PRABHAVAA.COM

ರಾಯಚೂರು ಐ.ಐ.ಐ.ಟಿ.ಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ: ಎಂ ಬಿ ಪಾಟೀಲ

Bengaluru Urban:

Font size:

ರಾಯಚೂರು ಐ.ಐ.ಐ.ಟಿ.ಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ: ಎಂ ಬಿ ಪಾಟೀಲ

ರಾಯಚೂರು ಐ.ಐ.ಐ.ಟಿ.ಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು, ರಾಯಚೂರಿನ ಐಐಐಟಿ ಕ್ಯಾಂಪಸ್ಸಿನಲ್ಲಿ ₹12 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ಸಂಘಟನೆಯ ಭಾರತೀಯ ಶಾಖೆಯು ಏರ್ಪಡಿಸಿದ್ದ `ತಯಾರಿಕೆಗಾಗಿ ಕೃತಕ ಬುದ್ಧಿಮತ್ತೆ: ನಾಳಿನ ಕರ್ನಾಟಕದ ನಿರ್ಮಾಣ’ ಸಮಾವೇಶದಲ್ಲಿ ಅವರು ಮಂಗಳವಾರ ಮಾತನಾಡಿದರು.

ಅಮೆರಿಕದ ಕಂಪನಿಗಳು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತಯಾರಿಕೆಯಲ್ಲಿ ತೊಡಗಿಕೊಳ್ಳಬೇಕು. ಜತೆಗೆ ಮುಂದಿನ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು. ಸದ್ಯದಲ್ಲೇ ಸರಕಾರವು ಡೇಟಾ ಕೇಂದ್ರಗಳಿಗೆ ಸಂಬಂಧಿಸಿ ಹೊಸ ನೀತಿಯನ್ನು ಜಾರಿಗೆ ತರುತ್ತಿದೆ. ಇದರಲ್ಲಿ ಬೆಂಗಳೂರು ಉತ್ತರ, ಮಂಗಳೂರು ಮತ್ತು 2ನೇ ಸ್ತರದ ನೋಡ್ ಗಳಲ್ಲಿ 1 ಗಿಗಾವ್ಯಾಟ್ ಸಾಮರ್ಥ್ಯದ ಡೇಟಾ ಸೆಂಟರುಗಳ ಸ್ಥಾಪನೆಯನ್ನು ಘೋಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈಗ ಅಭಿವೃದ್ಧಿ ಪಡಿಸುತ್ತಿರುವ ಕ್ವಿನ್ ಸಿಟಿಯಲ್ಲಿ ಭಾರತದ ಪ್ರಪ್ರಥಮ ಎಐ ಸಿಟಿ ಕೂಡ ಇರಲಿದೆ. ನಮ್ಮಲ್ಲಿ 20 ಸಾವಿರಕ್ಕೂ ಹೆಚ್ಚು ಚಿಪ್ ವಿನ್ಯಾಸಗಾರರಿದ್ದಾರೆ. ಹಾಗೆಯೇ `ನಿಪುಣ ಕರ್ನಾಟಕ’ ಯೋಜನೆಯಡಿ 100ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಕೈಗಾರಿಕೆಗಳು ದತ್ತು ತೆಗೆದುಕೊಳ್ಳುತ್ತಿವೆ. 30ಕ್ಕೂ ಹೆಚ್ಚು ಐ.ಟಿ.ಐ.ಗಳನ್ನು ವಿಶ್ವಬ್ಯಾಂಕ್ ನೆರವಿನಿಂದ ಉತ್ಕೃಷ್ಟತಾ ಕೇಂದ್ರಗಳನ್ನಾಗಿ ಮಾಡಲಾಗುತ್ತಿದೆ. ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ಕೊಡುತ್ತಿರುವ 2,500 ಕೋಟಿ ರೂ.ಗಳನ್ನು ವಿನಿಯೋಗಿಸಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಆಧುನೀಕರಿಸಲಾಗುತ್ತಿದೆ ಎಂದು ಅವರು ನುಡಿದಿದ್ದಾರೆ.

ಬೋಯಿಂಗ್, ಜಿಇ ಏರೋಸ್ಪೇಸ್, ಹನಿವೆಲ್, ಅಪ್ಲೈಡ್ ಮೆಟೀರಿಯಲ್ಸ್, ಟಿಮ್ಕೆನ್ ತರಹದ ದೈತ್ಯ ಕಂಪನಿಗಳು ರಾಜ್ಯದಲ್ಲಿ ಕ್ರಿಯಾಶೀಲವಾಗಿವೆ. ಇವುಗಳ ಮೂಲಕ ಭವಿಷ್ಯದ ಪ್ರೊಪಲ್ಶನ್ ತಂತ್ರಜ್ಞಾನ, ಎಐ ಎಂಜಿನ್ ಡಯಾಗ್ನಾಸ್ಟಿಕ್ಸ್, ಕೈಗಾರಿಕಾ ಐಒಟಿ, ಪ್ರಿಸಿಷನ್ ಎಂಜಿನಿಯರಿಂಗ್, ಜಾಗತಿಕ ಸೆಮಿಕಂಡಕ್ಟರ್ ಪೂರೈಕೆ ಸರಪಳಿ ಅಭಿವೃದ್ಧಿ ಇವೆಲ್ಲವೂ ಅಗಾಧ ಪ್ರಮಾಣದಲ್ಲಿ ನಡೆಯುತ್ತಿವೆ. ಇದು ರಾಜ್ಯದ ಆರ್ಥಿಕತೆಗೆ ದೊಡ್ಡ ಪ್ರಮಾಣದ ಕೊಡುಗೆ ನೀಡುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆ, ಬಯೋಟೆಕ್, ಮಶೀನ್ ಟೂಲ್ಸ್, ಎಲೆಕ್ಟ್ರಾನಿಕ್ ವಿನ್ಯಾಸಗಳಲ್ಲಿ ರಾಜ್ಯವು ಇಡೀ ದೇಶದಲ್ಲೇ ಅಗ್ರಸ್ಥಾನದಲ್ಲಿದೆ. ತಲಾವಾರು ಕೈಗಾರಿಕಾ ಉತ್ಪಾದನೆಯಲ್ಲೂ ನಾವು ರಾಷ್ಟ್ರೀಯ ಸರಾಸರಿಗಿಂತ ಮುಂದಿದ್ದೇವೆ. ಡೀಪ್ ಎ.ಐ. ತಂತ್ರಜ್ಞಾನದ ಅಳವಡಿಕೆಯು ಈ ಹೆಗ್ಗಳಿಕೆಯನ್ನು ಮುಂದಿನ ಒಂದೆರಡು ವರ್ಷಗಳಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ. ವರ್ಲ್ಡ್ ಎಕನಾಮಿಕ್ ಫೋರಂ ವರದಿಯ ಪ್ರಕಾರ, ಕೃತಕ ಬುದ್ಧಿಮತ್ತೆಯಿಂದಾಗಿ ಕಾರ್ಮಿಕಶಕ್ತಿಯ ಉತ್ಪಾದಕತೆ ಶೇಕಡ 53ರಷ್ಟು ಹೆಚ್ಚಲಿದೆ. ರಾಜ್ಯದಲ್ಲಿ ಇದನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ಪಾಟೀಲ ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ಇನ್ ಇಂಡಿಯಾ (ಅಮ್ಚಮ್) ಸಂಘಟನೆಯ ರಂಜನಾ ಖನ್ನಾ, ಸಲೀಲ್ ಗುಪ್ತೆ ಮುಂತಾದವರು ಉಪಸ್ಥಿತರಿದ್ದರು.

Comments

Leave a Comment

Prev Post ವಿದ್ಯಾರ್ಥಿ ಸುರಕ್ಷತೆಗೆ ಕಠಿಣ ಆದೇಶ — ಆತ್ಮಹತ್ಯೆ ಅಥವಾ ಅಸ್ವಾಭಾವಿಕ ಮರಣ ಪ್ರಕರಣಗಳಲ್ಲಿ ತಕ್ಷಣ FIR ಕಡ್ಡಾಯ
Next Post ನೈಸ್ ಹಗರಣ ; ರಾಜ್ಯಪಾಲರಿಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

ಸವಾಲು ಎದುರಿಸಲು ಆಧುನಿಕ ಜ್ಞಾನಸೃಷ್ಟಿ ಅಗತ್ಯ: ಎಂ ಬಿ ಪಾಟೀಲ

ಅಗಸ್ತ್ಯ ಇಂಟರ್ನ್ಯಾಷನಲ್ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿ

ಮೇ ತಿಂಗಳಲ್ಲಿ ಪ್ಯಾನ್-ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

ಮೇ ತಿಂಗಳಲ್ಲಿ ಪ್ಯಾನ್-ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

ಕಲಬುರಗಿಯಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್ ಯೋಜನೆ

ಕೆಐಎಡಿಬಿ ಮೂಲಕ ಮೊದಲ ಹಂತ ಅಭಿವೃದ್ಧಿಗೆ ತೀರ್ಮಾನ: ಎಂ ಬಿ ಪಾಟೀಲ

ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನಕ್ಕೆ ಅನುಗುಣವಾಗಿ ಹೆಚ್‌ಎಂಟಿ ಉನ್ನತಿಗೆ ಕ್ರಮ ಎಂದ ಹೆಚ್‌ʼಡಿಕೆ

ಇಡೀ ದಿನ ಕಾರ್ಖಾನೆಯಲ್ಲೇ ಸಂಚರಿಸಿದ ಸಚಿವರು; ಆಡಳಿತ ವರ್ಗ, ಕಾರ್ಮಿಕರು, ಇನ್ನಿತರ ಪ್ರಮುಖರೊಂದಿಗೆ ವಿಸ್ತೃತ ಸಮಾಲೋಚನೆ

7,506 ಕೋಟಿ ರೂ. ಹೂಡಿಕೆಯ 55 ಯೋಜನೆಗಳಿಗೆ ಅಸ್ತು: ಎಂ ಬಿ ಪಾಟೀಲ

7,506 ಕೋಟಿ ರೂ. ಹೂಡಿಕೆಯ 55 ಯೋಜನೆಗಳಿಗೆ ಅಸ್ತು: ಎಂ ಬಿ ಪಾಟೀಲ

ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ: ರಾಜ್ಯದ ನೇತೃತ್ವದಲ್ಲಿ ಪಾಲುದಾರರ ಕಾರ್ಯಾಗಾರ

50ಕ್ಕೂ ಹೆಚ್ಚು ಉನ್ನತ ಪ್ರತಿನಿಧಿಗಳು ಭಾಗಿ, ಕರ್ನಾಟಕಕ್ಕೆ ನೀತಿ ನಿರೂಪಣೆಯ ಅವಕಾಶ

Read all News