ಶಿಕ್ಷಕರ ಕೊರತೆಯನ್ನು ನಿವಾರಿಸಲು ಶಿಕ್ಷಣ ಇಲಾಖೆ ಎರಡನೇ ಹಂತದ ನೇಮಕಾತಿ ಪ್ರಕ್ರಿಯೆಯನ್ನು ಆರಂಭ
2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಬೋಧಕ ಹುದ್ದೆಗಳ ಕೊರತೆಯನ್ನು ಎದುರಿಸಲು ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ, ವಿದ್ಯಾರ್ಥಿಗಳ ಕಲಿಕೆ ಪ್ರಕ್ರಿಯೆ ಅಡ್ಡಿಯಾಗದಂತೆ ನೋಡಿಕೊಳ್ಳಲು, ಎರಡನೇ ಹಂತದಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಿದೆ.
ಈ ನಿರ್ಧಾರವು ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಮಾತ್ರ ಅನ್ವಯವಾಗಲಿದ್ದು, ಖಾಲಿ ಇರುವ ಬೋಧಕ ಹುದ್ದೆಗಳಿಗೆ ತಾತ್ಕಾಲಿಕ ಪರಿಹಾರವಾಗಿ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತದೆ. ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳ ಪಾಠ್ಯಕ್ರಮ ಹಿಂದುಳಿಯದಂತೆ ನೋಡಿಕೊಳ್ಳುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ.
ಶಿಕ್ಷಣ ಇಲಾಖೆಯ ಪ್ರಕಾರ, ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಜಿಲ್ಲಾವಾರು ಹಂತದಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ. ಈ ಮೂಲಕ ಶಾಲಾ ಮಕ್ಕಳಿಗೆ ನಿರಂತರವಾಗಿ ಪಾಠ ಕಲಿಸುವ ವ್ಯವಸ್ಥೆ ಖಚಿತಪಡಿಸಲಾಗುತ್ತಿದೆ.
ಈ ತಾತ್ಕಾಲಿಕ ನೇಮಕಾತಿ ಕ್ರಮವು ಶಿಕ್ಷಕರ ಕೊರತೆಯಿಂದಾಗಿ ಉಂಟಾಗುವ ಶೈಕ್ಷಣಿಕ ವ್ಯತ್ಯಯವನ್ನು ತಡೆಗಟ್ಟುವ ಪ್ರಯತ್ನವಾಗಿದ್ದು, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ತ್ವರಿತ ನಿರ್ಧಾರ ಕೈಗೊಂಡಿದೆ.
ಆಯುಕ್ತರ ಕಛೇರಿಯಿಂದ ಹೊರಬಂದ DPI-CPIOC3-1(GUES)/2/2026 ಆದೇಶದ ಪ್ರಕಾರ, 2026-27ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ಒಟ್ಟು 40,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಈ ನೇಮಕಾತಿ ಕ್ರಮವು ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಅಥವಾ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಮಾತ್ರ ಅನ್ವಯವಾಗಲಿದೆ.
ಸರ್ಕಾರದ ಆದೇಶದಂತೆ ಪ್ರಥಮ ಹಂತದಲ್ಲಿ 30,337 ಹುದ್ದೆಗಳಿಗೆ ಜಿಲ್ಲಾವಾರು ಮತ್ತು ತಾಲ್ಲೂಕುವಾರು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ನಂತರ ಉಪ ನಿರ್ದೇಶಕರ ಮನವಿಗಳ ಮೇರೆಗೆ ಎರಡನೇ ಹಂತದಲ್ಲಿ ಹೆಚ್ಚುವರಿ 9,663 ಹುದ್ದೆಗಳಲ್ಲಿ 6,617 ಹುದ್ದೆಗಳನ್ನು ವಿದ್ಯಾರ್ಥಿ-ಶಿಕ್ಷಕರ ಅನುಪಾತ (PTR) ಆಧಾರದ ಮೇಲೆ ಹಂಚಿಕೆ ಮಾಡಲಾಗಿದೆ. ಈ ಹಂಚಿಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕೆಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಆದೇಶದಲ್ಲಿ ತಾಲ್ಲೂಕು ಹಂತದಲ್ಲಿ ಶಾಲಾವಾರು ಹುದ್ದೆ ಹಂಚಿಕೆ ಆದೇಶವನ್ನು ಕೂಡಲೇ ಹೊರಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನೇಮಕಗೊಂಡ ಅತಿಥಿ ಶಿಕ್ಷಕರ ವಿವರಗಳನ್ನು ಜಿಲ್ಲಾವಾರು ಕ್ರೋಡೀಕರಿಸಿ PDF ಮಾದರಿಯಲ್ಲಿ primarydpi@gmail.com ಗೆ ಕಳುಹಿಸುವುದು ಕಡ್ಡಾಯವಾಗಿದೆ. ವಿಳಂಬ ಅಥವಾ ನಿಯಮ ಉಲ್ಲಂಘನೆ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಜಿಲ್ಲಾವಾರು ಹಂಚಿಕೆ ಪ್ರಕಾರ ವಿಜಯನಗರದಲ್ಲಿ 668, ಬಳ್ಳಾರಿಯಲ್ಲಿ 1,741, ಕಲಬುರಗಿಯಲ್ಲಿ 2,136, ರಾಯಚೂರಿನಲ್ಲಿ 3,754, ಬೆಳಗಾವಿಯಲ್ಲಿ 2,278, ಮೈಸೂರಿನಲ್ಲಿ 904 ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ PTR ಅನುಪಾತದಂತೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಈ ಮೂಲಕ ವಿದ್ಯಾರ್ಥಿಗಳ ಕಲಿಕೆ ಪ್ರಕ್ರಿಯೆ ಅಡ್ಡಿಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ.






Comments
Leave a Comment