PRABHAVAA.COM

ಸಾರ್ವಜನಿಕರ‌ ಅಹವಾಲು ಅಲಿಸಿದ‌ ಮುಖ್ಯಮಂತ್ರಿಗಳು

Kalaburagi:

Font size:

ಸಾರ್ವಜನಿಕರ‌ ಅಹವಾಲು ಅಲಿಸಿದ‌ ಮುಖ್ಯಮಂತ್ರಿಗಳು

ಸಾರ್ವಜನಿಕರ‌ ಅಹವಾಲು ಅಲಿಸಿದ‌ ಮುಖ್ಯಮಂತ್ರಿಗಳು

ಕಲಬುರಗಿ,ಜು.7( ಕರ್ನಾಟಕ ವಾರ್ತೆ) ಕಲಬುರಗಿ‌ ವಿಭಾಗ ಮಟ್ಟದ ಬರ ಪರಿಸ್ಥಿತಿ ಅವಲೊಕಿಸಲು ಜಿಲ್ಲೆಗೆ ಅಗಮಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಂಗಳವಾರ ಇಲ್ಲಿನ‌ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳ ನೂರಾರು ಪ್ರತಿನಿಧಿಗಳಿಂದ ಅಹವಾಲು ಆಲಿಸಿದರು.

ಜುಲೈ ತಿಂಗಳಲ್ಲಿಯೂ ಮಳೆ ಬರುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಕಲಬುರಗಿ ಜಿಲ್ಲೆಯನ್ನು ಬರಗಾಲ ಪಿಡಿತ ಪ್ರದೇಶವೆಂದು ಘೋಷಿಸಬೇಕು. ಕಳೆದ ವರ್ಷದ ಬಾಕಿ ಬೆಳೆ ವಿಮಿ ಮೊತ್ತ 300 ಕೋಟಿ ರೂ. ಕೂಡಲೆ ಬಿಡುಗಡೆ ಮಾಡಬೇಕೆಂದು ನವ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ದಯಾನಂದ ಸಿ.ಪಾಟೀಲ ಮನವಿ ಮಾಡಿದರು.

ಎಸ್.ಟಿ ಸಮುದಾಯಕ್ಕೆ ಸೇರಿದ ತಳವಾರ, ನಾಯ್ಕಡ್ ವರ್ಗದ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಜಾತಿ ಪ್ರಮಾಣ ಪತ್ರ‌ ನಿಡುತ್ತಿಲ್ಲ, ಇದರಿಂದ ಸಮಾಜದ ಯುವಕರಿಗೆ ಉದ್ಯೋಗ, ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಕೂಡಲೆ ಸಮಸ್ಯೆ ಬಗೆಹರಿಸಬೇಕೆಂದರು.

ಬೆಳೆ ಸಾಲ ಮನ್ನಾ ಮಾಡಿ:

ಕಳೆದ ವರ್ಷ ಅತಿವೃಷ್ಟಿಯಿಮದ ಹಸಿ ಬರಗಾಲ ಬಂದರೆ, ಈ ವರ್ಷ ಮಳೆ ಬಾರದೆ ಒಣ ಬರಗಾಲ ನೋಡುವ ಸ್ಥಿತಿ ನಮ್ಮ ರೈತಾಪಿ ವರ್ಗಕ್ಕೆ ಬಂದಿದೆ. ಕಲಬುರಗಿ ಜಿಲ್ಲೆಯಲ್ಲಿ ಅಲ್ಲಲ್ಲಿ ಅಲ್ಪಸ್ವಲ್ಪ ಮಳೆ ಬಿದ್ದ ಕಾರಣ ಇದೂವರೆಗೆ ಶೇ.30ರಷ್ಡು ಮಾತ್ರ ಬಿತ್ತನೆ ಮಾಡಲಾಗಿದೆ. ಬಿತ್ತನೆ ನಂತರ ಮಖೆ ಬರದ ಕಾರಣ ರೈತ ಕಂಗಾಲಿದ್ದಾನೆ. ಸಾಲ ಸೂಲ ಮಾಡಿ ಬೀಜ. ಗೊಬ್ಬರ ಖರೀದಿ ಮಾಡಿದ್ದು, ಬೆಳೆ ಕೈಕೊಡುವ ಎಲ್ಲಾ ಲಕ್ಷ್ಣ ಗೋಚರಿಸುತ್ತಿದೆ. ಹೀಗಾಗಿ ಸಹಕಾರಿ ಬ್ಯಾಂಕ್ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಸಾಲ ಪಡೆದ ರೈತರಿಗೆ ಸಾಲ ಮನ್ನಾ ಮಾಡಬೇಕೆಂದು ಸಿ‌.ಎಂ. ಅವರಿಗೆ ಮನವಿ ಪತ್ರ ಸಲ್ಲಿಸಿ ಜಿಲ್ಲಾ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ‌ ಸಿದ್ರಾಮಪ್ಪ ಪಾಟೀಲ ಧಂಗಾಪೂರ ಆಗ್ರಹಿಸಿದರು.

ರಾಜ್ಯದ ಉಪಮುಖ್ಯಮಂತ್ರಿ, ಕಂದಾಯ ಮತ್ತು ಯುವಜನ ಸಬಲೀಕರಣ‌ ಮತ್ತು ಕ್ರೀಡಾ ಸಚಿವ ಡಾ.ಜಿ.ರಮೇಶ್ವರ, ಗೃಹ, ಐ.ಟಿ-ಬಿ.ಟಿ ಹಾಗೂ ಇ-ಆಡಳಿತ ಎಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ,‌ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕ‌ ರಾದ ಎಂ.ವೈ.ಪಾಟೀಲ, ಜಗದೇವ ಗುತ್ತೇದಾರ ಇದ್ದರು.

Comments

Leave a Comment

Prev Post ರಾಜ್ಯದಲ್ಲಿ ಹೆಚ್ಚು ಹೂಡಿಕೆ: ಸಚಿವ ಎಂ ಬಿ ಪಾಟೀಲರ ಜತೆ ಹಾಂಕಾಂಗ್ ಕಾನ್ಸುಲ್ ಜನರಲ್ ಚರ್ಚೆ
Next Post ಕಿತ್ತೂರ ಕರ್ನಾಟಕದ ಅಲ್ಪಸಂಖ್ಯಾತರ ಪರವಾಗಿ – ಗೋಕಾಕದ ನಜೀರ ಅಹ್ಮದ್ ಶೇಖ ಸಾ. ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಮನವಿ"

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News