*ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್ ವಿತರಣೆ
*ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್ ವಿತರಣೆ*
ಬೆಂ.ಆನೇಕಲ್ : ಯಡವನಹಳ್ಳಿ : ಶ್ರೀ ಜಯದುರ್ಗ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಯಡವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ಹಾಗೂ ಶಾಲಾ ಬ್ಯಾಗ್ಗಳನ್ನು ವಿತರಿಸಲಾಯಿತು.
ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಪ್ರಾಥಮಿಕ ಶಿಕ್ಷಣ ಒದಗಿಸುವಲ್ಲಿ ಸರ್ಕಾರಿ ಶಾಲೆಗಳು ಮಹತ್ವದ ಪಾತ್ರ ವಹಿಸುತ್ತಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ ಹಾಗೂ ಪ್ರೋತ್ಸಾಹ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಟ, ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಇಂತಹ ಸೇವಾ ಕಾರ್ಯಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಶಿಕ್ಷಣದತ್ತ ಹೆಚ್ಚಿನ ಆಸಕ್ತಿ ಮೂಡಿಸುತ್ತವೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಮಂಜುಳಾ ನೀಲಕಂಠಯ್ಯ, ಕಾರ್ಯಧ್ಯಕ್ಷ. ಮಂಜೇಗೌಡ್ರು, ಅಧ್ಯಕ್ಷರು ಜಯಲಕ್ಷ್ಮಿ, ಸಮಾಜ ಸೇವಕರಾದ ನೀಲಕಂಠಯ್ಯ, ಇಸಿಓ ನಾರಾಯಣ್, ಪತ್ರಕರ್ತ ಬಳ್ಳೂರು ಬಾಬು ಸೇರಿದಂತೆ ಹಲವು ಗಣ್ಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






Comments
Leave a Comment