PRABHAVAA.COM

ನೂತನ ಜವಳಿ ನೀತಿಯಲ್ಲಿ ರಫ್ತು ಉತ್ತೇಜನಕ್ಕೆ ವಿಶೇಷ ಒತ್ತು: ಜವಳಿ ಆಯುಕ್ತ ಎ.ಬಿ. ಬಸವರಾಜ್

Bengaluru Urban:

Font size:

ಅಧಿಕಾರಿಗಳಿಗೆ ಮೂರು ದಿನಗಳ ವಿಶೇಷ ರಫ್ತು ತರಬೇತಿ; ನೇಕಾರರು ಹಾಗೂ ಜವಳಿ ಉದ್ಯಮಿಗಳಿಗೆ ಜಾಗತಿಕ ಮಾರುಕಟ್ಟೆ ಅವಕಾಶಗಳ ಮಾಹಿತಿ ತಲುಪಿಸಲು ಕರೆ

ಬೆಂಗಳೂರು, ಆಗಸ್ಟ್ 11: ರಾಜ್ಯದಲ್ಲಿ ಸದ್ಯದಲ್ಲೇ ಜಾರಿಗೊಳ್ಳಲಿರುವ ನೂತನ ಕರ್ನಾಟಕ ಜವಳಿ ಮತ್ತು ಉಡುಪು ನೀತಿಯಲ್ಲಿ ಕೈಮಗ್ಗ ಮತ್ತು ಜವಳಿ ಕ್ಷೇತ್ರದ ರಫ್ತು ಉತ್ತೇಜನಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಜವಳಿ ಅಭಿವೃದ್ಧಿ ಆಯುಕ್ತರಾದ ಎ.ಬಿ. ಬಸವರಾಜು ತಿಳಿಸಿದರು.

ರಾಜ್ಯದ ಕೈಮಗ್ಗ ಮತ್ತು ಜವಳಿ ಉತ್ಪನ್ನಗಳಿಗೆ ದೇಶೀಯ ಮಾರುಕಟ್ಟೆಯೊಂದಿಗೆ ಜಾಗತಿಕ ಮಾರುಕಟ್ಟೆಯಲ್ಲೂ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ, ಇಲಾಖೆಯ ಅಧಿಕಾರಿಗಳು ರಫ್ತು ಪ್ರಕ್ರಿಯೆಗಳು, ಮಾರುಕಟ್ಟೆ ಅವಕಾಶಗಳು ಹಾಗೂ ಅಂತರರಾಷ್ಟ್ರೀಯ ವ್ಯಾಪಾರದ ಅಗತ್ಯತೆಗಳ ಕುರಿತು ಸಮಗ್ರ ಜ್ಞಾನ ಹೊಂದುವುದು ಅಗತ್ಯ ಎಂದು ಅವರು ಹೇಳಿದರು.

ಬೆಂಗಳೂರಿನ ವಿಶ್ವೇಶ್ವರಯ್ಯ ಟ್ರೇಡ್ ಪ್ರಮೋಷನ್ ಸೆಂಟರ್ (VTPC)*ನಲ್ಲಿ ಆಗಸ್ಟ್ 10ರಿಂದ 12ರವರೆಗೆ ಆಯೋಜಿಸಲಾಗಿರುವ ಇಲಾಖೆಯ ಅಧಿಕಾರಿಗಳ *ಮೂರು ದಿನಗಳ ರಫ್ತುಮುಖಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕರ್ನಾಟಕದ ಕೈಮಗ್ಗ ಮತ್ತು ಜವಳಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ಅವಕಾಶಗಳಿದ್ದು, ಆ ಅವಕಾಶಗಳನ್ನು ಬಳಸಿಕೊಳ್ಳಲು ಅಗತ್ಯವಾದ ರಫ್ತು ಪ್ರಕ್ರಿಯೆಗಳು, ಮಾರುಕಟ್ಟೆ ಪ್ರವೇಶ, ಅಂತರರಾಷ್ಟ್ರೀಯ ಮಾರುಕಟ್ಟೆಯ ಅವಶ್ಯಕತೆಗಳು ಹಾಗೂ ರಫ್ತು ವ್ಯವಹಾರದ ಕುರಿತು ಇಲಾಖೆಯ ಅಧಿಕಾರಿಗಳ ಸಾಮರ್ಥ್ಯವನ್ನು ಹೆಚ್ಚಿಸುವುದು ತರಬೇತಿಯ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಅಧಿಕಾರಿಗಳ ಜ್ಞಾನ ನೇಕಾರರಿಗೆ ತಲುಪಬೇಕು
ತರಬೇತಿಯ ಮೂಲಕ ಅಧಿಕಾರಿಗಳು ಪಡೆದುಕೊಳ್ಳುವ ಜ್ಞಾನ ಕೇವಲ ಇಲಾಖೆಯ ಮಟ್ಟಕ್ಕೆ ಸೀಮಿತವಾಗದೆ, ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೇಕಾರರು, ಕುಶಲಕರ್ಮಿಗಳು ಹಾಗೂ ಜವಳಿ ಉದ್ಯಮಿಗಳಿಗೆ ತಲುಪಬೇಕು ಎಂದು ಆಯುಕ್ತರಾದ ಬಸವರಾಜು ಕರೆ ನೀಡಿದರು.

ರಫ್ತು ಮಾರುಕಟ್ಟೆಯ ಅವಕಾಶಗಳು, ಅಗತ್ಯ ಮಾನದಂಡಗಳು ಮತ್ತು ಪ್ರಕ್ರಿಯೆಗಳ ಕುರಿತು ನೇಕಾರರು ಹಾಗೂ ಉದ್ಯಮಿಗಳಿಗೆ ಸೂಕ್ತ ಮಾರ್ಗದರ್ಶನ ದೊರೆತರೆ, ಕರ್ನಾಟಕದ ಕೈಮಗ್ಗ ಮತ್ತು ಜವಳಿ ಉತ್ಪನ್ನಗಳ ರಫ್ತು ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

"ನಮ್ಮ ರಾಜ್ಯದ ಕೈಮಗ್ಗ ಮತ್ತು ಜವಳಿ ಉತ್ಪನ್ನಗಳಿಗೆ ಇರುವ ವಿಶಿಷ್ಟ ಗುಣಮಟ್ಟ ಮತ್ತು ಪರಂಪರೆಯನ್ನು ಜಾಗತಿಕ ಮಾರುಕಟ್ಟೆಯ ಬೇಡಿಕೆಗಳೊಂದಿಗೆ ಸಂಪರ್ಕಿಸುವುದು ಅಗತ್ಯ. ಇಲಾಖೆಯ ಅಧಿಕಾರಿಗಳು ರಫ್ತು ಕ್ಷೇತ್ರದ ಜ್ಞಾನವನ್ನು ಪಡೆದು ಅದನ್ನು ನೇಕಾರರು ಮತ್ತು ಉದ್ಯಮಿಗಳಿಗೆ ತಲುಪಿಸುವ ಮೂಲಕ ರಫ್ತು ವಿಸ್ತರಣೆಗೆ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು," ಎಂದು ಅವರು ಹೇಳಿದರು.

ರಫ್ತು ಸಾಮರ್ಥ್ಯ ವೃದ್ಧಿಗೆ VTPC ಸಹಕಾರ

VTPC ನಿರ್ದೇಶಕರಾದ ಶ್ರೀ ರಮೇಶ್ ಮಾತನಾಡಿ, ಕರ್ನಾಟಕದ ಜವಳಿ ಹಾಗೂ ಕೈಮಗ್ಗ ಉತ್ಪನ್ನಗಳ ರಫ್ತು ಸಾಮರ್ಥ್ಯವನ್ನು ಹೆಚ್ಚಿಸಲು ವಿಶ್ವೇಶ್ವರಯ್ಯ ಟ್ರೇಡ್ ಪ್ರಮೋಷನ್ ಸೆಂಟರ್ ಅಗತ್ಯ ಸಹಕಾರ ಮತ್ತು ಮಾರ್ಗದರ್ಶನ ನೀಡಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜವಳಿ ಇಲಾಖೆಯ ಹೆಚ್ಚುವರಿ ನಿರ್ದೇಶಕರಾದ ಶ್ರೀ ಸಿ.ಎಸ್. ಯೋಗೇಶ್ ಉಪಸ್ಥಿತರಿದ್ದರು.

ಮೂರು ದಿನಗಳ ತರಬೇತಿಯ ಉದ್ದೇಶ
ಮೂರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಇಲಾಖೆಯ ಅಧಿಕಾರಿಗಳಿಗೆ:
* ರಫ್ತು ಪ್ರಕ್ರಿಯೆಗಳ ಕುರಿತು ಅರಿವು
* ಜಾಗತಿಕ ಮಾರುಕಟ್ಟೆ ಅವಕಾಶಗಳ ಪರಿಚಯ
* ರಫ್ತು ವ್ಯವಹಾರದ ಮೂಲಭೂತ ಅಂಶಗಳು
* ಅಂತರರಾಷ್ಟ್ರೀಯ ಮಾರುಕಟ್ಟೆಯ ಅಗತ್ಯತೆಗಳ ಕುರಿತು ತಿಳುವಳಿಕೆ
* ಕರ್ನಾಟಕದ ಕೈಮಗ್ಗ ಮತ್ತು ಜವಳಿ ಉತ್ಪನ್ನಗಳಿಗೆ ಮಾರುಕಟ್ಟೆ ಅವಕಾಶಗಳನ್ನು ಗುರುತಿಸುವುದು
* ನೇಕಾರರು ಹಾಗೂ ಉದ್ಯಮಿಗಳಿಗೆ ರಫ್ತು ಕುರಿತು ಮಾರ್ಗದರ್ಶನ ನೀಡುವ ಸಾಮರ್ಥ್ಯ ವೃದ್ಧಿ

ಮುಂತಾದ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತಿದೆ.

Comments

Leave a Comment

Prev Post ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆ: ರೈತರ ಭೂಮಿ ಕಬಳಿಸಲು ಬಿಡುವುದಿಲ್ಲವೆಂದು ದೇವೇಗೌಡರ ಘೋಷಣೆ
Next Post ನಾನು, ಸಚಿವರು ಸೇರಿ ಎಲ್ಲರೂ ಸರ್ಕಾರಿ ನೌಕರರು, ನಾವೆಲ್ಲಾ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News