PRABHAVAA.COM

ದಲಿತರಿಗೆ ಸ್ವತಂತ್ರ ರಾಜಕೀಯ ಪಕ್ಷದ ಅಗತ್ಯ ವಿದೆ; ಚಿಂತಕ ಕೋಟಗಾನಹಳ್ಳಿ ರಾಮಯ್ಯ.

Bengaluru Urban:

Font size:

ದಲಿತರಿಗೆ ಸ್ವತಂತ್ರ ರಾಜಕೀಯ ಪಕ್ಷದ ಅಗತ್ಯ ವಿದೆ; ಚಿಂತಕ ಕೋಟಗಾನಹಳ್ಳಿ ರಾಮಯ್ಯ.

ದಲಿತರಿಗೆ ಸ್ವತಂತ್ರ ರಾಜಕೀಯ ಪಕ್ಷದ ಅಗತ್ಯ ವಿದೆ; ಚಿಂತಕ ಕೋಟಗಾನಹಳ್ಳಿ ರಾಮಯ್ಯ..

ಬೆಂಗಳೂರು ಜೂನ್ 25; ದಲಿತರ ತಮ್ಮ ವಿಮೋಚನೆಗಾಗಿ ತಮ್ಮ ಹಕ್ಕುಗಳನ್ನು ಪಡೆಯಲು ಸ್ವತಂತ್ರ ರಾಜಕೀಯ ಪಕ್ಷವನ್ನು ಸ್ಥಾಪಿಸಿಕೊಳ್ಳುವುದು ಅಗತ್ಯ ಎಂದು ಸಾಹಿತಿ ಮತ್ತು ಲೇಖಕ ಕೋಟಗನಹಳ್ಳಿ ರಾಮಯ್ಯ ತಿಳಿಸಿದರು

ರಾಜ್ಯ ದಲಿತ ಸಂಘರ್ಷ ಸಮಿತಿವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬುದ್ಧ,ಬಸವ ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಜಾ ಪ್ರಭುತ್ವದಲ್ಲಿ ದಲಿತರ ಸ್ಥಾನಮಾನ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ವಿಷಯ ಮಂಡಿಸಿ ಮಾತನಾಡಿದ ಅವರು,ದಲಿತ ವಿಮೋಚನೆಗಾಗಿ ಸ್ವಂತ ನಾನೇ ತರಬೇತಿ ವಿಮೋಚನಾ ತರಬೇತಿ ಸಂಸ್ಥೆಯನ್ನು ಸ್ಥಾಪಿಸಿದ್ದೇನೆ.ಇದರಡಿ ಯಾವುದೇ ಅನುದಾನ ಪಡೆಯದೇ ಸ್ವಂತ ಒಂದು ಬೆಟ್ಟದಲ್ಲಿ ಸ್ಥಾಪನೆ ಮಾಡಲಾಗಿದೆ.ಅಂಬೇಡ್ಕರ್ ಚಿಂತನೆಯಂತೆ ರಾಜಕೀಯ ವನ್ನು ಆಧ್ಯಾತ್ಮಿಕರಣಗೊಳಿಸುವ ಅಗತ್ಯವಾಗಿದೆ ಈ ಪ್ರಯತ್ನದಲ್ಲಿದ್ದೇನೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಂಚಾಲಕ ಶ್ಯಾಮರಾವ್ ಘಾಟ್ಗೆ ಮಾತನಾಡಿ,ದಲಿತರು ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಆತ್ಮವಲೋಕನ ಮಾಡಿಕೊಳ್ಳುವ ಅವಶ್ಯವಿದೆ.ಅಂಬೇಡ್ಕರ್ ಚಿಂತನೆಯಂತೆ ದಲಿತರು ರಾಜಕೀಯವಾಗಿ ಸ್ವತಂತ್ರರಾಗುವುದು ಅಗತ್ಯವಾಗಿದೆ ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯನ್ಮೋಖರಾಗಬೇಕು ಎಂದು ತಿಳಿಸಿದರು.

ಪ್ರಗತಿಪರ ಚಿಂತಕ ಮತ್ತು ಅಂಬೇಡ್ಕರ್ ವಾದಿ ಸಿ.ರಾವಣ್ಣ, ಕೋಟಗಾನ ಹಳ್ಳಿ ರಾಮಯ್ಯ ಅವರ ಚಿಂತನೆಯಂತೆ ದಲಿತರು ತಮ್ಮ ಸಮಾಜಿಕ,ಆರ್ಥಿಕ, ರಾಜಕೀಯ ವಿಮೋಚನೆಗಾಗಿ ಸ್ವತಂತ್ರ ರಾಜಕೀಯ ಪಕ್ಷ ಸ್ಥಾಪಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ರಾಜ್ಯ ಸಂಘಟನಾ ಸಂಚಾಲಕ ವೆಂಕಟೇಶ ಮೂರ್ತಿ ಆನೇಕಲ್ ಮಾತನಾಡಿ,ಬುದ್ದ,ಬಸವಣ್ಣ, ಅಂಬೇಡ್ಕರ್ ಅವರ ಚಿಂತನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ.ಅನೇಕ ಪ್ರಗತಿಪರ ಚಿಂತಕರು,ಹೋರಾಟಗಾರರು ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿಚಾರ ಮಂಡಿಸಲಿದ್ದಾರೆ ಎಂದರು.

ರಾಜ್ಯ ಸಂಘಟನಾ ಸಂಚಾಲಕ ಕೆಂಪಯ್ಯ ಸಾಗ್ಯ,ದಲಿತ ಹಿರಿಯ ಮುಖಂಡ ಸಿ.ಸಿದ್ಧಲಿಂಗಯ್ಯ, ರಾಜ್ಯ ಸಂಚಾಲಕ ಚಂದ್ರು ಚಕ್ರವರ್ತಿ,ವಿಭಾಗೀಯ ಸಂಚಾಲಕ ದಾಸರಹಳ್ಳಿ ಭುವನೇಶ್ವರ್ ಮತ್ತಿತರರು ಭಾಗವಹಿಸಿದ್ದರು.

Comments

Leave a Comment

Prev Post ಶಾಲಾ ಶಿಕ್ಷಣ ಇಲಾಖೆಯ ಕಾಳಜಿ — ವಿದ್ಯಾರ್ಥಿಗಳ ಪಾದರಕ್ಷೆ ವಿತರಣೆ ಪಾರದರ್ಶಕವಾಗಿ, ಗೌರವದ ಹೆಜ್ಜೆ 2026–27

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News