PRABHAVAA.COM

ಅಕ್ಟೋಬರ್ ನಲ್ಲಿ ಅಮೆರಿಕದಲ್ಲಿ ರೋಡ್-ಶೋ: ಎಂ ಬಿ ಪಾಟೀಲ

Bengaluru Urban:

Font size:

ಸಚಿವ ಪಾಟೀಲರನ್ನು ಭೇಟಿಯಾದ ಅಮೆರಿಕದ ಕಾನ್ಸುಲೇಟ್ ಜನರಲ್

ಸಚಿವ ಪಾಟೀಲರನ್ನು ಭೇಟಿಯಾದ ಅಮೆರಿಕದ ಕಾನ್ಸುಲೇಟ್ ಜನರಲ್

ಬೆಂಗಳೂರು: ರಾಜ್ಯಕ್ಕೆ ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಗುರಿಯೊಂದಿಗೆ ಅಕ್ಟೋಬರ್ ತಿಂಗಳಿನಲ್ಲಿ ಅಮೆರಿಕದಲ್ಲಿ ರೋಡ್-ಶೋ ನಡೆಸಲಾಗುವುದು. ಇದಕ್ಕೆ ಆ ದೇಶದ ಕಾನ್ಸುಲೇಟ್ ಜನರಲ್ ಕಚೇರಿಯು ಅಗತ್ಯ ನೆರವು ನೀಡಲಿದೆ. ಜತೆಗೆ ಮುಂದಿನ ವರ್ಷದ ಏಪ್ರಿಲ್ ನಲ್ಲಿ ನಡೆಸಲು ಉದ್ದೇಶಿಸಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಅಮೆರಿಕವನ್ನೂ ಆಹ್ವಾನಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಶುಕ್ರವಾರ ತಮ್ಮನ್ನು ಇಲ್ಲಿ ಭೇಟಿಯಾದ ಅಮೆರಿಕದ ಕಾನ್ಸುಲೇಟ್ ಜನರಲ್ ಮರಿಯಾನ ಎಲ್ ನೀಸ್ಲರ್ ಅವರೊಂದಿಗೆ ಸಚಿವರು ಹೂಡಿಕೆ ಮತ್ತಿತರ ಸಂಗತಿಗಳ ಕುರಿತು ವಿಸ್ತೃತ ಮಾತುಕತೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಅಮೆರಿಕದ ನಡುವಿನ ವಾಣಿಜ್ಯ ಸಹಯೋಗದ ಬಲವರ್ಧನೆಗೆ ನಾವೀಗ ಒತ್ತು ಕೊಟ್ಟಿದ್ದೇವೆ. ಇದಕ್ಕಾಗಿ ಕಾನ್ಸುಲೇಟ್ ಜನರಲ್ ಕಚೇರಿಯೊಂದಿಗೆ ನಿರಂತರವಾಗಿ ವ್ಯವಹರಿಸಲು ಅಗತ್ಯವಿರುವ ಸಾಂಸ್ಥಿಕ ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರಲಾಗುವುದು. ಇದು ಅಮೆರಿಕದ ವಾಣಿಜ್ಯ ಇಲಾಖೆ, ಅಮ್ಚಮ್, ಮತ್ತು ಅಮೆರಿಕ-ಭಾರತ ವಾಣಿಜ್ಯ ಸಮಿತಿಯೊಂದಿಗೆ ವ್ಯವಹರಿಸಲಿದೆ. ಇದು ಇನ್ವೆಸ್ಟ ಕರ್ನಾಟಕದ ಮೂಲಕ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಅಮೆರಿಕದ 700 ಕಂಪನಿಗಳು ಸಕ್ರಿಯವಾಗಿದ್ದು, ನಮ್ಮ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುತ್ತಿವೆ. ಇದು ಇಲ್ಲಿನ ಪ್ರತಿಭೆ, ತಂತ್ರಜ್ಞಾನ, ನಾವೀನ್ಯತೆ ಮತ್ತು ತಯಾರಿಕೆಯ ಕಾರ್ಯ ಪರಿಸರದ ಮೇಲೆ ಆ ದೇಶವು ಇಟ್ಟಿರುವ ವಿಶ್ವಾಸವನ್ನು ತೋರಿಸುತ್ತದೆ. ಇದರ ಸಂಕೇತವಾಗಿ ಅಮೆರಿಕದ ಕಾನ್ಸುಲೇಟ್ ಕಚೇರಿಯು 2025ರ ಜನವರಿಯಿಂದ ಬೆಂಗಳೂರಿನಲ್ಲೂ ಕಾರ್ಯ ನಿರ್ವಹಿಸುತ್ತಿದೆ ಎಂದಿದ್ದಾರೆ.

ರಾಜ್ಯವು ಅಮೆರಿಕದೊಂದಿಗೆ ಈಗಾಗಲೇ ಸಂಶೋಧನೆ ಮತ್ತು ಅಭಿವೃದ್ಧಿ, ಸೆಮಿಕಂಡಕ್ಟರ್ ಸಾಧನಗಳು, ಏರೋಸ್ಪೇಸ್, ರಕ್ಷಣೆ, ಆರೋಗ್ಯ ಸೇವೆ, ಶುದ್ಧ ಇಂಧನ ಮತ್ತು ಜಿಸಿಸಿ ಕೇಂದ್ರಗಳ ವಲಯದಲ್ಲಿ ರಚನಾತ್ಮಕ ಸಹಯೋಗ ಹೊಂದಿದೆ. ಬೆಂಗಳೂರು ದೇಶದ ತಂತ್ರಜ್ಞಾನದ ರಾಜಧಾನಿಯಾಗಿದ್ದು, ಮುಂದಿನ ದಿನಗಳಲ್ಲಿ ನವೋದ್ಯಮ, ಸಂಶೋಧನಾ ಸಂಸ್ಥೆಗಳು ಮತ್ತು ಉತ್ಪಾದನಾ ವಲಯಗಳಲ್ಲಿ ಹೆಚ್ಚಿನ ಸಹಕಾರಕ್ಕೆ ಅವಕಾಶಗಳಿವೆ. ಇದರ ಜತೆಗೆ ಇ.ಎಸ್.ಡಿ.ಎಂ, ಚಿಪ್ ವಿನ್ಯಾಸ, ಮೆಡ್-ಟೆಕ್, ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ಕ್ಷೇತ್ರಗಳಲ್ಲೂ ಬಾಗಿಲು ತೆರೆದಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ಬಕುಮಾರ್, ಕೈಗಾರಿಕಾ ಆಯುಕ್ತೆ ಖುಷ್ಬು ಗೋಯಲ್ ಹಾಜರಿದ್ದರು.

ಬೆಂಗಳೂರು: ರಾಜ್ಯಕ್ಕೆ ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಗುರಿಯೊಂದಿಗೆ ಅಕ್ಟೋಬರ್ ತಿಂಗಳಿನಲ್ಲಿ ಅಮೆರಿಕದಲ್ಲಿ ರೋಡ್-ಶೋ ನಡೆಸಲಾಗುವುದು. ಇದಕ್ಕೆ ಆ ದೇಶದ ಕಾನ್ಸುಲೇಟ್ ಜನರಲ್ ಕಚೇರಿಯು ಅಗತ್ಯ ನೆರವು ನೀಡಲಿದೆ. ಜತೆಗೆ ಮುಂದಿನ ವರ್ಷದ ಏಪ್ರಿಲ್ ನಲ್ಲಿ ನಡೆಸಲು ಉದ್ದೇಶಿಸಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಅಮೆರಿಕವನ್ನೂ ಆಹ್ವಾನಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಶುಕ್ರವಾರ ತಮ್ಮನ್ನು ಇಲ್ಲಿ ಭೇಟಿಯಾದ ಅಮೆರಿಕದ ಕಾನ್ಸುಲೇಟ್ ಜನರಲ್ ಮರಿಯಾನ ಎಲ್ ನೀಸ್ಲರ್ ಅವರೊಂದಿಗೆ ಸಚಿವರು ಹೂಡಿಕೆ ಮತ್ತಿತರ ಸಂಗತಿಗಳ ಕುರಿತು ವಿಸ್ತೃತ ಮಾತುಕತೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಅಮೆರಿಕದ ನಡುವಿನ ವಾಣಿಜ್ಯ ಸಹಯೋಗದ ಬಲವರ್ಧನೆಗೆ ನಾವೀಗ ಒತ್ತು ಕೊಟ್ಟಿದ್ದೇವೆ. ಇದಕ್ಕಾಗಿ ಕಾನ್ಸುಲೇಟ್ ಜನರಲ್ ಕಚೇರಿಯೊಂದಿಗೆ ನಿರಂತರವಾಗಿ ವ್ಯವಹರಿಸಲು ಅಗತ್ಯವಿರುವ ಸಾಂಸ್ಥಿಕ ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರಲಾಗುವುದು. ಇದು ಅಮೆರಿಕದ ವಾಣಿಜ್ಯ ಇಲಾಖೆ, ಅಮ್ಚಮ್, ಮತ್ತು ಅಮೆರಿಕ-ಭಾರತ ವಾಣಿಜ್ಯ ಸಮಿತಿಯೊಂದಿಗೆ ವ್ಯವಹರಿಸಲಿದೆ. ಇದು ಇನ್ವೆಸ್ಟ ಕರ್ನಾಟಕದ ಮೂಲಕ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಅಮೆರಿಕದ 700 ಕಂಪನಿಗಳು ಸಕ್ರಿಯವಾಗಿದ್ದು, ನಮ್ಮ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುತ್ತಿವೆ. ಇದು ಇಲ್ಲಿನ ಪ್ರತಿಭೆ, ತಂತ್ರಜ್ಞಾನ, ನಾವೀನ್ಯತೆ ಮತ್ತು ತಯಾರಿಕೆಯ ಕಾರ್ಯ ಪರಿಸರದ ಮೇಲೆ ಆ ದೇಶವು ಇಟ್ಟಿರುವ ವಿಶ್ವಾಸವನ್ನು ತೋರಿಸುತ್ತದೆ. ಇದರ ಸಂಕೇತವಾಗಿ ಅಮೆರಿಕದ ಕಾನ್ಸುಲೇಟ್ ಕಚೇರಿಯು 2025ರ ಜನವರಿಯಿಂದ ಬೆಂಗಳೂರಿನಲ್ಲೂ ಕಾರ್ಯ ನಿರ್ವಹಿಸುತ್ತಿದೆ ಎಂದಿದ್ದಾರೆ.

ರಾಜ್ಯವು ಅಮೆರಿಕದೊಂದಿಗೆ ಈಗಾಗಲೇ ಸಂಶೋಧನೆ ಮತ್ತು ಅಭಿವೃದ್ಧಿ, ಸೆಮಿಕಂಡಕ್ಟರ್ ಸಾಧನಗಳು, ಏರೋಸ್ಪೇಸ್, ರಕ್ಷಣೆ, ಆರೋಗ್ಯ ಸೇವೆ, ಶುದ್ಧ ಇಂಧನ ಮತ್ತು ಜಿಸಿಸಿ ಕೇಂದ್ರಗಳ ವಲಯದಲ್ಲಿ ರಚನಾತ್ಮಕ ಸಹಯೋಗ ಹೊಂದಿದೆ. ಬೆಂಗಳೂರು ದೇಶದ ತಂತ್ರಜ್ಞಾನದ ರಾಜಧಾನಿಯಾಗಿದ್ದು, ಮುಂದಿನ ದಿನಗಳಲ್ಲಿ ನವೋದ್ಯಮ, ಸಂಶೋಧನಾ ಸಂಸ್ಥೆಗಳು ಮತ್ತು ಉತ್ಪಾದನಾ ವಲಯಗಳಲ್ಲಿ ಹೆಚ್ಚಿನ ಸಹಕಾರಕ್ಕೆ ಅವಕಾಶಗಳಿವೆ. ಇದರ ಜತೆಗೆ ಇ.ಎಸ್.ಡಿ.ಎಂ, ಚಿಪ್ ವಿನ್ಯಾಸ, ಮೆಡ್-ಟೆಕ್, ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ಕ್ಷೇತ್ರಗಳಲ್ಲೂ ಬಾಗಿಲು ತೆರೆದಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ಬಕುಮಾರ್, ಕೈಗಾರಿಕಾ ಆಯುಕ್ತೆ ಖುಷ್ಬು ಗೋಯಲ್ ಹಾಜರಿದ್ದರು.

Comments

Leave a Comment

Prev Post ಮುಖ್ಯಮಂತ್ರಿಗಳಿಂದ ಗೃಹಲಕ್ಷ್ಮಿ ಯೋಜನೆಗೆ 2443 ಕೋಟಿ ರೂ. ಹಣ ಬಿಡುಗಡೆ:
Next Post ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ ಡಿ ಕೆ ಶಿವಕುಮಾರ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News