ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಪ್ರಸ್ತಾವಿತ ಜಾಗ ಪರಿಶೀಲಿಸಿದ ARAI ಅಧಿಕಾರಿಗಳು ಬಸರಾಳು ಸಮೀಪದ 110 ಎಕರೆ ಸರಕಾರಿ ಭೂಮಿ ವೀಕ್ಷಣೆ; ಜಿಲ್ಲಾಧಿಕಾರಿ ಜತೆ ತಂಡದ ಸಮಾಲೋಚನೆ

Mandya:

Font size:

ಶೀಘ್ರದಲ್ಲಿ ವರದಿ ನೀಡಲಿರುವ ತಂಡ; ನಂತರ ತಾಂತ್ರಿಕ ತಂಡ ಸ್ಥಳಕ್ಕೆ ಕೇಂದ್ರದ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಕನಸಿನ ಯೋಜನೆ

ಮಂಡ್ಯ 16 ಮಾರ್ಚ್ 2026

ಮಂಡ್ಯ ಜಿಲ್ಲೆಯಲ್ಲಿ ಸ್ಥಾಪನೆಯಾಗಲಿರುವ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರಕ್ಕೆ ರಾಜ್ಯ ಸರಕಾರದಿಂದ ನೀಡಲಾಗುವುದು ಎಂದು ಹೇಳಿರುವ ಪ್ರಸ್ತಾವಿತ ಜಾಗವನ್ನು ಆ ಸಂಸ್ಥೆಯ ಉನ್ನತಾಧಿಕಾರಿಗಳು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸಂಸ್ಥೆಯ ಹಿರಿಯ ಉಪ ನಿರ್ದೇಶಕರಾದ ವಿ.ಎ. ಪಂಖಾವಾಲ, ಡಾ. ಬಿ.ವಿ. ಶ್ಯಾಮಸುಂದರ ಹಾಗೂ ಹಿರಿಯ ಪ್ರಧಾನ ವ್ಯವಸ್ಥಾಪಕ ಗಿರೀಶ್‌ ತನವಾಡೆ ಅವರು ಮಂಡ್ಯದ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಬಸರಾಳು ಸಮೀಪದಲ್ಲಿರುವ ಮದ್ದಿಘಟ್ಟ ಹಾಗೂ ಹೆಗ್ಗಡತಿಹಳ್ಳಿ ಗ್ರಾಮಗಳ ಬಳಿಯ ಜಾವನ್ನು ಖುದ್ದು ವೀಕ್ಷಿಸಿದರು.

ಈ ಎರಡು ಗ್ರಾಮಗಳ ಬಳಿ ಸುಮಾರು 110 ಎಕರೆ ಸರಕಾರಿ ಭೂಮಿ ಲಭ್ಯವಿದೆ ಎಂದು ರಾಜ್ಯ ಸರಕಾರ ತಿಳಿಸಿದ್ದು, ಎಆರ್‌ಎಐ ತಂಡವು ಈ ಭೂಮಿಯನ್ನು ವಿಸ್ತೃತವಾಗಿ ಪರಿಶೀಲನೆ ನಡೆಸಿತು. ಅಲ್ಲದೆ, ಜಾಗಕ್ಕೆ ಸಂಬಂಧಿತ ಅಗತ್ಯ ಮಾಹಿತಿಯನ್ನು ಕಂದಾಯ ಇಲಾಖೆ ಅಧಿಕಾರಿಗಳಿಂದ ಕಲೆ ಹಾಕಿತು.

ಈ ಭೂಮಿ ಎಆರ್‌ಎಐ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಅನುಕೂಲವಾಗಿವೆಯೇ ಇಲ್ಲವೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದದರು. ಈ ತಂಡದ ವರದಿಯ ನಂತರ ತಾಂತ್ರಿಕ ನಿಪುಣರ ತಂಡವು ಈ ಭೂಮಿಗಳನ್ನು ಪರಿಶೀಲನೆ ನಡೆಸಲಿದೆ.

ಭೂಮಿಯ ಸ್ವರೂಪ, ರಸ್ತೆ ಸಂಪರ್ಕ, ನೀರು, ವಿದ್ಯುತ್‌ ಸೇರಿ ಮೂಲಸೌಕರ್ಯಗಳ ಸಂಯೋಜನೆ ಸುಲಭ ಸಾಧ್ಯವೇ ಎಂಬುದರ ಬಗ್ಗೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆಯಿತು. ಅಲ್ಲದೆ, ತ್ವರಿತವಾಗಿ ತಾಂತ್ರಿಕ ತಂಡವೂ ಸ್ಥಳಕ್ಕೆ ಭೇಟಿ ಕಾರ್ಯಸಾಧ್ಯತಾ ವರದಿಯನ್ನು ನೀಡಲಿದೆ ಎಂದು ಹೇಳಿತು.

ಜಿಲ್ಲಾಧಿಕಾರಿಗಳ ಜತೆ ಭೆಟಿಯಾದ ಎಆರ್‌ಎಐ ತಂಡ:

ಸದರಿ ಭೂಮಿಯನ್ನು ವೀಕ್ಷಿಸಿದ ನಂತರ ಎಆರ್‌ಎಐ ಅಧಿಕಾರಿಗಳ ತಂಡವು ಮಂಡ್ಯ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿತು. ಈ ಸಂದರ್ಭದಲ್ಲಿ ಅಗತ್ಯವಿರುವ ಭೂಮಿ ಹೇಗಿರಬೇಕು ಎಂಬ ಪ್ರಾಥಮಿಕವಾಗಿ ಜಿಲ್ಲಾಧಿಕಾರಿಗಳೊಂದಿಗೆ ಅಧಿಕಾರಿಗಳು ಚರ್ಚಿಸಿದರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕುಮಾರ ಅವರು; ಎಆರ್‌ಎಐ ತಂಡವು ಬಸರಾಳು ಭೂಮಿಯನ್ನು ಪ್ರಾಥಮಿಕ ಪರಿಶೀಲನೆ ನಡೆಸಿದೆ. ಬಸರಾಳು ಹತ್ತಿರದ ಭೂಮಿ ಎಆರ್‌ಎಐ ಪರೀಕ್ಷಾ ಕೇಂದ್ರಕ್ಕೆ ಸೂಕ್ತವಾಗಿದೆ ಎಂದು ಹೇಳಿದೆಯೇ ವಿನಾ ಅಲ್ಲಿಯೇ ಕಾರ್ಯ ಸಾಧ್ಯತೆ ಆಗುತ್ತದೆಯೇ ಎಂಬುದನ್ನು ಹೇಳಿಲ್ಲ.

ಅಲ್ಲದೆ; ಈಗ ಬಂದಿರುವ ಮೂವರು ಅಧಿಕಾರಿಗಳ ತಂಡವು ಇಪ್ಪತ್ತು ದಿನಗಳಲ್ಲಿ ವರದಿ ನೀಡಲಿದ್ದು, ಆ ವರದಿ ಪರಿಶೀಲನೆ ನಂತರ ತಾಂತ್ರಿಕ ತಂಡ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಸಚಿವರ ಕನಸು ಈಡೇರುವುದಕ್ಕೆ ದೊಡ್ಡ ಹೆಜ್ಜೆ:

ಮಂಡ್ಯದಲ್ಲಿ ಕೇಂದ್ರದ ಬೃಹತ್‌ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿರುವ ಎಆರ್‌ಎಐ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯದ ಜನತೆಗೆ ಭರವಸೆ ನೀಡಿದ್ದರು. ಇದೇ ಮಾರ್ಚ್‌ 14ರಂದು ಮಂಡ್ಯದ ವಿ.ಸಿ. ಫಾರಂನಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಸಭೆಯಲ್ಲಿ ಮಾತನಾಡುತ್ತಾ, ಎಆರ್‌ಎಐ ಪರೀಕ್ಷಾ ಕೇಂದ್ರ ಸ್ಥಾಪನೆಯ ಪ್ರಕ್ರಿಯೆಗಳು ಆರಂಭವಾಗಿವೆ ಎಂದು ಹೇಳಿದ್ದರು. ಅದಾದ ಎರಡು ದಿನಗಳಲ್ಲಿಯೇ ಆ ಸಂಸ್ಥೆಯ ಉನ್ನತಾಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಯೋಜನೆಗೆ ಆರಂಭಿಕ ಹಂತದಲ್ಲಿ ₹ 500 ಕೋಟಿ, ನಂತರದ ದಿನಗಳಲ್ಲಿ ಇನ್ನೂ ₹ 500 ಕೋಟಿ ಹೂಡಿಕೆ ಮಾಡಲಾಗುವುದು. ಇದರಿಂದ ಮಂಡ್ಯದ ಅಭಿವೃದ್ಧಿಗೆ ಬಲ ಬರುವುದು ಮಾತ್ರವಲ್ಲದೆ, ಕರ್ನಾಟಕದಲ್ಲಿ ಆಟೋಮೊಬೈಲ್‌ ಕ್ಷೇತ್ರದ ಬೆಳವಣಿಗೆಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಸಚಿವರು ತಿಳಿಸಿದ್ದರು.

Comments

Leave a Comment

Prev Post ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ: ವಿಜಯೇಂದ್ರ
Next Post ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ಮನೆ ಬಾಗಿಲಿಗೆ ಬರುತ್ತದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News