PRABHAVAA.COM

ಖಾಸಗಿ ಶಾಲೆಗಳ ಶುಲ್ಕದ ವಿವರ ಪ್ರಕಟಿಸಲು ಶಿಕ್ಷಣ ಇಲಾಖೆ ಸುತ್ತೋಲೆ, ನಿಯಮ ಉಲ್ಲಂಘನೆಗೆ ಭಾರೀ ದಂಡ ಎಚ್ಚರಿಕೆ

Bengaluru Urban:

Font size:

ಖಾಸಗಿ ಶಾಲೆಗಳ ಶುಲ್ಕದ ವಿವರ ಪ್ರಕಟಿಸಲು ಶಿಕ್ಷಣ ಇಲಾಖೆ ಸುತ್ತೋಲೆ, ನಿಯಮ ಉಲ್ಲಂಘನೆಗೆ ಭಾರೀ ದಂಡ ಎಚ್ಚರಿಕೆ

ಖಾಸಗಿ ಶಾಲೆಗಳ ಶುಲ್ಕದ ವಿವರ ಪ್ರಕಟಿಸಲು ಶಿಕ್ಷಣ ಇಲಾಖೆ ಸುತ್ತೋಲೆ, ನಿಯಮ ಉಲ್ಲಂಘನೆಗೆ ಭಾರೀ ದಂಡ ಎಚ್ಚರಿಕೆ

ಬೆಂಗಳೂರು , ಆ.7-ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಖಾಸಗಿ ಅನುದಾನರಹಿತ ಶಾಲೆಗಳ ಶುಲ್ಕದ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ಹೊಸ ಸುತ್ತೋಲೆ ಹೊರಡಿಸಿದ್ದಾರೆ. ಶಿಕ್ಷಣ ಹಕ್ಕು ಕಾಯಿದೆ-2009 ಮತ್ತು ಕರ್ನಾಟಕ ಕಡ್ಡಾಯ ಹಾಗೂ ಉಚಿತ ಪ್ರಾಥಮಿಕ ಶಿಕ್ಷಣ ಹಕ್ಕು ನಿಯಮಗಳು-2012ರ ಪ್ರಕಾರ, ಯಾವುದೇ ಖಾಸಗಿ ಶಾಲೆಗಳು ಕ್ಯಾಪಿಟೇಶನ್ ಶುಲ್ಕ ಅಥವಾ ದೇಣಿಗೆಗಳನ್ನು ವಸೂಲಿಸಬಾರದು. ವಿದ್ಯಾರ್ಥಿಗಳ ದಾಖಲಾತಿ ವೇಳೆ ಯಾವುದೇ ರೀತಿಯ ಸ್ಕ್ರೀನಿಂಗ್ ವಿಧಾನ ಅನುಸರಿಸುವುದೂ ನಿಷೇಧ ಮಾಡಲಾಗಿದೆ.

ಸೆಕ್ಷನ್ 13ರ ಪ್ರಕಾರ, ಪ್ರವೇಶಕ್ಕೆ ಕ್ಯಾಪಿಟೇಶನ್ ಶುಲ್ಕ ವಸೂಲಿಸಿದರೆ ಪಾವತಿಸಿದ ಮೊತ್ತದ ಹತ್ತು ಪಟ್ಟು ದಂಡ ವಿಧಿಸಲಾಗುತ್ತದೆ. ಸ್ಕ್ರೀನಿಂಗ್ ವಿಧಾನ ಅನುಸರಿಸಿದರೆ ಮೊದಲ ಉಲ್ಲಂಘನೆಗೆ ₹25,000 ದಂಡ, ನಂತರದ ಉಲ್ಲಂಘನೆಗಳಿಗೆ ₹50,000 ದಂಡ ವಿಧಿಸಲಾಗುತ್ತದೆ. ಎಲ್ಲಾ ಖಾಸಗಿ ಶಾಲೆಗಳು ತಮ್ಮ ಶುಲ್ಕದ ವಿವರಗಳನ್ನು ಶಾಲಾ ಜಾಲತಾಣದಲ್ಲಿ, ಶಾಲಾ ಸೂಚನಾ ಫಲಕದಲ್ಲಿ ಹಾಗೂ ಇಲಾಖೆಯ SATS ಜಾಲತಾಣದಲ್ಲಿ ಪ್ರಕಟಿಸಬೇಕೆಂದು ಕಡ್ಡಾಯಗೊಳಿಸಲಾಗಿದೆ.

ಯಾವುದೇ ಶಾಲೆಗಳು ಈ ನಿಯಮಗಳನ್ನು ಉಲ್ಲಂಘಿಸಿದರೆ ಸಂಬಂಧಪಟ್ಟ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಯುಕ್ತರು ಸೂಚಿಸಿದ್ದಾರೆ. ಈ ಸುತ್ತೋಲೆ ಮೇಲೆ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು 03 ಆಗಸ್ಟ್ 2026ರಂದು ಡಿಜಿಟಲ್ ಸಹಿ ಮಾಡಿದ್ದಾರೆ.

ರಾಜ್ಯದ ಎಲ್ಲಾ ಖಾಸಗಿ ಶಾಲೆಗಳು ತಮ್ಮ ಶುಲ್ಕದ ವಿವರಗಳನ್ನು ಪಾರದರ್ಶಕವಾಗಿ ಪ್ರಕಟಿಸಬೇಕು, ಪೋಷಕರಿಗೆ ಯಾವುದೇ ರೀತಿಯ ಹೆಚ್ಚುವರಿ ಭಾರ ಹಾಕಬಾರದು, ನಿಯಮ ಉಲ್ಲಂಘಿಸಿದರೆ ಕಠಿಣ ದಂಡ ವಿಧಿಸಲಾಗುವುದು ಎಂಬುದಾಗಿ ಇಲಾಖೆ ಎಚ್ಚರಿಸಿದೆ

Comments

Leave a Comment

Prev Post ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ ಡಿ ಕೆ ಶಿವಕುಮಾರ್

ದೇಶ ಹಾಗೂ ರಾಜ್ಯದ ಬೆಳವಣಿಗೆಗೆ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಎಲ್ಲರೂ ಜ್ಞಾನ ಹಂಚಿಕೊಂಡು ಬಾಳಬೇಕು ಬೆಂಗಳೂರಿನ ಹೆಮ್ಮೆ ಜ್ಯೋತಿ ನಿವಾಸ್ ಕಾಲೇಜು

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

Read all News