PRABHAVAA.COM

ಭಾರತ ಹಸಿರು ಇಂಧನ ಹೂಡಿಕೆ ಕೇಂದ್ರವಾಗಿ ಹೊರಹೊಮ್ಮುತ್ತಿದೆ ;ಪ್ರಲ್ಹಾದ ಜೋಶಿ

Maharashtra:

Font size:

* ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಕರೆ

ಹಸಿರು ಇಂಧನ ವಲಯದಲ್ಲಿ ರಾಜ್ಯಗಳೂ ಹೂಡಿಕೆ ಪಾಲುದಾರವಾಗಲಿ
* ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಕರೆ
* ಮುಂಬೈಯಲ್ಲಿ ʼನವೀಕರಿಸಬಹುದಾದ ಇಂಧನ ಶೃಂಗಸಭೆ 2026’ ರೋಡ್‌ಶೋ
* 500 GW ಸಾಮರ್ಥ್ಯದ ಗುರಿ ತಲುಪಲು ₹30 ಲಕ್ಷ ಕೋಟಿ ಹೂಡಿಕೆ ಅಗತ್ಯ

ನವದೆಹಲಿ: ವಿಶ್ವದಲ್ಲೇ ಅತ್ಯಂತ ವೇಗದ ಆರ್ಥಿಕತೆ ರಾಷ್ಟ್ರವಾಗಿ ಹೊರ ಹೊಮ್ಮುತ್ತಿರುವ ಭಾರತ ಹಸಿರು ಇಂಧನ ವಲಯದಲ್ಲೂ ದೇಶ-ವಿದೇಶಿ ಹೂಡಿಕೆಗಳನ್ನು ಗಣನೀಯವಾಗಿ ಆಕರ್ಷಿಸುತ್ತಿದ್ದು, ನಮ್ಮ ರಾಜ್ಯಗಳೂ ಪಾಲುದಾರಿಕೆಗೆ ಮುಂದಾಗಬೇಕು ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಕರೆ ನೀಡಿದರು.

ಮುಂಬೈಯಲ್ಲಿ ಗುರುವಾರ ಏರ್ಪಡಿಸಿದ್ದ ‘ಭಾರತ ನವೀಕರಿಸಬಹುದಾದ ಇಂಧನ ಶೃಂಗಸಭೆ 2026’ರ ರೋಡ್‌ಶೋದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಸ್ವಚ್ಛ-ಶುದ್ಧ ಇಂಧನ ವಲಯದಲ್ಲಿ ಹೂಡಿಕೆಗೆ ಉತ್ತೇಜನ ನೀಡಬೇಕಿದ್ದು, ಹಸಿರು ಇಂಧನ ವಲಯವು ಹೂಡಿಕೆ ಮತ್ತು ಸಹಭಾಗಿತ್ವಕ್ಕೆ ಮಹತ್ವದ ಅವಕಾಶ ಒದಗಿಸುತ್ತದೆ ಎಂದು ಹೇಳಿದರು.

2030ರ ವೇಳೆಗೆ 500 ಗಿಗಾವ್ಯಾಟ್ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಗುರಿ ಸಾಧಿಸಲು ಮುಂಬರುವ 5 ವರ್ಷಗಳಲ್ಲಿ ₹30 ಲಕ್ಷ ಕೋಟಿಗೂ ಅಧಿಕ ಹೂಡಿಕೆಯ ಅಗತ್ಯವಿದ್ದು, ಭಾರತೀಯ ಹಣಕಾಸು ಸಂಸ್ಥೆಗಳು, ಬಂಡವಾಳ ಮಾರುಕಟ್ಟೆಗಳು, ವಿಮಾ ನಿಧಿಗಳು, ಮೂಲಸೌಕರ್ಯ ಹೂಡಿಕೆದಾರರು ಮತ್ತು ಖಾಸಗಿ ಬಂಡವಾಳದ ಮೂಲಕ ಸಂಗ್ರಹಿಸಬೇಕಾಗುತ್ತದೆ ಎಂದು ತಿಳಿಸಿದರು.

ಭಾರತದ ಶುದ್ಧ ಇಂಧನ ಹೂಡಿಕೆ ವ್ಯವಸ್ಥೆಯಲ್ಲಿ ಮುಂಬೈ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಲಿದ್ದು, ಎಲ್ಲಾ ರಾಜ್ಯಗಳು ತಮ್ಮ ಯೋಜನೆಗಳ ಪ್ರಸ್ತಾವಿತ ಪಟ್ಟಿಯೊಂದಿಗೆ ಹೂಡಿಕೆಗೆ ಮುಂದಾಗಬೇಕು. ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೂಡಿಕೆಗೆ ಭಾರತ ಮಹತ್ತರ ವೇದಿಕೆ ಒದಗಿಸಿಕೊಡುತ್ತಿದೆ ಎಂದು ಪ್ರತಿಪಾದಿಸಿದರು.

ನ.2ರಿಂದ ನವೀಕರಿಸಬಹುದಾದ ಇಂಧನ ಶೃಂಗಸಭೆ: ʼಭಾರತ ನವೀಕರಿಸಬಹುದಾದ ಇಂಧನ ಶೃಂಗಸಭೆ ಮತ್ತು ಎಕ್ಸ್‌ಪೋ 2026ʼ ನವದೆಹಲಿಯ ಭಾರತ ಮಂಟಪದಲ್ಲಿ ನವೆಂಬರ್ 2ರಿಂದ 5 ರವರೆಗೆ ನಡೆಯಲಿದ್ದು, ಈ ಶೃಂಗಸಭೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಲಿದೆ. BRESE 2026ರಲ್ಲಿ ಮೂರು ಪ್ರಮುಖ ಜಾಗತಿಕ ವೇದಿಕೆಗಳು ಒಂದೇ ಸೂರಿನಡಿ ಸಮಾವೇಶಗೊಳ್ಳಲಿವೆ ಎಂದು ತಿಳಿಸಿದರು.

75ಕ್ಕೂ ಹೆಚ್ಚು ದೇಶಗಳ ಮುಖ್ಯಸ್ಥರು ಭಾಗಿ: ಬಿಆರ್‌ಇ (BRE) ಶೃಂಗಸಭೆ ಮತ್ತು ಎಕ್ಸ್‌ಪೋ, ಅಂತರಾಷ್ಟ್ರೀಯ ಸೌರ ಮೈತ್ರಿಕೂಟದ 9ನೇ ಸಾಮಾನ್ಯ ಸಭೆ ಹಾಗೂ 4ನೇ ಅಂತಾರಾಷ್ಟ್ರೀಯ ಹಸಿರು ಜಲಜನಕ ಸಮ್ಮೇಳನ ಸಹ ನಡೆಯಲಿದ್ದು, ನಾಲ್ಕು ದಿನಗಳ ಈ ಕಾರ್ಯಕ್ರಮದಲ್ಲಿ 75ಕ್ಕೂ ಹೆಚ್ಚು ದೇಶಗಳ ಸರ್ಕಾರದ ಮುಖ್ಯಸ್ಥರು ಮತ್ತು ಇಂಧನ ಸಚಿವರು, ಜಾಗತಿಕ ಸಾಂಸ್ಥಿಕ ಹೂಡಿಕೆದಾರರು, ತಂತ್ರಜ್ಞಾನ ಪೂರೈಕೆದಾರರು ಹಾಗೂ 25,000ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

303 GW ದಾಟಿದ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯ: ಭಾರತ 300 ಗಿಗಾವ್ಯಾಟ್‌ಗೂ ಅಧಿಕ ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯ ದಾಟಿದ್ದು, ಇದೀಗ ಸುಮಾರು 302-303 ಗಿಗಾವ್ಯಾಟ್ ತಲುಪಿದೆ. ಅಂತೆಯೇ ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ ಸುಮಾರು 53.5 ಲಕ್ಷ ಕುಟುಂಬಗಳನ್ನು ತಲುಪಿದೆ. ಕಳೆದ 12 ವರ್ಷಗಳಲ್ಲಿ ಭಾರತದ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯ 80.3 ಗಿಗಾವ್ಯಾಟ್‌ನಿಂದ 300.5 ಗಿಗಾವ್ಯಾಟ್‌ಗೆ ಏರಿಕೆಯಾಗಿದ್ದು, ಶೇ.275ರಷ್ಟು ಏರಿಕೆ ದಾಖಲಿಸಿದೆ ಎಂದು ಪ್ರಲ್ಹಾದ ಜೋಶಿ ಇದೇ ವೇಳೆ ಅಕಿಅಂಶ ಸಹಿತ ವಿವರಿಸಿದರು.

ಸೌರಶಕ್ತಿ ಸಾಮರ್ಥ್ಯ 2.8 ಗಿಗಾವ್ಯಾಟ್‌ನಿಂದ 165 ಗಿಗಾವ್ಯಾಟ್‌ಗೆ ಏರಿಕೆ ಕಂಡಿದೆ. ಅಂದರೆ ಸುಮಾರು 58 ಪಟ್ಟು ಬೆಳವಣಿಗೆಯಾಗಿದೆ. ಪವನಶಕ್ತಿ ಸಾಮರ್ಥ್ಯ 21 ಗಿಗಾವ್ಯಾಟ್‌ನಿಂದ 58 ಗಿಗಾವ್ಯಾಟ್‌, ಶೇ.176ರಷ್ಟು ಹೆಚ್ಚಳವಾಗಿದೆ. 2026–27ನೇ ಹಣಕಾಸು ವರ್ಷದ ಮೊದಲ 4 ತಿಂಗಳಲ್ಲಿ ಭಾರತ 17 ಗಿಗಾವ್ಯಾಟ್‌ಗೂ ಅಧಿಕ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸೇರ್ಪಡೆಗೊಳಿಸಿದ್ದು, 14.33 ಗಿಗಾವ್ಯಾಟ್ ಸೌರಶಕ್ತಿ ಹಾಗೂ 2 ಗಿಗಾವ್ಯಾಟ್‌ಗೂ ಅಧಿಕ ಪವನಶಕ್ತಿ ಸಾಮರ್ಥ್ಯ ಸೇರಿದೆ ಎಂದು ತಿಳಿಸಿದರು.

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ, ಜಂಟಿ ಕಾರ್ಯದರ್ಶಿ ಜೆವಿಎನ್ ಸುಬ್ರಹ್ಮಣ್ಯಂ, ಮಹಾರಾಷ್ಟ್ರ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವ ಅತುಲ್ ಮೋರೆಶ್ವರ್ ಸಾವೆ ಮತ್ತಿತರರು ಉಪಸ್ಥಿತರಿದ್ದರು.

Comments

Leave a Comment

Prev Post ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆ ಪರಿಹಾರಕ್ಕೆ ತಕ್ಷಣದ ಕ್ರಮ: ಸಚಿವ ರಿಜ್ವಾನ್ ಅರ್ಷದ್

ರೈತರ ಸಬಲೀಕರಣಕ್ಕಾಗಿ "PM ಕುಸುಮ್-2.0'ಗೆ ಕೇಂದ್ರ ಸಿದ್ಧತೆ

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ * 500 GW ಪಳೆಯುಳಿಕೆ ರಹಿತ ಇಂಧನ ಗುರಿ ಸಾಧಿಸಲು ಕೃಷಿ ಭೂಮಿ, ಛಾವಣಿಗಳು ಮತ್ತು ಗ್ರಾಮೀಣ ಉದ್ಯಮಗಳಲ್ಲಿ ವಿಕೇಂದ್ರೀಕೃತ ನವೀಕರಿಸಿದ ಇಂಧನ ಸಂಪನ್ಮೂಲಗಳು ಅಗತ್ಯ. * PM-KUSUM ಅಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸ್ವತಂತ್ರ ಸೌರ ಪಂಪ್ ಸ್ಥಾಪನೆ * 13 ಲಕ್ಷ ಗ್ರಿಡ್-ಸಂಪರ್ಕಿತ ಪಂಪ್‌ಗಳ ಸೌರೀಕರಣ

ಸೋಮವಾರದಿಂದಲೇ ತಂಬಾಕು ಖರೀದಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಭರವಸೆ ಕೊಟ್ಟ ಕೇಂದ್ರ ಸಚಿವ ಪಿಯೂಷ್ ಗೋಯಲ್

ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆಗೆ ವಾಣಿಜ್ಯ ಸಚಿವರ ಸೂಚನೆ ಸಭೆಯಲ್ಲಿ ಮೈಸೂರು, ಚಾಮರಾಜನಗರ ಹಾಸನ ಜಿಲ್ಲೆಗಳ ಜನಪ್ರತಿನಿಧಿಗಳು, ನಾಯಕರು ಭಾಗಿ ಸಚಿವ ಹೆಚ್ಡಿಕೆ ಅವರ ಪಾರ್ಲಿಮೆಂಟ್ ಭವನದ ಕಚೇರಿಯಲ್ಲಿ ನಡೆದ ಸಭೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಪ್ರೀತಿ, ಮೋದಿ ಜತೆ ಮದುವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್.ಡಿ. ದೇವೇಗೌಡರ ತಿರುಗೇಟು ರಾಜ್ಯಸಭೆಯಲ್ಲಿಯೇ ಖರ್ಗೆಗೆ ಖಡಕ್ ಉತ್ತರ ಕೊಟ್ಟ ಮಾಜಿ ಪ್ರಧಾನಿಗಳು

ಕಾಂಗ್ರೆಸ್ ಎಸಗಿದ ದ್ರೋಹದ ವಿವರ ಕೊಟ್ಟ ಗೌಡರು ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭವಾಯಿತು

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

Read all News