PRABHAVAA.COM

ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ ಕೆ ಶಿವಕುಮಾರ್

Bengaluru Urban:

Font size:

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ

ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ ಕೆ ಶಿವಕುಮಾರ್

ಜಾಗತಿಕ ಸಾಮರ್ಥ್ಯ ಕೇಂದ್ರಗಳ (GCC) ನಾಯಕರ ಸಭೆಯಲ್ಲಿ ಸಿಎಂ ಘೋಷಣೆ

ಬೆಂಗಳೂರು ಪ್ರಗತಿಯ ಶ್ರಮದಲ್ಲಿ ಪಾಲುದಾರರಾಗೋಣ

'ಟೀಮ್ ಕರ್ನಾಟಕ' ನಮ್ಮ ಧ್ಯೇಯ

ಬೇರೆ ನಗರಗಳಲ್ಲೂ ಡಬಲ್ ಎಫ್ಎಆರ್ ಗೆ ಅವಕಾಶ

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ

ಕರ್ನಾಟಕ ಪ್ರತಿಭಾವಂತ ಮಾನವ ಸಂಪನ್ಮೂಲಗಳ ಕೇಂದ್ರ

ಬೆಂಗಳೂರು, ಜು. 08:

"ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಬುಧವಾರ ನಡೆದ ಟಾರ್ಗೆಟ್ ಇಂಡಿಯಾ ಕಾರ್ಯಕ್ರಮದಲ್ಲಿ ಹಾಗೂ ಬಳಿಕ ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಮಾತನಾಡಿದರು.

"ಬೆಂಗಳೂರಿನಲ್ಲಿ ಕಚೇರಿ ಜಾಗದ ಬಾಡಿಗೆ 1 ರಿಂದ 1.5 ಡಾಲರ್ ಇದೆ. ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಅರ್ಧ ಡಾಲರ್ ಗೆ ಸಿಗುತ್ತದೆ. ಅಲ್ಲಿ ಡಬಲ್ ಎಫ್ಎಆರ್ ನೀಡಲು ಮುಂದಾಗಿದ್ದೇವೆ. ಆ ಮೂಲಕ ಅಲ್ಲಿಯೂ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ನೀಡಲು ಮುಂದಾಗಿದ್ದೇವೆ. ಕರ್ನಾಟಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ನಿಮ್ಮ ಸಲಹೆಗಳಿಗೆ ನಾವು ಮುಕ್ತರಾಗಿದ್ದೇವೆ" ಎಂದರು.

"ನೀವೆಲ್ಲರೂ ಬಲಿಷ್ಠವಾಗಿ ಬೆಳೆಯಲು ಎಲ್ಲಾ ಸಹಕಾರ ನೀಡಲು ಸಿದ್ಧ. ನೀವು ಬಲಿಷ್ಠರಾದರೆ ನಾವು ಬಲಿಷ್ಠರಾಗಲು ಸಾಧ್ಯ. ನೀವೆಲ್ಲರೂ ಕರ್ನಾಟಕದ ಪ್ರಗತಿಯ ಪಾಲುದಾರರು, ರಾಯಭಾರಿಗಳು. ಈ ರಾಜ್ಯ ಹಾಗೂ ದೇಶದ ಪ್ರಗತಿಗೆ ನಾವು ನಿಮ್ಮ ಜೊತೆ ಕೆಲಸ ಮಾಡಲಿದ್ದೇವೆ. ನಾವೆಲ್ಲರೂ ಒಂದೇ ತಂಡ 'ಟೀಮ್ ಕರ್ನಾಟಕ'. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು" ಎಂದು ತಿಳಿಸಿದರು.

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ

"ಬೆಂಗಳೂರಿನಲ್ಲಿ ಪ್ರತಿ ತಿಂಗಳು 30 ಸಾವಿರ ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಹೀಗಾಗಿ ನಾವು ಸುಗಮ ಸಂಚಾರಕ್ಕೆ ಆದ್ಯತೆ ನೀಡುತ್ತಿದ್ದೇವೆ. ನಾವು ಈಗಾಗಲೇ 350 ಕಿ. ಮೀ ಮೆಟ್ರೋ ಸಂಪರ್ಕಕ್ಕೆ ಯೋಜನೆ ರೂಪಿಸಿದ್ದು, ಇದನ್ನು ಮುಂದಿನ ವರ್ಷದ ವೇಳೆಗೆ 500 ಕಿ.ಮೀ ಗಳಿಗೆ ವಿಸ್ತರಿಸುವ ಗುರಿ ಹೊಂದಿದ್ದೇವೆ.

ನೀವೆಲ್ಲರೂ ಹೆಬ್ಬಾಳ ಬಳಿ ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದೀರಿ. ಈಗಾಗಿ ನಾವು ಸಣ್ಣ ಟನಲ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಜೊತೆಗೆ ಬೆಂಗಳೂರಿನಲ್ಲಿ 40 ಕಿ. ಮೀ ಉದ್ದದ ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದು, ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ಆದಷ್ಟು ಬೇಗ ಆದೇಶ ಹೊರಡಿಸಲಾಗುವುದು. ಇವುಗಳ ಜೊತೆಗೆ 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಯೋಜನೆ ರೂಪಿಸಿದ್ದೇವೆ. 133 ಕಿ.ಮೀ ಉದ್ದದ ಮೇಲ್ಸೇತುವೆ ಯೋಜನೆ ರೂಪಿಸಿದ್ದೇವೆ. ಜೊತೆಗೆ 123 ಕಿ. ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ನಿರ್ಮಾಣ ಮಾಡುತ್ತಿದ್ದೇವೆ. ಮೊದಲ ಹಂತಕ್ಕೆ ನಾವು 26 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದೇವೆ. ಹೀಗೆ ಬೆಂಗಳೂರಿನ ಪ್ರಗತಿಗೆ ಮುಂದಾಗಿದ್ದೇವೆ. ಬೆಂಗಳೂರಿನ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ ಮಾಡುತ್ತಿದ್ದೇವೆ" ಎಂದು ಮಾಹಿತಿ ನೀಡಿದರು.

ಕರ್ನಾಟಕ ಪ್ರತಿಭಾವಂತ ಮಾನವ ಸಂಪನ್ಮೂಲಗಳ ಕೇಂದ್ರ:

"ನಮ್ಮ ರಾಜ್ಯದಲ್ಲಿ ಪ್ರತಿಭಾನ್ವಿತ ಮಾನವ ಸಂಪನ್ಮೂಲ ಇದೆ. ನಮ್ಮ ರಾಜ್ಯದಲ್ಲಿ 257 ಎಂಜಿನಿಯರಿಂಗ್ ಕಾಲೇಜುಗಳಿದ್ದು, ಪ್ರತಿ ವರ್ಷ 1.50 ಲಕ್ಷ ಎಂಜಿನಿಯರ್ ಗಳನ್ನು ತಯಾರು ಮಾಡುತ್ತಿದ್ದೇವೆ. ಇಂದು ನಿಮ್ಮ ಉಪಸ್ಥಿತಿಯೇ ನಮ್ಮ ಮೇಲಿರುವ ನಂಬಿಕೆಗೆ ಸಾಕ್ಷಿಯಾಗಿದೆ. ನಮ್ಮ ಮೇಲೆ ನಂಬಿಕೆ ಇಟ್ಟಿರುವ ನಿಮಗೆ ಧನ್ಯವಾದಗಳು. ನೀವು ನಿಮ್ಮ ಸಲಹೆಗಳ ಮೂಲಕ ಈ ರಾಜ್ಯಕ್ಕೆ ಹೊಸ ರೂಪ ನೀಡುತ್ತಿದ್ದೇವೆ. ನಮ್ಮ ಜೊತೆ ಕೆಲಸ ಮಾಡಿದವರು ಯಾರೂ ಹಿಂದಕ್ಕೆ ಹೋಗಿಲ್ಲ. ಬೆಂಗಳೂರು ಜಾಗತಿಕ ನಗರವಾಗಿದ್ದು, ಬೆಂಗಳೂರಿನ ಮೂಲಕ ಭಾರತವನ್ನು ನೋಡಲಾಗುತ್ತಿದೆ. ಬೆಂಗಳೂರಿನಲ್ಲಿ ಉದ್ಯಮಗಳಿಗೆ ಅಗತ್ಯವಿರುವ ಸಹಕಾರ ನೀಡಿ, ನಾವೂ ಕೈ ಜೋಡಿಸುತ್ತೇವೆ ಎಂದು ಪ್ರಧಾನ ಮಂತ್ರಿಗಳು ತಿಳಿಸಿದ್ದಾರೆ" ಎಂದರು.

"ಕರ್ನಾಟಕಕ್ಕೆ ಬಂದ ಕಂಪನಿಗಳು ಇಲ್ಲಿನ ಸಾಮರ್ಥ್ಯ, ಪ್ರತಿಭೆ ಬಗ್ಗೆ ಅರಿತಿದ್ದಾರೆ. ನಾವು ಭವಿಷ್ಯದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕೇವಲ ಬೆಂಗಳೂರು ಮಾತ್ರವಲ್ಲ ಕರ್ನಾಟಕದ ಇತರೆ ಭಾಗಗಳಲ್ಲಿ ಉದ್ಯಮ ಆರಂಭಕ್ಕೆ ಆದ್ಯತೆ ನೀಡಲಾಗುತ್ತಿದೆ. ಮಹಾರಾಷ್ಟ್ರವು ಉದ್ಯಮಗಳಿಗೆ ದುಬಾರಿಯಾಗಿದ್ದು, ಅವರಿಗೆ ಕರ್ನಾಟಕ ಉತ್ತಮ ಆಯ್ಕೆಯಾಗಿದೆ ಎಂದು ನಮ್ಮ ಸ್ನೇಹಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಕಚೇರಿ ಕೆಲಸ ಮುಗಿಸಿ 30-40 ನಿಮಿಷಗಳಲ್ಲಿ ಮನೆ ಸೇರಲು ಬಯಸುತ್ತಾರೆ. ಕರ್ನಾಟಕ ಈ ಎಲ್ಲಾ ಆಯಾಮಗಳನ್ನು ಪರಿಗಣಿಸುತ್ತಿದೆ" ಎಂದು ಹೇಳಿದರು.

"ಇಲ್ಲಿನ ಸಂಸ್ಕೃತಿ ಹಾಗೂ ಹವಾಮಾನ ಬೆಂಗಳೂರಿನ ಅತಿ ದೊಡ್ಡ ಬಲ. ನಮ್ಮ ಸಂಸ್ಕೃತಿ ಉಳಿಸಿಕೊಂಡು ಪ್ರಗತಿ ಸಾಧಿಸುವ ಗುರಿ ಹೊಂದಿದ್ದೇವೆ. ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸುತ್ತಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ" ಎಂದರು.

ದೇಶದಲ್ಲಿ 138 ಅಂತಾರಾಷ್ಟ್ರೀಯ ಶಾಲೆಗಳಿದ್ದು, ಆ ಪೈಕಿ 40 ಶಾಲೆಗಳು ಕರ್ನಾಟಕ ಹಾಗೂ ಬೆಂಗಳೂರಿನಲ್ಲಿವೆ. ಬೆಂಗಳೂರಿನಲ್ಲಿ 2 ಲಕ್ಷ ವಿದೇಶಿ ಪಾಸ್ ಪೋರ್ಟ್ ದಾರರು ಕೆಲಸ ಮಾಡುತ್ತಿದ್ದಾರೆ. ನಾವು ನಿಮ್ಮ ನಿರೀಕ್ಷೆಯನ್ನು ತಲುಪಲಿದ್ದೇವೆ. ಬೆಂಗಳೂರು ಟೆಕ್ ಸಮಿಟ್ ನಿಮ್ಮೆಲ್ಲರಿಗೂ ಒಂದು ಅವಕಾಶವನ್ನು ನೀಡಲಿದ್ದು, ದೇಶದ ದೊಡ್ಡ ಟೆಕ್ ಸಮಿಟ್ ಗಳಲ್ಲಿ ಒಂದಾಗಿದೆ. ನಾವು ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮ ಸ್ಥಾಪನೆಗೆ ಆದ್ಯತೆ ನೀಡುತ್ತಿದ್ದೇವೆ" ಎಂದು ತಿಳಿಸಿದರು.

ಮಾಧ್ಯಮ ಪ್ರತಿಕ್ರಿಯೆ:

ಕಾರ್ಯಕ್ರಮದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, "ಸುಮಾರು 200ಕ್ಕೂ ಹೆಚ್ಚು ಜಿಸಿಸಿ ರಾಯಭಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸರ್ಕಾರಕ್ಕೆ ಅನೇಕ ಸಲಹೆ ನೀಡಿದ್ದಾರೆ. ಬೆಂಗಳೂರು ಸುಗಮ ಸಂಚಾರ, ಬಿಯಾಂಡ್ ಬೆಂಗಳೂರು, ಇಲ್ಲಿನ ಸಂಶೋಧನೆ, ಅನ್ವೇಷಣೆ ಕುರಿತು ಚರ್ಚೆ ಮಾಡಲಾಗಿದೆ. ಅವರ ಅಗತ್ಯ ಪೂರೈಸಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ. ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮ ಆರಂಭಿಸಲು ಕಡಿಮೆ ಬೆಲೆಯಲ್ಲಿ ಜಾಗ ಒದಗಿಸುವುದಾಗಿ ತಿಳಿಸಿದ್ದೇವೆ" ಎಂದು ಮಾಹಿತಿ ನೀಡಿದರು.

ಎಐ ಯೂನಿವರ್ಸಿಟಿ ಸ್ಥಾಪನೆ ಬಗ್ಗೆ ಕೇಳಿದಾಗ, "ಎಐ ಯೂನಿವರ್ಸಿಟಿ ಮಾಡುವ ಚಿಂತನೆ ಮಾಡುತ್ತಿದ್ದೇವೆ. ಈ ಬಗ್ಗೆ ಸಲಹೆ ಕೇಳಿದ್ದೇವೆ. ಪ್ರಪಂಚಕ್ಕೆ ಬೇಕಾಗಿರುವುದನ್ನು ಬೆಂಗಳೂರಿನಿಂದ ನೀಡಬೇಕು ಎಂಬುದು ನಮ್ಮ ಉದ್ದೇಶ" ಎಂದು ಉತ್ತರಿಸಿದರು.

Comments

Leave a Comment

Prev Post ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು : ಮಾಜಿ ಸಚಿವ ಬಿ. ರಮಾನಾಥ ರೈ
Next Post ಮಳೆ ಕೊರತೆ; ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲು ವಿಜಯೇಂದ್ರ ಆಗ್ರಹ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News