PRABHAVAA.COM

ಸಚಿವ ನಾಗೇಂದ್ರ ವಿರುದ್ಧ ಬಿಜೆಪಿ ಹೋರಾಟ ಶತಸಿದ್ಧ: ಬಿ.ವೈ.ವಿಜಯೇಂದ್ರ

Kolar:

Font size:

* ನಾಗೇಂದ್ರ ವಿರುದ್ಧ ಸದನದಲ್ಲಿ ಬಿಜೆಪಿ ಹೋರಾಟ ಖಂಡಿತ

ಕೋಲಾರ: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಬಿಜೆಪಿ ಮುಂಬರುವ ಅಧಿವೇಶನದಲ್ಲಿ ಹೋರಾಟ ಮಾಡಲಿದೆ. ಸದನದ ಹೊರಗೂ ಹೋರಾಟ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಗೇಂದ್ರ ಅವರ ವಿರುದ್ಧ ಆರೋಪಪಟ್ಟಿ ದಾಖಲಾಗಿದೆ. ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣವನ್ನು ಲಪಟಾಯಿಸಿದ ಅವರನ್ನು ಮತ್ತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವರಾಗಿ ಮಾಡಿದ್ದಾರೆ. ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ನಿಗಮದ ಹಣವನ್ನು ಕೊಳ್ಳೆಹೊಡೆದು ತೆಲಂಗಾಣದಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣ ಡ್ರಾ ಮಾಡಿದ್ದಾರೆ. ಪರಿಶಿಷ್ಟ ಪಂಗಡದ ಮಕ್ಕಳ ಕಲ್ಯಾಣಕ್ಕೆ ಮೀಸಲಾಗಿ ಇಟ್ಟಿದ್ದ ಹಣವನ್ನು ನುಂಗಿದ್ದ ವ್ಯಕ್ತಿಯನ್ನು ಮತ್ತೆ ಸಚಿವರಾಗಿ ಮಾಡಿರುವುದನ್ನು ಬಿಜೆಪಿ ಖಂಡಿಸಲಿದೆ ಎಂದರು. ನಾಗೇಂದ್ರ ಅವರು ಜಾಮೀನು ನಿಯಮ ಉಲ್ಲಂಘನೆ ಮಾಡಿದ್ದರೆ ಅದನ್ನು ನ್ಯಾಯಾಲಯ ನೋಡಿಕೊಳ್ಳಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬರ: ರೈತರಿಗೆ ಇನ್ನಾದರೂ ಸ್ಪಂದಿಸಲಿ...
ರಾಜ್ಯದಲ್ಲಿ ಮಳೆ ಕೊರತೆಯಿಂದ ಭೀಕರ ಬರ ಇದೆ. ರೈತರು ಕಷ್ಟದಲ್ಲಿದ್ದಾರೆ. ಕುಡಿಯುವ ನೀರಿಗೆ ಹಾಹಾಕಾರ ಇದೆ. ಆದರೆ, ಸಚಿವರು ಮತ್ತು ಮುಖ್ಯಮಂತ್ರಿಗಳು ಖಾತೆ ಹಂಚಿಕೆಗೆ ದೆಹಲಿ ಪ್ರವಾಸ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ರಾಗಿ, ಜೋಳ ಸೇರಿದಂತೆ ಹಲವು ಬೆಳೆಗಳು, ಹಣ್ಣು, ತರಕಾರಿ ಬೆಳೆದ ರೈತರು ನೀರಿಲ್ಲದೆ ಪರದಾಡುತ್ತಿದ್ದಾರೆ. ರಾಜ್ಯ ಸರ್ಕಾರ ಈ ಕಡೆ ಗಮನ ನೀಡುತ್ತಿಲ್ಲ. ಆದ್ದರಿಂದ ರೈತರಿಗೆ ಪರಿಹಾರ ನೀಡಬೇಕು ಹಾಗೂ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ತಡವಾಗಿಯಾದರೂ ಮುಖ್ಯಮಂತ್ರಿಗಳು ಎಚ್ಚೆತ್ತುಕೊಂಡು ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎಂದರು.

ಪತ್ರ ಬರೆದು ಕೈ ಕಟ್ಟಿ ಕೂರುವುದಲ್ಲ...
ಬರ ಪರಿಹಾರಕ್ಕೆ ಕೇವಲ ಕೇಂದ್ರ ಸರ್ಕಾರದ ಅವಲಂಬನೆ ಮಾಡುವುದಕ್ಕಿಂತ ರಾಜ್ಯ ಸರ್ಕಾರ ಏನು ನೀಡಿದೆ ಎಂಬುದೂ ಮುಖ್ಯ. ಇದಕ್ಕೆ ಸಿಎಂ ಉತ್ತರ ಕೊಡಬೇಕು. ಇವರೇ ರೈತರಿಗೆ ಏನೂ ಪರಿಹಾರ ನೀಡಿಲ್ಲ. ಕೇವಲ ಪ್ರಧಾನಿಗಳಿಗೆ ಪತ್ರ ಬರೆದು ಕೈ ಕಟ್ಟಿ ಕೂರುವುದಲ್ಲ. ಮೊದಲು ಇವರು ಪರಿಹಾರ ನೀಡಿ ಆನಂತರ ಕೇಂದ್ರದ ಬಳಿ ಹೋಗಲಿ ಎಂದು ತಿಳಿಸಿದರು.

ಬಿಡದಿ: ಸದನದಲ್ಲೂ ಹೋರಾಟ ಮಾಡ್ತೇವೆ...
ಬಿಡದಿ ಟೌನ್‍ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ ಆರಂಭಿಸಿದೆ. ನಮ್ಮ ನಿಲುವನ್ನು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ತಿಳಿಸಿದ್ದಾರೆ. ಸಾಕೇಂತಿಕವಾಗಿ ಹೋರಾಟಕ್ಕೆ ಬೆಂಬಲ ನೀಡಲು ತೀರ್ಮಾನಿಸಿದ್ದೇವೆ. ಅಶೋಕ್ ಹಾಗೂ ಛಲವಾದಿ ನಾರಾಯಣ ಸ್ವಾಮಿ ಅವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಈ ಹೋರಾಟವನ್ನು ಆರಂಭಿಸಿದ್ದು ರೈತರು. ರೈತರನ್ನು ಬೆದರಿಸಿ, ಹೆದರಿಸಿ ಜಮೀನನ್ನು ಪಡೆಯುವ ದುಸ್ಸಾಹಸವನ್ನು ಸರ್ಕಾರ ಮಾಡುತ್ತಿದೆ. ಒತ್ತಾಯವಾಗಿ ಒಕ್ಕಲೆಬ್ಬಿಸುತ್ತಿದ್ದಾರೆ. ಸದನದ ಒಳಗೂ ನಾವು ಬಿಡದಿ ಬಗ್ಗೆ ಹೋರಾಟ ಮಾಡ್ತೇವೆ ಎಂದರು.

ಆರ್‍ಎಸ್‍ಎಸ್ ನಿμÉೀಧ ಪ್ರಿಯಾಂಕ್‍ಗೆ ಆಗಲ್ಲ...
ಪ್ರಶ್ನೆಗೆ ಉತ್ತರಿಸಿದ ಅವರು, ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹೀಗೆ ಎಲ್ಲರೂ ಆರ್‍ಎಸ್‍ಎಸ್ ಅನ್ನು ಮುಚ್ಚಿ ಹಾಕ್ತೇವೆ, ಬಹಿμÁ್ಕರ ಹಾಕ್ತೇವೆ ಎಂದು ಹೇಳಿದ್ದರು. ಆರ್‍ಎಸ್‍ಎಸ್ ರಾಷ್ಟ್ರಭಕ್ತರನ್ನು ನಿರ್ಮಿಸುವ ಕೆಲಸವನ್ನು ಮಾಡುತ್ತಿದೆ ಎಂಬುದನ್ನು ಪ್ರಿಯಾಂಕ್ ಖರ್ಗೆ ಅವರು ತಿಳಿಯಬೇಕು. ಹಲವು ದಶಕಗಳಿಂದ ಆರ್‍ಎಸ್‍ಎಸ್ ಪವಿತ್ರ ಕಾರ್ಯದಲ್ಲಿ ತೊಡಗಿದೆ. ಇದೆಲ್ಲ ತಿಳಿಯದ ಪ್ರಿಯಾಂಕ್ ಖರ್ಗೆ ಅವರು ಟೀಕೆ ಮಾಡುತ್ತಾರೆ. ಅವರ ಕೆಲಸವನ್ನು ಮಾಡದೇ ಟೀಕೆಯಲ್ಲೇ ತೊಡಗಿದ್ದಾರೆ. ಆರ್‍ಎಸ್‍ಎಸ್ ನಿμÉೀಧ ಮಾಡುವುದು ಅವರ ಕೈನಿಂದ ಆಗಲ್ಲ ಎಂದು ತಿಳಿಸಿದರು.

Comments

Leave a Comment

Prev Post ಕರ್ನಾಟಕ ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ :
Next Post ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆಗೆ ಮುನ್ನ ದೇವೇಗೌಡರಿಂದ ನಿಖಿಲ್‌ಗೆ ಆಶೀರ್ವಾದ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News