"ರೈತರ ಪರವಾಗಿ ಹೋರಾಡಿ" ಎಂದು ಹಿರಿಯರ ಕರೆ
ಬೆಂಗಳೂರು:
ರಾಜ್ಯ ಕಾಂಗ್ರೆಸ್ ಸರ್ಕಾರದ ಉದ್ದೇಶಿತ ರೈತ ವಿರೋಧಿ ಬಿಡದಿ ಟೌನ್ಶಿಪ್ ಯೋಜನೆ*ಯನ್ನು ವಿರೋಧಿಸಿ ನಾಳೆ ಆರಂಭವಾಗಲಿರುವ ಬೃಹತ್ ಪಾದಯಾತ್ರೆಗೆ ಮುನ್ನ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಇಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀ ಎಚ್.ಡಿ.ದೇವೇಗೌಡರ ಆಶೀರ್ವಾದ ಪಡೆದರು.
ನಿಖಿಲ್ ಕುಮಾರಸ್ವಾಮಿ ಅವರು ದೇವೇಗೌಡರ ಭೇಟಿ ಮಾಡಿ ಪಾದಯಾತ್ರೆಯ ವಿವರಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಿಖಿಲ್ ಅವರ ತಲೆಯ ಮೇಲೆ ಕೈಯಿಟ್ಟು ಆಶೀರ್ವದಿಸಿದರು.
"ರೈತರ ಹಿತಕ್ಕಾಗಿ, ರೈತರ ಭೂಮಿಯನ್ನು ಉಳಿಸಲು ಈ ಹೋರಾಟ ಮಾಡುತ್ತಿದ್ದೀರಿ. ದೃಢವಾಗಿ ನಿಂತು ಹೋರಾಡಿ. ಜನರ ಬೆಂಬಲ ನಿಮ್ಮೊಂದಿಗಿದೆ" ಎಂದು ದೇವೇಗೌಡರು ನಿಖಿಲ್ ಕುಮಾರಸ್ವಾಮಿ ಅವರಿಗೆ ಶುಭ ಹಾರೈಸಿದರು






Comments
Leave a Comment