PRABHAVAA.COM

ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಪರಂಪರೆ ಸದಾ ಪ್ರಸ್ತುತ: ಸಚಿವ ಶಿವರಾಜ್. ಎಸ್‌.ತಂಗಡಗಿ ಅಭಿಮತ

Bengaluru Urban:

Font size:

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ದೊರಕಿಸಿಕೊಟ್ಟ ಮಹಾನ್ ನಾಯಕ ಅರಸು ಭವಿಷ್ಯದ ತಂತ್ರಜ್ಞಾನದ ದೃಷ್ಟಿಯಿಂದ ಅಂದೇ ಎಲೆಕ್ಟ್ರಾನಿಕ್ ಸಿಟಿ ನಿರ್ಮಿಸಿದ್ದರು ದೇವರಾಜ ಅರಸು

ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿ‌ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಪಿ.ವಿ.ನಂಜರಾಜ ಅರಸು ಅವರಿಗೆ ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್, ಪರಿಷತ್ ಸಭಾಪತಿಗಳಾದ ಸಲೀಂ ಅಹ್ಮದ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ, ಮೀನುಗಾರಿಕೆ ಇಲಾಖೆ ಸಚಿವ ಬಸಂತಪ್ಪ, ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಶಾಸಕರಾದ ಭೀಮಣ್ಣ ಚಿಮ್ಮನಕಟ್ಟಿ, ಅಲ್ಲಮ್ಮಪ್ರಭು ಪಾಟೀಲ್, ಪರಿಷತ್ ಸದಸ್ಯರಾದ ಜಕ್ಕಪ್ಪನವರ್, ಗಾಯಿತ್ರಿ ಶಾಂತನಗೌಡ, ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಪರಂಪರೆ ಸದಾ ಪ್ರಸ್ತುತ: ಸಚಿವ ಶಿವರಾಜ್. ಎಸ್‌.ತಂಗಡಗಿ ಅಭಿಮತ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ದೊರಕಿಸಿಕೊಟ್ಟ ಮಹಾನ್ ನಾಯಕ ಅರಸು

ಭವಿಷ್ಯದ ತಂತ್ರಜ್ಞಾನದ ದೃಷ್ಟಿಯಿಂದ ಅಂದೇ ಎಲೆಕ್ಟ್ರಾನಿಕ್ ಸಿಟಿ ನಿರ್ಮಿಸಿದ್ದರು ದೇವರಾಜ ಅರಸು

ಬೆಂಗಳೂರು, ಆ.20:

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಶೋಷಿತರು, ಹಿಂದುಳಿದ, ಬಡವರು ಹಾಗೂ ಅವಕಾಶ ವಂಚಿತರ ಧ್ವನಿಯಾಗಿ ಸಾಮಾಜಿಕ ಪರಿವರ್ತನೆಗೆ ಅವರು ನೀಡಿದ ಕೊಡುಗೆ ಅಪಾರ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಅವರು ಅಭಿಪ್ರಾಯಪಟ್ಟರು.

ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ ನಲ್ಲಿ ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಅಂಗವಾಗಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಪಿ.ವಿ.ನಂಜರಾಜ ಅರಸ ಅವರಿಗೆ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಅಧಿಕಾರವೆಂದರೆ ಕೇವಲ ಆಡಳಿತ ನಡೆಸುವ ಸಾಧನವಲ್ಲ; ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅವಕಾಶ, ಗೌರವ ಮತ್ತು ಸಮಾನ ಹಕ್ಕುಗಳನ್ನು ತಲುಪಿಸುವ ಜವಾಬ್ದಾರಿ ಎಂಬುದನ್ನು ಅರಸು ಅವರು ತಮ್ಮ ಆಡಳಿತದ ಮೂಲಕ ತೋರಿಸಿಕೊಟ್ಟರು ಎಂದರು.

ಭೂ ಸುಧಾರಣೆ ದೇವರಾಜ ಅರಸು ಅವರ ಆಡಳಿತದ ಪ್ರಮುಖ ಮೈಲಿಗಲ್ಲು‌ ಆಗಿತ್ತು. ‘ಉಳುವವನೇ ಭೂಮಿಯ ಒಡೆಯ’ ಎಂಬ ಆಶಯಕ್ಕೆ ಬಲ ತುಂಬುವ ಮೂಲಕ ತಲೆತಲಾಂತರಗಳಿಂದ ಭೂಮಿಯನ್ನು ಉಳುಮೆ ಮಾಡುತ್ತಿದ್ದ ರೈತರಿಗೆ ಹಕ್ಕು ದೊರೆಯುವಂತೆ ಮಾಡಿದರು. ಇದರಿಂದ ಗ್ರಾಮೀಣ ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಉಂಟಾಯಿತು ಎಂದು ಹೇಳಿದರು.

ಶೈಕ್ಷಣಿಕ- ಆರ್ಥಿಕ ಪ್ರಗತಿಗೆ ಆದ್ಯತೆ:
ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಗೆ ಅರಸು ಅವರು ವಿಶೇಷ ಆದ್ಯತೆ ನೀಡಿದ್ದರು. ಸಮಾನ ಅವಕಾಶ ಕಲ್ಪಿಸಲು ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯಗಳಿಗೆ ಅವಕಾಶ ದೊರೆಯಬೇಕು ಎಂಬ ಅವರ ನಿಲುವು ಕರ್ನಾಟಕದಲ್ಲಿ ಸಾಮಾಜಿಕ ನ್ಯಾಯದ ನೀತಿಗಳಿಗೆ ಬಲವಾದ ಅಡಿಪಾಯ ಹಾಕಿತು ಎಂದು ಅವರು ವಿವರಿಸಿದರು.

ತಂತ್ರಜ್ಞಾನದ ಅಭಿವೃದ್ಧಿ ವಿಚಾರದಲ್ಲೂ ಅರಸು ಸಾಕಷ್ಟು ಆಸಕ್ತಿ ಹೊಂದಿದ್ದರು. ಅದರಂತೆ ಎಲೆಕ್ಟ್ರಾನಿಕ್ ಸಿಟಿ ನಿರ್ಮಾಣವಾಗಿದ್ದ ಅರಸು ಅವರ ಶ್ರಮದಿಂದಾಗಿ. ಅಷ್ಟು ಮಾತ್ರವಲ್ಲ, ಮಲಹೊರುವ ಪದ್ಧತಿ ನಿಷೇಧ ಪದ್ಧತಿ ಜಾರಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ನೂರಾರು ಅತ್ಯುತ್ತಮ ಯೋಜನೆಗಳನ್ನು ರಾಜ್ಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದು ಸ್ಮರಿಸಿದರು.

ಬಡವರು ಮತ್ತು ಹಿಂದುಳಿದ ವರ್ಗಗಳ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸಲು ಅರಸು ಅವರು ಹಲವು ಕ್ರಮಗಳನ್ನು ಕೈಗೊಂಡಿದ್ದರು. ಶಿಕ್ಷಣವೇ ಸಾಮಾಜಿಕ ಪರಿವರ್ತನೆಯ ಅತ್ಯಂತ ಪರಿಣಾಮಕಾರಿ ಸಾಧನ ಎಂಬುದನ್ನು ಅವರು ಅರಿತಿದ್ದರು.

ಅರಸು ಅವರ ಆಡಳಿತ ಇಂದಿಗೂ ಪ್ರಸ್ತುತ: ದೇವರಾಜ ಅರಸು ಅವರ ಆಡಳಿತದ ಆಶಯಗಳು ಇಂದಿಗೂ ಪ್ರಸ್ತುತವಾಗಿವೆ. ಅಭಿವೃದ್ಧಿಯ ಫಲ ಸಮಾಜದ ಎಲ್ಲ ವರ್ಗಗಳಿಗೂ ಸಮಾನವಾಗಿ ತಲುಪಬೇಕು. ಬಡತನದಿಂದ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು, ರೈತರು ತಮ್ಮ ಪರಿಶ್ರಮಕ್ಕೆ ನ್ಯಾಯಯುತ ಪ್ರತಿಫಲ ಪಡೆಯಬೇಕು ಹಾಗೂ ಯುವಜನರಿಗೆ ಸಮಾನ ಅವಕಾಶಗಳು ದೊರೆಯಬೇಕು ಎಂಬುದು ಅವರ ಚಿಂತನೆಯ ಮೂಲ ಆಶಯವಾಗಿತ್ತು ಎಂದು ಸಚಿವರು ತಿಳಿಸಿದರು.

ದೇವರಾಜ ಅರಸು ಅವರನ್ನು ಸ್ಮರಿಸುವುದು ಕೇವಲ ಜಯಂತಿ ಆಚರಣೆ ಅಥವಾ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದಕ್ಕೆ ಸೀಮಿತವಾಗಬಾರದು. ಅವರ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸರ್ವರ ಅಭಿವೃದ್ಧಿಯ ವಿಚಾರಗಳನ್ನು ಅಳವಡಿಸಿಕೊಂಡು ದುರ್ಬಲ ವರ್ಗಗಳ ಬದುಕಿನಲ್ಲಿ ಬದಲಾವಣೆ ತರುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಸಚಿವರು ಅಭಿಪ್ರಾಯಪಟ್ಟರು.

ಡಿ. ದೇವರಾಜ ಅರಸು ಅವರ ಜೀವನ ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ಸಾರುತ್ತದೆ. ಅವರ ಚಿಂತನೆಗಳು ಮುಂದಿನ ಪೀಳಿಗೆಗೂ ಮಾರ್ಗದರ್ಶಕವಾಗಲಿ ಹಾಗೂ ಸಮಾನತೆ, ಸ್ವಾಭಿಮಾನ ಮತ್ತು ಸರ್ವರ ಅಭಿವೃದ್ಧಿಯ ಕರ್ನಾಟಕ ನಿರ್ಮಾಣಕ್ಕೆ ಪ್ರೇರಣೆಯಾಗಲಿ ಎಂದು ಸಚಿವರು ಆಶಿಸಿದರು.

Comments

Leave a Comment

Prev Post ₹5,300 ಕೋಟಿ ಮೇಲ್ದಂಡೆ ಭದ್ರಾ ಯೋಜನೆಗೆ ಘೋಷಿಸಲಾಗಿದ್ದ ಅನುದಾನ ಬಿಡುಗಡೆಗೆ ಸಿಎಂ ಶಿವಕುಮಾರ್ ಆಗ್ರಹ
Next Post ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಹೆಚ್ಚಿಸಲು ಬಂಗಾರಪ್ಪ ಮಗನಾಗಿ ಸಹಾಯ ಮಾಡುವೆ: ಸಚಿವ ಮಧು ಬಂಗಾರಪ್ಪ ಭರವಸೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News