ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯ
ಬೆಂಗಳೂರು ಜು. 4 - ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎನ್. ಶಂಕರ್ ಹಾಗೂ ನಗರ ಸಂಚಾಲಕ ಜಿ. ಮದಿಯರಸನ್ ಒತ್ತಾಯಿಸಿದ್ದಾರೆ.
ಮಾಧ್ಯಮದವರ ಮುಖಾಂತರ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮನವಿ ಸಲ್ಲಿಸಿದ್ದು, ಜಮೀರ್ ಅಹ್ಮದ್ ಖಾನ್ ಅವರ ಸೇವೆ ಮತ್ತು ಜನಪ್ರಿಯತೆಯನ್ನು ಉಲ್ಲೇಖಿಸಿದ್ದಾರೆ.
ಸಂಘಟನೆಯವರು ಜಮೀರ್ ಅಹ್ಮದ್ ಖಾನ್ ಅವರು ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ವಸತಿ, ವಕ್ಸ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಬಡವರ ಕಲ್ಯಾಣಕ್ಕಾಗಿ ಶ್ರೇಷ್ಠ ಕೆಲಸ ಮಾಡಿದ್ದಾರೆ ಎಂದು ಹೈಲೈಟ್ ಮಾಡಿದರು. ರಾಜ್ಯದ ಎಲ್ಲಾ ಜಾತಿಯ ಬಡವರಿಗೆ ಲಕ್ಷಾಂತರ ಮನೆಗಳನ್ನು ನಿರ್ಮಿಸಿ ಕೊಟ್ಟಿರುವುದನ್ನು ಅವರು ಜನಪ್ರಿಯ ನಾಯಕತ್ವದ ಉದಾಹರಣೆಯಾಗಿ ವಿವರಿಸಿದರು. ಬೆಳಗಾವಿ ಜಿಲ್ಲೆಯ ರಾಯಬಾಗ ಮತ್ತು ಕಾಗವಾಡ ತಾಲ್ಲೂಕಿನ ಗ್ರಾಮಗಳಲ್ಲಿ ನೆರಸಂತಸ್ಮರಿಗೆ ಮನೆಗಳನ್ನು ಕಟ್ಟಿಕೊಡುವ ಕಾರ್ಯವನ್ನು ಮುಂದುವರಿಸಿರುವುದನ್ನು ಕೂಡ ಪ್ರಸ್ತಾಪಿಸಿದರು.
ಈ ಹಿನ್ನೆಲೆಯಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ನ್ಯಾಯಸಮ್ಮತವಾಗಿದ್ದು, ಕಾಂಗ್ರೆಸ್ ಪಕ್ಷದ ವರಿಷ್ಠರು ಈ ಮನವಿಯನ್ನು ಪರಿಗಣಿಸಬೇಕೆಂದು ಸಂಘಟನೆಯವರು ಒತ್ತಾಯಿಸಿದರು.






Comments
Leave a Comment