PRABHAVAA.COM

ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವುದಕ್ಕೆ ಶೋಭಾ ಕರಂದ್ಲಾಜೆ ಆಕ್ಷೇಪ

Bengaluru Urban:

Font size:

ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವುದಕ್ಕೆ ಶೋಭಾ ಕರಂದ್ಲಾಜೆ ಆಕ್ಷೇಪ

ಬೆಂಗಳೂರು: ಕರ್ನಾಟಕ ಸರ್ಕಾರವು ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‍ಸಿ) ನೀಡಲು ಮುಂದಾಗಿರುವ ಉದ್ದೇಶ ಏನು ಮತ್ತು ಇದರ ಹಿಂದಿರುವ ಷಡ್ಯಂತ್ರ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಆಗ್ರಹಿಸಿದ್ದಾರೆ.
ನಗರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹೊಸ ಹೊಸ ಕಾನೂನುಗಳನ್ನು ಜಾರಿಗೆ ತರುತ್ತಿದೆ. ಎಸ್‍ಐಆರ್ ಆರಂಭವಾದ ನಂತರ ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡಲು ಸರ್ಕಾರ ಮುಂದಾಗಿದೆ. ಇದಕ್ಕೆ ಮಾರ್ಗಸೂಚಿಗಳನ್ನು ಎರಡು ದಿನದ ಹಿಂದೆ ಬಿಡುಗಡೆ ಮಾಡಲಾಗಿದೆ ಎಂದು ಆಕ್ಷೇಪಿಸಿದರು.
ನಮ್ಮ ಸಂವಿಧಾನದ ಆರ್ಟಿಕಲ್ 14 ರ ಅಡಿಯಲ್ಲಿ ಭಾರತದಲ್ಲಿ 'ಒಂದು ದೇಶ ಒಂದು ಪೌರತ್ವ' ನಿಯಮ ಇದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಿಸಲು ಸರ್ಕಾರ ಮುಂದಾಗಿದೆ. ದೇಶದ ನಾಗರಿಕರಿಗೆ ಪೌರತ್ವ ನೀಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ವಿದೇಶಿಗ ಯಾರು ಎಂಬ ಪ್ರಮಾಣ ಪತ್ರ ಕೊಡುವ, ವಲಸೆ ಪ್ರಮಾಣಪತ್ರ ನೀಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ. ಆದರೆ ರಾಜ್ಯ ಸರ್ಕಾರ ಈಗ ನಿವಾಸಿ ಪ್ರಮಾಣ ಪತ್ರ ನೀಡುತ್ತಿರುವುದು ಏಕೆ ಎಂದು ಟೀಕಿಸಿದರು.

ಅಕ್ರಮ ವಲಸಿಗರನ್ನು ರಕ್ಷಿಸಲು ಹುನ್ನಾರ...
ಎಸ್‍ಐಆರ್ ಪ್ರಕ್ರಿಯೆಯನ್ನು ಹಳ್ಳ ಹಿಡಿಸಿದ ನಂತರ ಅಕ್ರಮ ವಲಸಿರನ್ನು ರಕ್ಷಿಸಲು, ಸೌಲಭ್ಯ ನೀಡಲು, ಅವರನ್ನು ಮತಪಟ್ಟಿಗೆ ಸೇರಿಸಲು ಈ ಶಾಶ್ವತ ನಿವಾಸಿ ಪ್ರಮಾಣಪತ್ರ ಆಲೋಚನೆಯನ್ನು ಸರ್ಕಾರ ಮಾಡಿದೆ. ಎರಡು ದಿನದ ಹಿಂದೆ ಅಧಿಸೂಚನೆ ಹೊರಬಿದ್ದಿದೆ. ಈ ಅಧಿಸೂಚನೆ ಸಂವಿಧಾನ ವಿರೋಧಿಯಾಗಿದೆ. ಕಾನೂನುಬಾಹಿರವಾಗಿದ್ದು, ಆಂತರಿಕ ಭದ್ರತೆ ದೊಡ್ಡ ಸವಾಲಾಗಿದೆ ಎಂದರು. ಅಕ್ರಮ ವಲಸಿಗರನ್ನು ಕಾನೂನುಬದ್ಧಗೊಳಿಸಲು ಪಿಆರ್‍ಸಿ ನೀಡಲಾಗುತ್ತದೆ. ಕಂದಾಯ ಅಧಿಕಾರಿ ಸಹ ಪಿಎರ್‍ಸಿ ನೀಡಲು ಅವಕಾಶ ಇದೆ ಎಂದು ಆರೋಪಿಸಿದರು.

ವಿದೇಶಾಂಗ ಸಚಿವಾಲಯದ ಅವಲೋಕನ ಇಲ್ಲ...
ಪಿಆರ್‍ಸಿ ನೀಡಲು ವಿದೇಶಾಂಗ ಸಚಿವಾಲಯದ ಅವಲೋಕನದ ಅವಶ್ಯಕತೆ ಇದೆ. ಆದರೆ ಅದೆಲ್ಲ ಇಲ್ಲದೆ ಹೋದಲ್ಲಿ ಬಂದಲ್ಲಿ ಸಂವಿಧಾನದ ಪ್ರತಿ ಹಿಡಿಯುವ ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಅವರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದರು.

ಓಟ್ ಬ್ಯಾಂಕ್ ಒಂದೇ...
ರಾಜ್ಯ ಸರ್ಕಾರ ಈ ರೀತಿ ಪ್ರಮಾಣ ಪತ್ರ ಕೊಡುವುದರ ಹಿಂದಿನ ಉದ್ದೇಶ ಓಟ್ ಬ್ಯಾಂಕ್ ರಾಜಕಾರಣ. ಎಸ್‍ಐಆರ್ ನಡೆಯವ ವೇಳೆ ಪಿಆರ್‍ಸಿ ನೀಡಲು ಮುಂದಾಗಿರುವುದು ಏಕೆ. ಇಷ್ಟು ವರ್ಷಗಳಿಂದ ಬಾಂಗ್ಲಾದೇಶದಿಂದ ಬಂದವರಿಗೆ ಈಗ ರಾಜ್ಯದ ನಾಗರಿಕರನ್ನು ಮಾಡಲು ಹೊರಟಿದ್ದೀರಿ. ಆದ್ದರಿಂದ ರಾಜ್ಯದ ಪ್ರಜೆಗಳು ನಿಮ್ಮ ಹಕ್ಕನ್ನು ಕಸಿಯಲಿದ್ದಾರೆ. ಪಿಆರ್‍ಸಿ ಪಡೆದವರು ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲಿದ್ದಾರೆ. ಮತ ಪಡೆಯಲು ದೇಶದ ಭದ್ರತೆಗೆ ಧಕ್ಕೆ ತರುವ ಕೆಲಸವನ್ನು ಶಿವಕುಮಾರ್ ಅವರ ಸರ್ಕಾರ ಮಾಡುತ್ತಿದೆ ಎಂದು ದೂರಿದರು.
ಹಿಂದಿನ ಸಿಎಂ ಸಿದ್ದರಾಮಯ್ಯ ಅವರೂ ಇಂತಹ ಧೈರ್ಯ ಮಾಡಿರಲಿಲ್ಲ. ಈಗ ಶಿವಕುಮಾರ್ ಅವರು, ಅಹಂಕಾರದಿಂದ ನಾನು ಏನು ಮಾಡಿದರೂ ನಡೆಯುತ್ತದೆ ಎಂಬ ರೀತಿ ಮಾಡುತ್ತಿದ್ದಾರೆ. ದೇಶದ ಭದ್ರತೆ ಆತಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಬೇರೆ ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಅಕ್ರಮ ಬಾಂಗ್ಲಾ ವಲಸಿಗರು ಬಂದಿರುವುದನ್ನು ನಾವು ಪತ್ತೆ ಮಾಡಿದ್ದೇವೆ. ಈ ಸರ್ಕಾರಕ್ಕೆ ನಮ್ಮ ರಾಜ್ಯದ ನೈಜ ನಿವಾಸಿಗಳ ಹಿತ ಬೇಕಿಲ್ಲ. ಅಲ್ಪಸಂಖ್ಯಾತ ಮತದಾರರನ್ನು ಕಾನೂನುಬಾಹಿರವಾಗಿ ಮತಪಟ್ಟಿಗೆ ಸೇರಿಸುವ ಕೆಲಸವೂ ನಡೆಯುತ್ತಿದೆ. ಇದನ್ನೇ ವೋಟ್ ಚೋರಿ. ಕಾಂಗ್ರೆಸ್ ಅಂದರೆ ಮತಗಳ್ಳತನ ಆಗಿದೆ. ಆದ್ದರಿಂದ ಇದಕ್ಕೆ ಬಿಜೆಪಿ ವಿರೋಧ ಮಾಡಿದೆ ಎಂದರು.

ಗೃಹ ಸಚಿವರಿಗೆ ಪತ್ರ...
ನಿವಾಸಿ ಪ್ರಮಾಣ ಪತ್ರದ ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ. ಅಕ್ರಮ ವಲಸಿಗರಿಂದ ರಾಜ್ಯದ ಜನರ ಮೇಲೆ, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆಯೂ ನಾವು ಕೇಳಿದ್ದೇವೆ. ಇμÁ್ಟದರೂ ಎಚ್ಚೆತ್ತುಕೊಂಡು ಸರ್ಕಾರ ಕಾನೂನು ಉಲ್ಲಂಘಿಸಿ ಪಿಆರ್‍ಸಿ ನೀಡುವುದನ್ನು ಸ್ಥಗಿತಗೊಳಿಸಬೇಕು. ಕಾನೂನು ಪ್ರಕಾರ ಏನು ಮುಂದೆ ಹೋರಾಟ ಮಾಡಬಹುದು ಎಂಬುದನ್ನು ಪರಿಶೀಲಿಸಲಾಗುವುದು ಎಂದು ತಇಳಿಸಿದರು.

ಗೃಹ ಇಲಾಖೆ ಎಲ್ಲಿದೆ...
ಕರ್ನಾಟಕದ ಗೃಹ ಸಚಿವರು ಎಲ್ಲಿದ್ದಾರೆ. ಅವರು ಆರ್‍ಎಸ್‍ಎಸ್ ಸಚಿವರಾಗಿದ್ದಾರೆ. ಒಂದು ದಿನವೂ ಕೂಡ ಕರ್ನಾಟಕದಲ್ಲಿ ನಡೆಯುವ ಅತ್ಯಾಚಾರ, ಕೊಲೆ, ರಸ್ತೆ ಗಲಾಟೆ, ಡ್ರಗ್ಸ್ ಅಕ್ರಮಗಳ ಬಗ್ಗೆ ಮಾತನಾಡಿಲ್ಲ. ಬೆಳಗ್ಗೆದ್ದರೆ ಆರ್‍ಎಸ್‍ಎಸ್ ಬಗ್ಗೆ ಮಾತನಾಡುತ್ತಾರೆ. ಪರಮೇಶ್ವರ್ ಗೊತ್ತಿಲ್ಲ ಸಚಿವರು, ಇವರು ಆರ್‍ಎಸ್‍ಎಸ್ ಸಚಿವರು ಎಂದು ವ್ಯಂಗ್ಯವಾಡಿದರು.
ಐವತ್ತು ರೂಪಾಯಿ ಪಡೆದು ಎನ್ಯೂಮರೇಷನ್ ಫಾರಂಗಳನ್ನು ನೀಡಿದವರು ಮುಂದೆ ನಿವಾಸಿ ಪ್ರಮಾಣಪತ್ರಕ್ಕೆ ಹಣ ಪಡೆದು ಅಕ್ರಮವಾಗಿ ಪಿಆರ್‍ಸಿ ನೀಡುವುದಿಲ್ಲ ಎಂದು ನಂಬುವುದು ಹೇಗೆ ಎಂದು ಕೇಳಿದರು.

ಸರ್ಕಾರ ಕಾಂಗ್ರೆಸ್ ಪಾರ್ಟಿಯಾಗಿದೆ...
ಸರ್ಕಾರ ಸರ್ಕಾರವಾಗಿ ಕೆಲಸ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷವಾಗಿ ಸರ್ಕಾರ ಕೆಲಸ ಮಾಡುತ್ತಿದೆ. ಸರ್ಕಾರವಾಗಿದ್ದರೆ ಜವಾಬ್ದಾರಿಯಿಂದ ನಡೆದುಕೊಳ್ಳುತ್ತೆ. ಅಧಿಕಾರಿಗಳಿಗೆ ಒತ್ತಡ ಹಾಕಿ ಸರ್ಕಾರ ಕೆಲಸ ಮಾಡಿಸುತ್ತಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಲಿಂಗರಾಜು ಪಾಟೀಲ್, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು.ಮಂಜುಳಾ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಹಾಜರಿದ್ದರು.

Comments

Leave a Comment

Prev Post ಸಚಿವ ಈಶ್ವರ ಖಂಡ್ರೆಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
Next Post ಸರ್ಕಾರ ಕಿತ್ತೊಗೆಯಲು ಸಮನ್ವಯದಿಂದ ಕೆಲಸ: ಬಿ.ವೈ.ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News