ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬ ಇಚ್ಛಾಶಕ್ತಿ ಹೊಂದಿದ ಡಿ.ವಿ.ಸದಾನಂದಗೌಡರು- ಬಿ.ವೈ.ವಿಜಯೇಂದ್ರ

Bengaluru Urban:

Font size:

ಜಿ.ಬಿ.ಎ ಚುನಾವಣೆಯಲ್ಲೂ ವಿಜಯಪತಾಕೆ ಹಾರಿಸುವ ನಿಟ್ಟಿನಲ್ಲಿ ಶ್ರಮ ಹಾಕೋಣ

ಬೆಂಗಳೂರು: ಮುಂದೆಯೂ ಬಿಜೆಪಿ, ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮೂಲಕ ರಾಜ್ಯದ ಜನರಿಗೂ ಒಳಿತಾಗಬೇಕು; ಪಕ್ಷದ ಕಾರ್ಯಕರ್ತರಿಗೂ ಒಳಿತಾಗಬೇಕೆಂಬ ಇಚ್ಛಾಶಕ್ತಿ ಇಟ್ಟುಕೊಂಡವರು ಡಿ.ವಿ. ಸದಾನಂದಗೌಡರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ, ರಾಜ್ಯದ ಜನತೆಯ ಪರವಾಗಿ ಶುಭ ಕೋರಿದರು. ಪಕ್ಷದ ಅಭಿಮಾನಿಗಳು, ಮುಖಂಡರು ದೊಡ್ಡ ಸಂಖ್ಯೆಯಲ್ಲಿ ಇದ್ದೀರಿ. ಡಿ.ವಿ.ಸದಾನಂದಗೌಡರು ನಮ್ಮೆಲ್ಲರಿಗೂ ಪ್ರೇರಣೆ ಎಂದು ತಿಳಿಸಿದರು. ‘ವಿಜಯೇಂದ್ರ ಅವರೇ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಬರುವ ದಿನಗಳಲ್ಲಿ ಬಿಜೆಪಿ ವಿಜಯಪತಾಕೆ ಮತ್ತೊಮ್ಮೆ ರಾಜ್ಯದಲ್ಲಿ ಹಾರಬೇಕು. ಇದಕ್ಕಾಗಿ ನಾವು- ನೀವು ಸೇರಿ ಸಂಘಟನೆಯನ್ನು ಬಲಪಡಿಸೋಣ; ಒಟ್ಟಿಗೆ ಪ್ರವಾಸ ಮಾಡೋಣ’ ಎಂಬ ಮಾತುಗಳನ್ನು ಸದಾನಂದಗೌಡರು ಹೇಳಿದ್ದಾರೆ ಎಂದು ನೆನಪಿಸಿಕೊಂಡರು.
ಡಿ.ವಿ.ಸದಾನಂದಗೌಡರ ಮಾರ್ಗದರ್ಶನ- ಆಶೀರ್ವಾದದೊಂದಿಗೆ ನಾವೆಲ್ಲರೂ ಒಟ್ಟಾಗಿ, ಒಂದಾಗಿ ಪಕ್ಷವನ್ನು ಬಲಪಡಿಸಲು ಹೆಜ್ಜೆಯನ್ನು ಮುಂದೆ ಇಡೋಣ. ಮುಂಬರುವ ಜಿ.ಬಿ.ಎ ಚುನಾವಣೆಯಲ್ಲೂ ವಿಜಯಪತಾಕೆ ಹಾರಿಸುವ ನಿಟ್ಟಿನಲ್ಲಿ ಶ್ರಮ ಹಾಕೋಣ ಎಂದು ನುಡಿದರು. ಪಕ್ಷದ ಪದಾಧಿಕಾರಿಗಳು, ಶಾಸಕರು, ಪ್ರಮುಖರು ಇದ್ದರು.

Comments

Leave a Comment

Prev Post ಅಂಗನವಾಡಿ ಕಾರ್ಯಕರ್ತೆಯರ ಕಡೆ ಕೇಂದ್ರ ಸರ್ಕಾರವೂ ಕಣ್ತೆರೆಯಲಿ: ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News