PRABHAVAA.COM

ಎಂ.ಸಿ.ಸಿ.ಬ್ಯಾಂಕ್ ಕಾರ್ಯವ್ಯಾಪ್ತಿ ರಾಜ್ಯಕ್ಕೆ ವಿಸ್ತರಣೆ: ಅಧ್ಯಕ್ಷ ಅನಿಲ್ ಲೋಬೋ

Dakshina Kannada:

Font size:

ಎಂಸಿಸಿ ಬ್ಯಾಂಕ್: ದೇರಳಕಟ್ಟೆ ಮತ್ತು ಕಟಪಾಡಿಯಲ್ಲಿ ಹೊಸ ಶಾಖೆಗಳ ಉದ್ಘಾಟನೆ, 1,535 ಕೋಟಿ ರೂ. ವ್ಯವಹಾರ ಮೈಲಿಗಲ್ಲು

From Jayaram Udupi

ಮಂಗಳೂರು:

114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ನ 22ನೇ ಶಾಖೆ ದೇರಳಕಟ್ಟೆಯಲ್ಲಿ ಜೂನ್ 28ರಂದು ಹಾಗೂ 23ನೇ ಶಾಖೆ ಉಡುಪಿಯ ಕಟಪಾಡಿಯಲ್ಲಿ ಆಗಸ್ಟ್ 2ರಂದು ಉದ್ಘಾಟನೆಯಾಗಲಿದೆ.

ದೇರಳಕಟ್ಟೆ ಶಾಖೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಇದೇ ಸಂದರ್ಭದಲ್ಲಿ ಬ್ಯಾಂಕಿನ 16ನೇ ಎಟಿಎಂ ಕೂಡ ಕಾರ್ಯಾರಂಭ ಮಾಡಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದರು .

ನಗರದ ಎಂಸಿಸಿ ಬ್ಯಾಂಕಿನ‌ ಪ್ರಧಾನ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , 2025-26ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ಗಮನಾರ್ಹ ಸಾಧನೆ ದಾಖಲಿಸಿದ್ದು, ಒಟ್ಟು ವ್ಯವಹಾರ ವಹಿವಾಟು 22.89 ಶೇಕಡಾ ಏರಿಕೆಯೊಂದಿಗೆ 1,535 ಕೋಟಿ ರೂ. ಮೈಲಿಗಲ್ಲು ತಲುಪಿದೆ . ಬ್ಯಾಂಕಿನ ನಿವ್ವಳ ಮೌಲ್ಯ 83.76 ಕೋಟಿ ರೂ.ಗಳಿಂದ 91.80 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಎನ್‌ಆರ್‌ಐ ಗ್ರಾಹಕರ ಬೆಂಬಲ ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದರು .

2018ರಲ್ಲಿ ಪ್ರಸ್ತುತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ಬಳಿಕ ಬ್ಯಾಂಕ್ ವೇಗದ ಬೆಳವಣಿಗೆಯ ಹಾದಿಯಲ್ಲಿದ್ದು, ಠೇವಣಿಗಳು 304 ಕೋಟಿ ರೂ.ಗಳಿಂದ 876 ಕೋಟಿ ರೂ.ಗಳಿಗೆ, ಸಾಲ ಮತ್ತು ಮುಂಗಡಗಳು 191 ಕೋಟಿ ರೂ.ಗಳಿಂದ 657 ಕೋಟಿ ರೂ.ಗಳಿಗೆ ಹಾಗೂ ಷೇರು ಬಂಡವಾಳ 13 ಕೋಟಿ ರೂ.ಗಳಿಂದ 34 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಒಟ್ಟು ವ್ಯವಹಾರ ವಹಿವಾಟು 496 ಕೋಟಿ ರೂ.ಗಳಿಂದ 1,535 ಕೋಟಿ ರೂ.ಗಳಿಗೆ ತಲುಪಿದ್ದು, 209 ಶೇಕಡಾ ಬೆಳವಣಿಗೆ ದಾಖಲಿಸಿದೆ ಎಂದರು.

ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಸಂಪೂರ್ಣ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲಾಗಿದ್ದು, ಕೋರ್ ಬ್ಯಾಂಕಿಂಗ್ ತಂತ್ರಜ್ಞಾನದ ಮೂಲಕ ಗ್ರಾಹಕರಿಗೆ ಸೇವೆ ಒದಗಿಸಲಾಗುತ್ತಿದೆ. ಖಾಸಗಿ ಹಾಗೂ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಸಮಾನವಾದ ವಿವಿಧ ಹಣಕಾಸು ಉತ್ಪನ್ನಗಳು ಮತ್ತು ಸೇವೆಗಳನ್ನು ಬ್ಯಾಂಕ್ ನೀಡುತ್ತಿದೆ ಎಂದು ಅವರು ತಿಳಿಸಿದರು.

ಮೊರ್ಗನ್ಸ್ ಗೇಟ್ ಶಾಖೆಯನ್ನು ಜುಲೈ 25ರಂದು, ಮೂಡಬಿದಿರೆ ಶಾಖೆಯನ್ನು ಆಗಸ್ಟ್ 22ರಂದು ಹೊಸ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು. ಕಾರ್ಕಳ ಶಾಖೆಯನ್ನು ಆಗಸ್ಟ್ 26ರಂದು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸುವ ಯೋಜನೆಯೂ ಇದೆ ಎಂದು ತಿಳಿಸಿದರು.

ಎಂಸಿಸಿ ಬ್ಯಾಂಕ್ ಶಿಕ್ಷಣ ಸಾಲ, ಎಂಎಸ್‌ಎಂಇ ಸಾಲ, ವಾಹನ ಸಾಲ, ಗೃಹ ಸಾಲ ಹಾಗೂ ಚಿನ್ನದ ಸಾಲ ಸೇರಿದಂತೆ ವಿವಿಧ ಹಣಕಾಸು ಸೇವೆಗಳನ್ನು ಒದಗಿಸುತ್ತಿದ್ದು, ಉಚಿತ ಎಟಿಎಂ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೇವೆಗಳನ್ನೂ ನೀಡುತ್ತಿದೆ. ಬ್ಯಾಂಕಿನ ಠೇವಣಿಗಳು ಡಿಐಸಿಜಿಸಿ ವಿಮಾ ವ್ಯಾಪ್ತಿಯಲ್ಲಿವೆ ಎಂದು ಅವರು ವಿವರಿಸಿದರು.

Comments

Leave a Comment

Prev Post ಸದಾ ಸುದ್ದಿಯಲ್ಲಿರಲು ಆರೆಸ್ಸೆಸ್ ವಿರುದ್ಧ ಟೀಕಿಸುವ ಪ್ರಿಯಾಂಕ್ ಖರ್ಗೆ: ಶೋಭಾ ಕರಂದ್ಲಾಜೆ
Next Post ಶಾಲಾ ಶಿಕ್ಷಣ ಇಲಾಖೆಯ ಕಾಳಜಿ — ವಿದ್ಯಾರ್ಥಿಗಳ ಪಾದರಕ್ಷೆ ವಿತರಣೆ ಪಾರದರ್ಶಕವಾಗಿ, ಗೌರವದ ಹೆಜ್ಜೆ 2026–27

ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟಕ್ಕೆ ₹10.61 ಕೋಟಿ ಲಾಭ.

ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟಕ್ಕೆ ₹10.61 ಕೋಟಿ ಲಾಭ.

ಬಾಗ್ಮನೆ ಸಾಧನೆ ದೇಶವೇ ಹೆಮ್ಮೆಪಡುವಂತದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಗ್ಮನೆ ಸಾಧನೆ ದೇಶವೇ ಹೆಮ್ಮೆಪಡುವಂತದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

₹6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

* ಮೂರು ವರ್ಷಗಳಲ್ಲಿ ವೈಮಾಂತರಿಕ್ಷ, ರಕ್ಷಣೆ, ಎಂಆರ್‌ಒ, ತಯಾರಿಕಾ ಕ್ಲಸ್ಟರ್‌ ಅಭಿವೃದ್ಧಿ * 20 ಸಾವಿರ ಪ್ರತ್ಯಕ್ಷ ಹಾಗೂ 54 ಸಾವಿರ ಪರೋಕ್ಷ ಉದ್ಯೋಗ ಅವಕಾಶಗಳು ಸೃಷ್ಟಿ

Read all News