PRABHAVAA.COM

ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲ

Bengaluru Urban:

Font size:

ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲ

ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲ

*ವಿಜಯಪುರ ವಿಮಾನ ನಿಲ್ದಾಣಕ್ಕೆ ಇದ್ದ ಅಡೆತಡೆ ನಿವಾರಿಸಿದ
ಸುಪ್ರೀಂಕೋರ್ಟ್*

ಬೆಂಗಳೂರು: ಕಾರ್ಯಾರಂಭ‌ ಮಾಡಲು ಸಿದ್ಧವಾಗಿರುವ ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಇದ್ದ ಪರಿಸರ ಸಂಬಂಧಿ ಅನುಮತಿಯ ಅಡೆತಡೆಯನ್ನು ಸುಪ್ರೀಂಕೋರ್ಟಿನ ತ್ರಿಸದಸ್ಯ ಪೀಠವು ಬುಧವಾರ ನೀಡಿರುವ ಅಂತಿಮ‌ ತೀರ್ಪಿನಲ್ಲಿ ನಿವಾರಿಸಿದೆ. ಹೀಗಾಗಿ ಮುಂದಿನ ಪ್ರಕ್ರಿಯೆಗಳು ನಿರೀಕ್ಷೆಯಂತೆ ನಡೆದರೆ ಮೂರು ತಿಂಗಳೊಳಗೆ ವಿಮಾನ‌ ನಿಲ್ದಾಣದ ಲೋಕಾರ್ಪಣೆ ನೆರವೇರಿಸಬಹುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಈ ಸಂಬಂಧ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾ.ಜಯಮಾಲ್ಯ ಬಾಗ್ಚಿ ಮತ್ತು ನ್ಯಾ.ವಿಪುಲ್ ಎಂ ಪಾಂಚೋಲಿ ಅವರಿದ್ದ ಪೀಠವು ನೀಡಿರುವ ಅಂತಿಮ ತೀರ್ಪು ಸ್ವಾಗತಾರ್ಹ ಎಂದಿದ್ದಾರೆ.

ಅಲ್ಲದೆ, ಈ ವಿಚಾರದಲ್ಲಿ ವಿಜಯಪುರ ವಿಮಾನ ನಿಲ್ದಾಣ ಯೋಜನೆಯಲ್ಲಿ ಇರುವ ಸಾರ್ವಜನಿಕ ಹಿತಾಸಕ್ತಿಯನ್ನು ತಿಳಿದುಕೊಂಡು, ರಾಜ್ಯದ ಪರವಾಗಿ ವಿಚಾರ ಮಂಡಿಸಿದ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹತಾ, ಹೆಸರಾಂತ ನ್ಯಾಯವಾದಿ ಕಪಿಲ್ ಸಿಬಲ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ರಾಜ್ಯದ ಪರ ವಕೀಲ ನಿಶಾಂತ್ ಪಾಟೀಲ್ ಅವರಿಗೆ ಸಚಿವರು ವಿಶೇಷ ಧನ್ಯವಾದಗಳನ್ನು ಹೇಳಿದ್ದಾರೆ.

ಖಾಸಗಿ ಸೇರಿದಂತೆ ಸಾರ್ವಜನಿಕ ಹಿತಾಸಕ್ತಿಯ ಯೋಜನೆಗಳನ್ನು ಕೈಗೆತ್ತಿಕೊಳ್ಳುವಾಗಲೇ ಪರಿಸರ ಸಂಬಂಧಿ ಅನುಮೋದನೆಗಳನ್ನು ತೆಗೆದುಕೊಳ್ಳಬೇಕಾದ್ದು ಕಡ್ಡಾಯವಾಗಿದೆ. ಇದನ್ನು ಪಾಲಿಸದ ದೇಶದ ಎಲ್ಲಾ ಯೋಜನೆಗಳನ್ನೂ ರದ್ದುಪಡಿಸುವಂತೆ ಸುಪ್ರೀಂಕೋರ್ಟ್ 2025ರ ಮೇ 16ರಂದು ಆದೇಶಿಸಿತ್ತು. ಇದರಿಂದಾಗಿ ವಿಜಯಪುರ ಏರ್ಪೋರ್ಟ್ ಯೋಜನೆಗೂ ಸಂಕಷ್ಟ ಎದುರಾಗಿತ್ತು. ಆಗ ನಾನು ಮೆಹತಾ, ಸಿಬಲ್ ಮತ್ತು ಪಾಟೀಲ್ ಅವರನ್ನು ಸಂಪರ್ಕಿಸಿ, ಈ ತೊಡಕನ್ನು ನಿವಾರಿಸಲು ಕೇಳಿಕೊಂಡಿದ್ದೆ. ಇಂದಿನ ಅಂತಿಮ ತೀರ್ಪಿನಿಂದ ನಿರಾಳವಾಗಿದ್ದೇನೆ ಎಂದು ಅವರು ನೆನಪಿಸಿಕೊಂಡಿದ್ದಾರೆ.

ಪರಿಸರ ಸಂಬಂಧಿ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಈಗ ಹೇಳಲಾಗಿದೆ. ಹೀಗಾಗಿ ವಿಜಯಪುರ ಏರ್ಪೋರ್ಟ್ ಸಂಬಂಧದ ಅಗತ್ಯ ಅನುಮತಿ ಸಿಗಲು ದಾರಿ ಸುಗಮವಾಗಿದೆ.‌ ಇದಾದ ಬಳಿಕ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ವಿಜಯಪುರಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಆಗಿರುವ ಕೆಲಸಗಳನ್ನು ಪರಿಶೀಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಸುಪ್ರೀಂಕೋರ್ಟ್ ಈ ವರ್ಷದ ಏ.1ರಂದು ವಿಚಾರಣೆ ನಡೆಸಿದಾಗ, ಪರಿಸರ ಸಂಬಂಧಿ ಅನುಮತಿಗೆ ಕಾಯುತ್ತಿರುವ ಯೋಜನೆಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿ, ವಿಸ್ತೃತ ಅಧ್ಯಯನಕ್ಕೆ ಸೂಚಿಸಿ, ಅಂತಿಮ‌ ತೀರ್ಪನ್ನು ಕಾದಿರಿಸಿತ್ತು. ಇವತ್ತು ನೀಡಿರುವ ತೀರ್ಪಿನಲ್ಲಿ ಶಾಶ್ವತ ವಿನಾಯಿತಿ ನೀಡಿದೆ. ಏತನ್ಮಧ್ಯೆ ನಾವು ವಿಜಯಪುರ ಏರ್ಪೋರ್ಟ್ ಸಂಬಂಧ ಪರಿಸರ ಸಂಬಂಧಿ ಅನುಮತಿ ಕೋರಿ ಅರ್ಜಿ ಹಾಕಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ಪರಿಸರ ಸಂಬಂಧಿ ಒಪ್ಪಿಗೆ ಸಿಕ್ಕಿದ ಬಳಿಕ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ವಿಜಯಪುರ ವಿಮಾನ ನಿಲ್ದಾಣದಲ್ಲಿ ಆಗಿರುವ ಕೆಲಸಗಳನ್ನು ಪರಿಶೀಲಿಸಲಿದ್ದಾರೆ. ಅದೊಂದು ಪ್ರಕ್ರಿಯೆ ಮುಗಿದರೆ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ದಾರಿ ಸುಗಮವಾಗಲಿದೆ ಎಂದು ಪಾಟೀಲ ಹೇಳಿದ್ದಾರೆ.

ಈ ವಿಮಾನ ನಿಲ್ದಾಣ ನಿರ್ಮಾಣಕ್ಕೆ 614
ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ವಿನಿಯೋಗಿಸಲಾಗಿದೆ. ಇದು ಕಾರ್ಯಾರಂಭ ಮಾಡಿದರೆ ಕಿತ್ತೂರು ಕರ್ನಾಟಕ ಮತ್ತು ನೆರೆ ಹೊರೆ ಪ್ರದೇಶಗಳಿಗೂ ಅನುಕೂಲವಾಗಲಿದೆ ಎಂದು ಪಾಟೀಲ ಪ್ರತಿಪಾದಿಸಿದ್ದಾರೆ.

Comments

Leave a Comment

Prev Post ಕಾವೇರಿ ನೀರು – ತಮಿಳುನಾಡಿಗೆ ಬಿಡುವ ನಿರ್ಧಾರ ವಿರುದ್ಧ ಮಂಡ್ಯದಲ್ಲಿ ಜು.31ರಂದು ಬೃಹತ್ ಹೋರಾಟಕ್ಕೆ ವಿಜಯೇಂದ್ರ ಕರೆ
Next Post CWRC ಆದೇಶ ಅವೈಜ್ಞಾನಿಕ ಎಂದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News