್‌ಗೆ ಬನ್ನಿ ರೈತರೇ ಅಂತಿಮ ತೀರ್ಪುಗಾರರು; ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಮುಖ್ಯಮಂತ್ರಿಗಳ ಪಂಥಾಹ್ವಾನಕ್ಕೆ ಕುಮಾರಣ್ಣ ಸಿದ್ಧ: ಬೈರಮಂಗಲ ಸರ್ಕಲ್‌ಗೆ ಬನ್ನಿ ||

|| ವಿಧಾನಸೌಧದ AC ಕೊಠಡಿಯಲ್ಲಿ ಕಾಫಿ ಕುಡಿಯುತ್ತಾ ರೈತರ ಭೂಮಿ ಬಗ್ಗೆ ತೀರ್ಮಾನ ಬೇಡ ||

|| ರೈತರೇ ಅಂತಿಮ ತೀರ್ಪುಗಾರರು; ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ||

*

ರಾಮನಗರ, ಹಾರೋಹಳ್ಳಿ: ಬಿಡದಿ ಟೌನ್‌ಶಿಪ್ ಯೋಜನೆ ವಿಧಾನಸೌಧದ ನಾಲ್ಕು ಗೋಡೆಗಳ ಮಧ್ಯೆ ಕೂತು ಚರ್ಚಿಸುವ ವಿಷಯವಲ್ಲ. ಇದು ರೈತರ ಬದುಕಿನ ಪ್ರಶ್ನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹಾರೋಹಳ್ಳಿ ಹೋಬಳಿಯ ದೊಡ್ಡಬಿದರಕಲ್ ಗ್ರಾಮದ ಊರ ಹಬ್ಬಕ್ಕೆ ಭೇಟಿ ನೀಡಿದ್ದ ವೇಳೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸನ್ಮಾನ್ಯ ಕುಮಾರಣ್ಣ ಅವರು ಸ್ಪಷ್ಟವಾಗಿ ಹೇಳಿದ್ದಾರೆ - ಚರ್ಚೆ ಬೇಕಾದರೆ ಬೈರಮಂಗಲ ಸರ್ಕಲ್‌ಗೆ ಬನ್ನಿ. ಬಾಧಿತ ರೈತರ ಸಮ್ಮುಖದಲ್ಲೇ ಬಹಿರಂಗವಾಗಿ ಚರ್ಚೆ ಮಾಡೋಣ ಎಂದು ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ" ಎಂದು ನಿಖಿಲ್ ತಿಳಿಸಿದರು.

ರೈತರೇ ಅಂತಿಮ ತೀರ್ಪುಗಾರರು

ಈ ವಿವಾದಕ್ಕೆ ಇತ್ಯಾರ್ಥವಾಗಬೇಕಾದರೆ ಒಂದೇ ಮಾರ್ಗ. ಮುಖ್ಯಮಂತ್ರಿಗಳೇ ಸ್ಥಳಕ್ಕೆ ಬಂದು ರೈತರೊಂದಿಗೆ ನೇರವಾಗಿ ಚರ್ಚೆ ಮಾಡಬೇಕು. ಈ ಟೌನ್‌ಶಿಪ್ ಯೋಜನೆಗೆ ಸ್ಥಳೀಯ ರೈತರು ಸಹಮತ ವ್ಯಕ್ತಪಡಿಸಿದರೆ ಸರ್ಕಾರ ಮುಂದುವರಿಯಲಿ. ವಿರೋಧ ವ್ಯಕ್ತಪಡಿಸಿದರೆ, ಮಾನ್ಯ ಮುಖ್ಯಮಂತ್ರಿಗಳೇ ಜನರಿಗೆ ಉತ್ತರ ನೀಡಬೇಕು" ಎಂದು ನಿಖಿಲ್ ಆಗ್ರಹಿಸಿದರು.

ಇಲ್ಲಿಯವರೆಗೆ ಯಾವೊಬ್ಬ ಜನಪ್ರತಿನಿಧಿಯೂ, ಜಿಲ್ಲಾಧಿಕಾರಿಯೂ ಸ್ಥಳಕ್ಕೆ ಬಂದು ಸರ್ವೇ ಮಾಡಿಲ್ಲ. ಸ್ಥಳೀಯ ರೈತರ ಜೊತೆ ಒಂದೇ ಒಂದು ಬಾರಿಯೂ ಚರ್ಚೆ ಮಾಡಿಲ್ಲ. ರೈತರನ್ನು ಸಂಪೂರ್ಣ ಕತ್ತಲಲ್ಲಿಟ್ಟು ಯೋಜನೆ ರೂಪಿಸಲಾಗುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

ರೈತರ ಒಗ್ಗಟ್ಟನ್ನು ಒಡೆಯಲು ಸರ್ಕಾರದ ಸಂಚು

ರಾಜ್ಯ ಸರ್ಕಾರ ರೈತರ ಒಗ್ಗಟ್ಟನ್ನು ಒಡೆಯಲು ವ್ಯವಸ್ಥಿತವಾಗಿ ಸಂಚು ರೂಪಿಸಿದೆ. 25 ಕೋಟಿ ರೂ. ಇಟ್ಟುಕೊಂಡು, ಒಟ್ಟು 755 ಬಾಧಿತ ರೈತರ ಪೈಕಿ ಕೇವಲ 7 ಜನ ರೈತರ ಬೆಂಬಲ ಪಡೆದುಕೊಂಡು ಇಡೀ ಟೌನ್‌ಶಿಪ್ ಯೋಜನೆಗೆ ಅನುಮೋದನೆ ಪಡೆಯಲಾಗಿದೆ. ದೇಶದ ಇತಿಹಾಸದಲ್ಲೇ ಇಂತಹ ಘಟನೆ ಇದೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಜೆಡಿಎಸ್ ಮುಖಂಡರು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.

Comments

Leave a Comment

Prev Post ಕಾವೇರಿ ಸಂರಕ್ಷಣೆಗಾಗಿ ಒಗ್ಗಟ್ಟಿನ ಹೋರಾಟಕ್ಕೆ ಕರ್ನಲ್ ಸಿ.ಪಿ. ಮುತ್ತಣ್ಣರ ಕರೆ
Next Post ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲು ತೇಜಸ್ವಿ ಸೂರ್ಯ ಆಗ್ರಹ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News