PRABHAVAA.COM

ಕರ್ನಾಟಕ ಹಾಗೂ ನಾನು ಸದಾ ವಾಸವಿ ಸಮಾಜದೊಂದಿಗೆ ಇದ್ದೇವೆ- ಸಿ.ಎಂ. ಡಿ.ಕೆ.ಶಿವಕುಮಾರ್

Bengaluru Urban:

Font size:

ನಿಮ್ಮ ಜನಾಂಗದ ಬದುಕು ಬವಣೆಗಳನ್ನು ಹತ್ತಿರದಿಂದ ಬಲ್ಲೆ ವ್ಯಾಪಾರಕ್ಕೂ ಸೈ , ಹೋರಾಟಕ್ಕೂ ಸೈ ಎನ್ನುವುದೇ ವಾಸವಿ ಸಮಾಜದ ಶಕ್ತಿ

ಬೆಂಗಳೂರು, ಆಗಸ್ಟ್ 23:

ಕನ್ನಡಿಗರೊಂದಿಗೆ ಬೆರತು ಬಾಳುವ ವಾಸವಿ ಸಮಾಜದೊಂದಿಗೆ ಕರ್ನಾಟಕ ಹಾಗೂ ನಾನು ಸದಾ ನಿಮ್ಮೊಂದಿಗಿದ್ದೇವೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿರು.

ಅವರು ಇಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಸಭಾ (ರಿ) ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಗ್ಲೋಬಲ್ ಆಕ್ಸಿಲೇಟರ್ ವಿಷನ್ ಸಮ್ಮಿಟ್ ಮತ್ತು ಪ್ರಚಾರ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಆರ್ಯವೈಶ್ಯ ಸಮುದಾಯದ ಕುಲದೇವಿ ಕನ್ನಿಕಾ ಪರಮೇಶ್ವರಿ ತಾಯಿಗೆ ನಮಿಸಿ ಮಾತು ಪ್ರಾರಂಭಿಸಿದ ಮುಖ್ಯಮಂತ್ರಿಗಳು, “ಈ ಸಮುದಾಯದವರ ಮಾತೃಭಾಷೆ ತೆಲುಗು ಆದರೆ ಅವರ ಹೃದಯಭಾಷೆ ಕನ್ನಡ. ನಿಮ್ಮ ಜನಾಂಗದ ಬದುಕುಬವಣೆಗಳನ್ನು ಹತ್ತಿರದಿಂದ ಬಲ್ಲೆ. ನ್ಯಾಯಧರ್ಮಗಳು ಬೇರೂರಿರುವ ಈ ವಾಸವಿ ಸಮುದಾಯದಲ್ಲಿ ಸಣ್ಣ ಸಮುದಾಯವಲ್ಲ. ವಾಸವಿ ಸಮಾಜ ಸಾವಿರಾರು ಜನರಿಗೆ ಉದ್ಯೋಗ ಸೃಷ್ಠಿ ಮಾಡಿದವರು. ಕನ್ನಡಿಗರೊಂದಿಗೆ ಬೆರತು ಬಾಳುವ ವಾಸವಿ ಸಮಾಜದೊಂದಿಗೆ ಕರ್ನಾಟಕ ಹಾಗೂ ನಾನು ಸದಾ ನಿಮ್ಮೊಂದಿಗಿದ್ದೇವೆ”, ಎಂದರು.

ಮೃದುಭಾಷಿಕರಾಗಿ ಬದುಕು ಕಟ್ಟಿಕೊಂಡಿರುವ ಸಮುದಾಯ
ನೆಲದ ಕಾನೂನನ್ನು ಗೌರವಿಸುವ ನಿಮ್ಮ ಜೊತೆಗೆ ನಮ್ಮ ಸರ್ಕಾರವಿದೆ. ಮೃದುಭಾಷಿಕರಾಗಿ ಬದುಕು ಕಟ್ಟಿಕೊಂಡಿರುವ ಸಮುದಾಯ ನಿಮ್ಮದು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧಿಯವರೂ ಕೂಡ ಈ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ವ್ಯಾಪಾರಕ್ಕೂ ಸೈ , ಹೋರಾಟಕ್ಕೂ ಸೈ ಎನ್ನುವುದೇ ವಾಸವಿ ಸಮಾಜದ ಶಕ್ತಿ ಎಂದರು.

ಸಮುದಾಯದ ಬೇಡಿಕೆ ಈಡೇರಿಸುವ ಭರವಸೆ
ಇಂದು ಆರ್ಯವೈಶ್ಯ ಮಹಾಸಭಾದವರು ಸಂಸ್ಥೆಗೆ ಬನಶಂಕರಿಯಲ್ಲಿ ಸ್ಥಳ, ತುಮಕೂರಿನ ಡಾಬಸ್ಪೇಟೆಯ ಶಾಲೆಗೆ ನೆರವು ಸೇರಿದಂತೆ ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಅವುಗಳನ್ನು ಈಡೇರಿಸುವ ಭರವಸೆಯನ್ನು ನೀಡುತ್ತಾ, “ಸಮಾಜದವರು ನನ್ನೊಂದಿಗಿರಬೇಕು”. ಮೇಲಿನ ಬೇಡಿಕೆಗಳ ಬಗ್ಗೆ ಸಧ್ಯದಲ್ಲಿಯೇ ತೀರ್ಮಾನ ಕೈಗೊಳ್ಳುತ್ತೇನೆ ಎಂದರು. “ನಾನು ನಿಮ್ಮೊಂದಿಗಿದ್ದೇನೆ , ನೀವೂ ನನ್ನೊಂದಿಗಿರಬೇಕು. 2028 ರಲ್ಲಿ ಪುನ: ನಾನು ರಾಜ್ಯದ ಮುಖ್ಯಮಂತ್ರಿಯಾಗುವಂತೆ ಬೆಂಬಲ ನೀಡಬೇಕು” ಎಂದು ಕೋರಿದರು. “ಸ್ವಾತಂತ್ರ್ಯ ಉದ್ಯಾನದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ನಿಮ್ಮ ಸಮಸ್ಯೆಗಳಿಂದ ನಿಮಗೆ ಬಿಡುಗಡೆ ನೀಡಲು ನಾನು ಬದ್ಧನಾಗಿದ್ದೇನೆ”, ಎಂದು ತಿಳಿಸಿದರು.

ಆರ್ಯವೈಶ್ಯ ಸಮಾದ ಮೇಲೆ ನನಗೆ ಅಪಾರ ನಂಬಿಕೆಯಿದೆ
ಮರಕ್ಕೆ ಬೇರು ಮುಖ್ಯವಾದಂತೆ , ಮನುಷ್ಯನಿಗೆ ನಂಬಿಕೆ ಮುಖ್ಯ, ಆರ್ಯವೈಶ್ಯ ಸಮಾದ ಮೇಲೆ ನನಗೆ ಅಪಾರ ನಂಬಿಕೆಯಿದೆ. ಈ ಸಮುದಾಯಕ್ಕೆ ನೆರವಾಗುವವರ ಕೈ ಹಿಡಿಯುವಿರೆಂಬ ನಂಬಿಕೆಯಿದೆ. ಆರ್ಯವೈಶ್ಯ ಸಮುದಾಯದ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ನಿಮ್ಮ ವೃತ್ತಿ ಬಹಳ ಮುಖ್ಯ ಮಾತ್ರವಲ್ಲದೇ, ಉದ್ಯೋಗ ಸೃಷ್ಠಿಸುವುದೂ ಮುಖ್ಯ ಎಂದರು.

Comments

Leave a Comment

Prev Post ಉನ್ನತ ಶಿಕ್ಷಣ ಪಡೆಯಲು ಅನುವಾಗುವಂತೆ ಸರ್ಕಾರಿ ಶಾಲಾ-ಕಾಲೇಜುಗಳ ಎಲ್ಲ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿವೇತನ: ಬಸವರಾಜ ರಾಯರಡ್ಡಿ
Next Post ನೈಸ್ ಟೋಲ್ ವಿಷಯದಲ್ಲಿ ನಾನು ಪ್ರಚೋದಿಸುತ್ತಿಲ್ಲ, ಇಷ್ಟೊತ್ತಿಗೆ ಜನರೇ ನುಗ್ಗಬೇಕಿತ್ತು ಎಂದ ಹೆಚ್‍.ಡಿ.ಕುಮಾರಸ್ವಾಮಿ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News