PRABHAVAA.COM

ನಾಡಪ್ರಭು ಕೆಂಪೇಗೌಡರಿಗೆ ಗೌರವ ನಮನ; ಅರ್ಥಪೂರ್ಣವಾಗಿ ನಡೆದ ಬೆಂಗಳೂರು ನಿರ್ಮಾತೃವಿನ 517 ನೇ ಜಯಂತಿ

Bengaluru Urban:

Font size:

ಜಿಕೆವಿಕೆ, ಎಂಜಿನಿಯರ್ ‌ವಿಶ್ವನಾಥ್, ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರಿಗೆ ಕೆಂಪೇಗೌಡ ಪ್ರಶಸ್ತಿ

ನಾಡಪ್ರಭು ಕೆಂಪೇಗೌಡರಿಗೆ ಗೌರವ ನಮನ; ಅರ್ಥಪೂರ್ಣವಾಗಿ ನಡೆದ ಬೆಂಗಳೂರು ನಿರ್ಮಾತೃವಿನ 517 ನೇ ಜಯಂತಿ

ಸರ್ವಜನಾಂಗದ ನಾಯಕನಿಗೆ ವಂದಿಸಿದ ಸಿಎಂ ಡಿ.ಕೆ. ಶಿವಕುಮಾರ್

ಗಮನ ಸೆಳೆದ ಕೃತಜ್ಞತಾ ಫಲಕ (ವಾಲ್ ಆಫ್ ಗ್ರಾಟಿಟ್ಯೂಡ್); ಭೂಮಿ ಕೊಟ್ಟ ರೈತರಿಗೆ ಕೃತಜ್ಞತೆ ಸಮರ್ಪಣೆ

ಸಿಎಂ‌ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ದಾಖಲೆ ಅಭಿಯಾನ

ಬಸವನ ಪಾದ ಸಸಿ ನೆಟ್ಟ ಸಿಎಂ

ಜಿಕೆವಿಕೆ, ಎಂಜಿನಿಯರ್ ‌ವಿಶ್ವನಾಥ್, ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರಿಗೆ ಕೆಂಪೇಗೌಡ ಪ್ರಶಸ್ತಿ

ಬೆಂಗಳೂರು, ಜೂನ್ 27:

*ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ, ದಾಖಲೆಯುತ 15 ಲಕ್ಷ ಸಸಿಗಳ ನೆಡುವಿಕೆ, ಎಸ್.ಎಂ.ಕೃಷ್ಣ ದಶಪಥ ರಸ್ತೆ, 10 ಕೆ ರನ್, 5 ಕೆ ವಾಕಥಾನ್, ಅಂತರರಾಷ್ಟ್ರೀಯ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಧಾನ ಹೀಗೆ ಸಾಲು ಸಾಲು ಕಾರ್ಯಕ್ರಮಗಳ ಮೂಲಕ 517 ನೇ ವರ್ಷದ ಕೆಂಪೇಗೌಡ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

"ಬೆಂಗಳೂರು ನಿರ್ಮಿಸಿದ, ಪೇಟೆಗಳನ್ನು ಕಟ್ಟಿದ, ಕೆರೆಗಳನ್ನು ನಿರ್ಮಿಸಿ ಹೊಸ ಚರಿತ್ರೆ ಸೃಷ್ಟಿಸಿದ, ದೂರದೃಷ್ಟಿಯ ಮಣ್ಣಿನ ಮಗ ಕಲಿವೀರ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಕಂಚಿನ ಪ್ರತಿಮೆಗೆ ಮೊದಲಿಗೆ ಪುಷ್ಪಾರ್ಚನೆ ಮಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಯಂತಿಗೆ ಚಾಲನೆ ನೀಡಿದರು.

ಬೃಹತ್ ಪ್ರತಿಮೆಯ ಪಾದವನ್ನು ಮುಟ್ಟಿ ನಮಸ್ಕಿರಿಸಿದ ಮುಖ್ಯಮಂತ್ರಿಯವರು ಪ್ರತಿಮೆಯ ಪಾದಗಳಿಗೆ ಭಕ್ತಿಯಿಂದ ಪುಷ್ಪಾರ್ಚನೆ ಮಾಡಿ ನಮಿಸಿದರು. ನಂತರ ಪ್ರತಿಮೆಯ ಪಕ್ಕದಲ್ಲಿ ನಿರ್ಮಾಣ‌ ಮಾಡಿರುವ ಥೀಮ್ ಪಾರ್ಕ್ ಅನ್ನು ವೀಕ್ಷಿಸಿದರು.

ಇದಾದ ಬಳಿಕ ಬೆಂಗಳೂರು ಉತ್ತರ ಯಲಹಂಕ ಒಕ್ಕಲಿಗರ ಸಂಘದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಆನಂತರ ವೇದಿಕೆ ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘಕ್ಕೆ ರಿಯಾಯಿತಿ ದರದಲ್ಲಿ ಕೆಎಚ್ ಬಿ ನಿವೇಶನ ನೀಡುವುದಾಗಿ ಘೋಷಣೆ ಮಾಡಿದರು. ನಂತರ ವಿಧಾನಸೌಧದ ಮುಂದಿರುವ ಕುದುರೆಯ ಮೇಲೆ ವಿರಾಜಮಾನರಾಗಿರುವ ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಗಮನ ಸೆಳೆದ ವಾಲ್ ಆಫ್ ಗ್ರಾಟಿಟ್ಯೂಡ್

ಎಸ್‌.ಎಂ. ಕೃಷ್ಣ ರಸ್ತೆ (ಬೆಂಗಳೂರು-ಮೈಸೂರು ದಶಪಥ ರಸ್ತೆ) ಅಭಿವೃದ್ಧಿಗಾಗಿ ಯಾವುದೇ ವಿವಾದವಿಲ್ಲದೆ ಸ್ವಯಂಪ್ರೇರಿತವಾಗಿ ತಮ್ಮ ಭೂಮಿಯನ್ನು ಬಿಟ್ಟುಕೊಟ್ಟ ರೈತರು ಮತ್ತು ಸ್ಥಳೀಯರನ್ನು ಗೌರವಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು 'ವಾಲ್ ಆಫ್ ಗ್ರಾಟಿಟ್ಯೂಡ್' (ಕೃತಜ್ಞತಾ ಫಲಕ) ನಿರ್ಮಿಸಿದೆ. ಮೈಸೂರು ರಸ್ತೆಯಲ್ಲಿರುವ ಈ ವಿಶೇಷ ಗೋಡೆಯು ರೈತರ ತ್ಯಾಗವನ್ನು ಸ್ಮರಿಸುತ್ತದೆ. ರಸ್ತೆ ಉದ್ಘಾಟನೆ ನಂತರ ಈ ಫಲಕವನ್ನು ಸಿಎಂ ಗಣ್ಯರ ಜೊತೆಗೂಡಿ ಲೋಕಾರ್ಪಣೆ ಮಾಡಿದರು. ಇದು ಎಲ್ಲರ ಗಮನ ಸೆಳೆಯಿತು.

ತದ ನಂತರ ಚಲ್ಲಘಟ್ಟದ ನಾಡಪ್ರಭು ಕೆಂಪೇಗೌಡ ಬಡಾವಣೆ ಬಳಿ ಎಸ್.ಎಂ.ಕೃಷ್ಣ ದಶಪಥ ರಸ್ತೆಯ ಬಳಿ ಬೆಂಗಳೂರಿನ ನಾಲ್ಕು ದಿಕ್ಕುಗಳಿಂದಲೂ ಸಚಿವರುಗಳ ನೇತೃತ್ವದಲ್ಲಿ ತಂದಂತಹ ಪುರಜ್ಯೋತಿಗಳನ್ನು ಡಿ.ಕೆ.ಶಿವಕುಮಾರ್ ಅವರು ಸ್ವೀಕರಿಸಿದರು. ‌ನಂತರ ಕೆಂಪೇಗೌಡರ ಕೋಟೆಯ ಪ್ರತಿಕೃತಿ ಎದುರು ಎಲ್ಲಾ ಪುರಜ್ಯೋತಿಗಳನ್ನು ಇಡಲಾಯಿತು.

ಇದಕ್ಕೂ ಮೊದಲು ಚಲ್ಲಘಟ್ಟದ ನಾಡಪ್ರಭು ಕೆಂಪೇಗೌಡ ಬಡಾವಣೆ ಬಳಿ ಎಸ್.ಎಂ.ಕೃಷ್ಣ ದಶಪಥ ರಸ್ತೆಯಲ್ಲಿ 10 ಕೆ ರನ್, 5 ಕೆ ವಾಕಥಾನ್ ಏರ್ಪಡಿಸಲಾಗಿತ್ತು. ‌ಸಾವಿರಾರು ಜನರು ನೂತನ ರಸ್ತೆಯಲ್ಲಿ ಓಡಿ ಸಂತಸಪಟ್ಟರು. ಈ ರಸ್ತೆ ಅಂತರರಾಷ್ಟ್ರೀಯ ಗುಣಮಟ್ಟದಿಂದ ಕೂಡಿದೆ ಎಂದು ಅಭಿಪ್ರಾಯ ಹಂಚಿಕೊಂಡರು.‌ ಆನಂತರ ಶ್ರೀಮತಿ ಪ್ರೇಮಾ ಕೃಷ್ಣ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಪರಿಷತ್ ಸದಸ್ಯರ ಜೊತೆಗೂಡಿ ನೂತನ ರಸ್ತೆಯನ್ನು ಉದ್ಘಾಟಿಸಿದರು.‌

ಸಿಎಂ‌ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ದಾಖಲೆ ಅಭಿಯಾನ

ಬಸವನ ಪಾದ ಸಸಿ ನೆಟ್ಟ ಸಿಎಂ ಡಿ.ಕೆ.ಶಿವಕುಮಾರ್

ಶನಿವಾರ ಬೆಳಿಗ್ಗೆಯಿಂದಲೇ 50-60 ಸಾವಿರ ಸ್ವಯಂ ಸೇವಕರು ಉತ್ಸಾಹದಿಂದ ಕೆಂಪೇಗೌಡ ಬಡಾವಣೆ, ಶಿವರಾಂ ಕಾರಂತ ಬಡಾವಣೆ ಸೇರಿದಂತೆ ಇತರೆಡೆ ಸುಮಾರು 15 ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡರು. ಕೇವಲ 12 ಗಂಟೆಗಳ ಅವಧಿಯಲ್ಲಿ ಇಷ್ಟೊಂದು ಸಸಿಗಳನ್ನು ನೆಟ್ಟು ದಾಖಲೆ ನಿರ್ಮಿಸಲಾಯಿತು.

ದಶಪಥ ರಸ್ತೆ ಉದ್ಘಾಟನೆ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ವತಃ ಸಲಿಕೆ ಹಿಡಿದು ಸ್ಥಳೀಯ ಸಸಿಯಾದ "ಬಸವನ ಪಾದ" ಗಿಡ ನೆಟ್ಟು ನೀರೆರೆದರು.

ಉದ್ಯಾನ ನಗರಿ, ಏರ್ ಕಂಡೀಷನ್ ಸಿಟಿ ಎಂದು ಹೆಸರಾಗಿರುವ ಬೆಂಗಳೂರು ತನ್ನ ಉದ್ಯಾನಗಳಿಂದಲೇ ಹೆಸರಾಗಿದೆ. ಈ ಗರಿಮೆಯನ್ನು ಉಳಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಬಿಡಿಎ ವತಿಯಿಂದ ಆಯೋಜಿಸಲಾಗಿತ್ತು. ಮಿಯಾವಾಕಿ ಅರಣ್ಯ ಮಾದರಿಯಲ್ಲಿ ಸುಮಾರು 250 ಎಕರೆ ಪ್ರದೇಶದಲ್ಲಿ ಸ್ಥಳೀಯ ಜಾತಿಯ ವಿವಿಧ ಸಸಿಗಳನ್ನು ನೆಡಲಾಯಿತು.

ಜಿಕೆವಿಕೆ, ಎಂಜಿನಿಯರ್ ‌ವಿಶ್ವನಾಥ್ ಅವರಿಗೆ ಕೆಂಪೇಗೌಡ ಪ್ರಶಸ್ತಿ

ಕೆಂಪೇಗೌಡ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ದೇಶದ ಪ್ರಮುಖ ಕೃಷಿ ಸಂಶೋಧನೆ ಹಾಗೂ ಶಿಕ್ಷಣ ಸಂಸ್ಥೆಯಾಗಿ, ಆಧುನಿಕ ಕೃಷಿ ಹಾಗೂ ನವೀನ ತಂತ್ರಜ್ಞಾನವನ್ನು ರೈತರಿಗೆ ಪರಿಚಯಿಸುವ ಮೂಲಕ ಹೆಸರು ಮಾಡಿರುವ ಜಿಕೆವಿಕೆ, ನಗರ ಯೋಜನಾ ತಜ್ಞರಾಗಿ ಪ್ರಸಿದ್ಧಿ ಹೊಂದಿರುವ ಎಂಜಿನಿಯರ್ ಎಸ್. ‌ವಿಶ್ವನಾಥ್ ಅವರು ಹಾಗೂ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ರಾಹುಲ್ ದ್ರಾವಿಡ್ ಅವರು ವಿದೇಶದಲ್ಲಿ ಇದ್ದ ಕಾರಣಕ್ಕೆ ಅವರು ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಜಿಕೆವಿಕೆ ಸಂಸ್ಥೆಯ ಪರವಾಗಿ ಉಪಕುಲಪತಿಗಳಾದ ಎಸ್.ವಿ.ಸುರೇಶ್ ಅವರು ಪಡೆದುಕೊಂಡರು.

Comments

Leave a Comment

Prev Post ಬೆಂಗಳೂರಿಗೆ ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News