PRABHAVAA.COM

ಕೈಗಾರಿಕಾ ತಯಾರಿಕಾ ತಾಣವಾಗಿ ತುಮಕೂರು ನೋಡ್ ಅಭಿವೃದ್ಧಿ 7 ಸಾವಿರ ಕೋಟಿ ಹೂಡಿಕೆ, 88 ಸಾವಿರ ಉದ್ಯೋಗ: ಎಂ ಬಿ ಪಾಟೀಲ

Bengaluru Urban:

Font size:

ಜಪಾನ್ ಕೈಗಾರಿಕಾ ಟೌನ್-ಶಿಪ್ ಗೆ 300 ಎಕರೆ, ಎಂಎಸ್ಎಂಇಗೆ 200 ಎಕರೆ

ಕೈಗಾರಿಕಾ ತಯಾರಿಕಾ ತಾಣವಾಗಿ ತುಮಕೂರು ನೋಡ್ ಅಭಿವೃದ್ಧಿ

7 ಸಾವಿರ ಕೋಟಿ ಹೂಡಿಕೆ, 88 ಸಾವಿರ ಉದ್ಯೋಗ: ಎಂ ಬಿ ಪಾಟೀಲ

ಜಪಾನ್ ಕೈಗಾರಿಕಾ ಟೌನ್-ಶಿಪ್ ಗೆ 300 ಎಕರೆ, ಎಂಎಸ್ಎಂಇಗೆ 200 ಎಕರೆ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ್ ಅವರ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ಸಚಿವರು

ಬೆಂಗಳೂರು: ತುಮಕೂರನ್ನು ಬೆಂಗಳೂರಿನ ನಂತರದ ಕೈಗಾರಿಕಾ ತಯಾರಿಕೆಯ ನಗರವನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಇದಕ್ಕಾಗಿ 1,736 ಎಕರೆಯನ್ನು ಮೀಸಲಿಟ್ಟಿದ್ದು, ಇದರಿಂದ 7 ಸಾವಿರ ಕೋಟಿ ರೂಪಾಯಿ ಹೂಡಿಕೆ ಹರಿದು ಬರಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ನೇತೃತ್ವದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಮತ್ತು ಅನುಷ್ಠಾನ ಮಂಡಳಿಯ 3ನೇ ಮೇಲುಸ್ತುವಾರಿ ಪ್ರಾಧಿಕಾರದ ಸಭೆಯಲ್ಲಿ ಅವರು ವರ್ಚುಯಲ್ ಆಗಿ ಪಾಲ್ಗೊಂಡು ಮಾತನಾಡಿದರು.

ಬೆಂಗಳೂರು-ಚೆನ್ನೈ ಕೈಗಾರಿಕಾ ಕಾರಿಡಾರ್ ನ ತುಮಕೂರು ನೋಡ್ ನಲ್ಲಿ ಈಗಾಗಲೇ ಶೇ.30ರಷ್ಟು ಭೌತಿಕ ಪ್ರಗತಿ ಮತ್ತು ಶೇ.20ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ. ಇಲ್ಲಿ 300 ಎಕರೆ ಭೂಮಿಯನ್ನು ಜಪಾನ್ ಟೌನ್-ಶಿಪ್ ಗೆ ಮತ್ತು 200 ಎಕರೆಯನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮಂಜೂರು ಮಾಡಲಾಗಿದೆ. ತುಮಕೂರು ನೋಡ್ ಅಭಿವೃದ್ಧಿಯಿಂದ 88 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಇಲ್ಲಿ ಜಿಂದಾಲ್ ಅಲ್ಯೂಮಿನಿಯಂ ಪ್ರಧಾನ ಹೂಡಿಕೆದಾರ ಕಂಪನಿಯಾಗಿದ್ದು, ಅದಕ್ಕೆ 151 ಎಕರೆ ಭೂಮಿ ಕೊಡಲಾಗಿದೆ. 41 ಎಕರೆಯನ್ನು ಸಾಂಸ್ಥಿಕ ಬಳಕೆಗೆ ಮೀಸಲಿಡಲಾಗಿದೆ. ಭೂಸ್ವಾಧೀನ ಸುಗಮವಾಗಿ ನಡೆಯುತ್ತಿದ್ದು, 2027ರಲ್ಲಿ ಯೋಜನೆಯನ್ನು ಮುಗಿಸಲಾಗುವುದು. ಈ ನೋಡ್‌ನಲ್ಲಿ ಆಹಾರ ಮತ್ತು ಪಾನೀಯ, ಜವಳಿ ಮತ್ತು ಉಡುಪು, ಎಲೆಕ್ಟ್ರಾನಿಕ್ಸ್, ರಾಸಾಯನಿಕ, ಜನರಲ್ ಎಂಜಿನಿಯರಿಂಗ್
ಮತ್ತು ಲಾಜಿಸ್ಟಿಕ್ಸ್ ವಲಯಗಳಿಗೆ ಆದ್ಯತೆ ಕೊಡಲಾಗುವುದು
ಎಂದು ಅವರು ವಿವರಿಸಿದ್ದಾರೆ.

ಇದೇ ರೀತಿಯಲ್ಲಿ ಕಲಬುರಗಿಗೆ ಮಂಜೂರಾಗಿರುವ ಪಿಎಂ ಮಿತ್ರ ಕೈಗಾರಿಕಾ ಪಾರ್ಕ್ ಮತ್ತು 'ಭವ್ಯ' ಯೋಜನೆಯಡಿ ರಾಜ್ಯಕ್ಕೆ ಮಂಜೂರಾಗಿರುವ ಯೋಜನೆಗಳನ್ನು ಕೂಡ ಮುಗಿಸಲಾಗುವುದು. ಇದಕ್ಕೆ ರಾಜ್ಯದಿಂದ ಕೇಂದ್ರಕ್ಕೆ ಎಲ್ಲಾ ರೀತಿಯ ಅಗತ್ಯ ಸಹಕಾರ ಕೊಡಲಾಗುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.

ಕೇಂದ್ರ ಸರಕಾರದ ಈ ಯೋಜನೆಯ ಅಡಿಯಲ್ಲಿ 13 ರಾಜ್ಯಗಳಲ್ಲಿ 11 ಕೈಗಾರಿಕಾ ಕಾರಿಡಾರ್ ಮತ್ತು 20 ಸ್ಮಾರ್ಟ್ ಸಿಟಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಪೈಕಿ 4 ಸ್ಮಾರ್ಟ್ ಸಿಟಿ ಯೋಜನೆಗಳು ಮುಗಿದಿದ್ದು, ಉಳಿದ 16 ಅಭಿವೃದ್ಧಿಯ ನಾನಾ ಹಂತಗಳಲ್ಲಿವೆ ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.

ಈ ಉಪಕ್ರಮದ ವ್ಯಾಪ್ತಿಯಲ್ಲೇ ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. 50,759 ಕೋಟಿ ರೂಪಾಯಿ ವೆಚ್ಚದ ಈ ಯೋಜನೆ 5.35 ಲಕ್ಷ ಕೋಟಿ ರೂಪಾಯಿ ಹೂಡಿಕೆಯ ಸಾಮರ್ಥ್ಯ ಹೊಂದಿದ್ದು 14 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿದೆ. ಒಟ್ಟು 49,120 ಎಕರೆಯಲ್ಲಿ ಅನುಷ್ಠಾನಕ್ಕೆ ಬರಲಿರುವ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ 'ಭವ್ಯ' ಉಪಕ್ರಮದ ಮೂಲಕ 100 ಕೈಗಾರಿಕಾ ಪಾರ್ಕ ಗಳು ಅಸ್ತಿತ್ವಕ್ಕೆ ಬರಲಿವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸಭೆಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೈಗಾರಿಕಾ ಸಚಿವರು ಭಾಗವಹಿಸಿದ್ದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ನಕುಲ್, ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ ಸೇರಿದಂತೆ ಇತರರು ಇದ್ದರು.

Comments

Leave a Comment

Prev Post ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಸೂಚನೆ
Next Post ಬಿಡದಿ ಬಗ್ಗೆ ನಿಮ್ಮ ಸತ್ಯಶೋಧನಾ ಸಮಿತಿ ವರದಿಯ ಬಗ್ಗೆ ಜಾಹಿರಾತು ಕೊಡಿ; ಸಿಎಂಗೆ ಕುಮಾರ ಸ್ವಾಮಿ ತಿರುಗೇಟು

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News