PRABHAVAA.COM

ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಚೇತನ್ ಮಂಗಳೂರು ಸಮೀಪ ಪೊಲೀಸರ ಬಲೆಗೆ!

Dakshina Kannada:

Font size:

ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಚೇತನ್ ಮಂಗಳೂರು ಸಮೀಪ ಪೊಲೀಸರ ಬಲೆಗೆ!

From Jayram Udupi

ಮಂಗಳೂರು:
ಬಿ.ಸಿ.ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳನ್ನು ತಲ್ವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಚೇತನ್‌ನನ್ನು ಪೊಲೀಸರು ಶುಕ್ರವಾರ ಬೆಳಿಗ್ಗೆ ಮಂಗಳೂರು ಸಮೀಪ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಈ ವಿಷಯ ದೃಢಪಡಿಸಿದ್ದಾರೆ.

ಬಂಧಿತ ಆರೋಪಿ ಚೇತನ್ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿಯಾಗಿದ್ದು, ಮೃತ ಲಾವಣ್ಯ ಅವರನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಲಾವಣ್ಯ ಆತನ ಪ್ರೀತಿಯನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಗುರುವಾರ ಸಂಜೆ ಬಿ.ಸಿ.ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಸ್‌ನಲ್ಲಿ ಕುಳಿತಿದ್ದ ಲಾವಣ್ಯಳನ್ನು ಬಲವಂತವಾಗಿ ಕೆಳಗಿಳಿಸಿ, ಸಾರ್ವಜನಿಕರ ಎದುರೇ ತಲ್ವಾರ್‌ನಿಂದ ಹಲ್ಲೆ ನಡೆಸಿ ಹತ್ಯೆಗೈದು ಆರೋಪಿ ಪರಾರಿಯಾಗಿದ್ದ. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳುವಂತೆ ಮಾಡಿತ್ತು.

ಘಟನೆಗೆ ಸಂಬಂಧಿಸಿದಂತೆ ತಕ್ಷಣ ಕಾರ್ಯಾಚರಣೆ ಆರಂಭಿಸಿದ ಪೊಲೀಸರು, ವಿವಿಧ ತಂಡಗಳನ್ನು ರಚಿಸಿ ಶೋಧ ನಡೆಸಿ ಆರೋಪಿ ಚೇತನ್‌ನನ್ನು ಮಂಗಳೂರು ಸಮೀಪ ಬಂಧಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

Comments

Leave a Comment

Prev Post BMTC ಬಸ್ಸುಗಳಲ್ಲಿ ಶಬ್ಧಮಾಲಿನ್ಯ ತಡೆಗೆ ಕಠಿಣ ಕ್ರಮ: ಮೊಬೈಲ್ ಲೌಡ್‌ಸ್ಪೀಕರ್ ಹಾಡುಗಳಿಗೆ ಸಂಪೂರ್ಣ ನಿಷೇಧ,
Next Post ಬಿಡದಿ ಟೌನ್‌ಶಿಪ್ ಯೋಜನೆ: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ಧರಣಿ

ಮಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ; ದುಷ್ಕರ್ಮಿಗಳು ಪರಾರಿ.

ಮಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ; ದುಷ್ಕರ್ಮಿಗಳು ಪರಾರಿ.

ಬೆಂಗಳೂರು ಪೊಲೀಸ್‌ ತ್ವರಿತ ಕಾರ್ಯಾಚರಣೆ: ಇಬ್ಬರು ವೃದ್ಧರ ರಕ್ಷಣೆ

ಬೆಂಗಳೂರು ಪೊಲೀಸ್‌ ತ್ವರಿತ ಕಾರ್ಯಾಚರಣೆ: ಇಬ್ಬರು ವೃದ್ಧರ ರಕ್ಷಣೆ

ಮಂಗಳೂರು ನಗರದಲ್ಲಿ ಬಾಂಗ್ಲಾದೇಶಿ ಅಕ್ರಮ ವಲಸೆ ಜಾಲ ಭೇದನೆ – ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳು ಬಂಧನ

ಮಂಗಳೂರು ನಗರದಲ್ಲಿ ಬಾಂಗ್ಲಾದೇಶಿ ಅಕ್ರಮ ವಲಸೆ ಜಾಲ ಭೇದನೆ – ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳು ಬಂಧನ

ಬಂಟ್ವಾಳ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ, ಆರೋಪಿ ಪರಾರಿಯಲ್ಲಿ

ಬಂಟ್ವಾಳ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ, ಆರೋಪಿ ಪರಾರಿಯಲ್ಲಿ

Read all News