PRABHAVAA.COM

ಮಂಗಳೂರು ಕಾಲೇಜು ಶಿಕ್ಷಣ ಜಂಟಿ ನಿರ್ದೇಶಕರ ವಿರುದ್ದ ಲೋಕಾಯುಕ್ತಕ್ಕೆ ದೂರು.

Dakshina Kannada:

Font size:

ಮಂಗಳೂರು ಕಾಲೇಜು ಶಿಕ್ಷಣ ಜಂಟಿ ನಿರ್ದೇಶಕರ ವಿರುದ್ದ ಲೋಕಾಯುಕ್ತಕ್ಕೆ ದೂರು.

From Jayaram Udupi

ಮಂಗಳೂರು ಕಾಲೇಜು ಶಿಕ್ಷಣ ಜಂಟಿ ನಿರ್ದೇಶಕರ ವಿರುದ್ದ ಲೋಕಾಯುಕ್ತಕ್ಕೆ ದೂರು.

ಮಂಗಳೂರು:
ಪಿಂಚಣಿ ಮಂಜೂರಾತಿಗೆ ಸಂಬಂಧಿಸಿ ಕರ್ತವ್ಯ ನಿರ್ಲಕ್ಷ ತೋರಲಾಗಿದೆ ಎಂದಾರೋಪಿಸಿ ಮಂಗಳೂರು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ವಿರುದ್ದ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

ಬಂಟ್ವಾಳದ ಎಸ್.ವಿ.ಎಸ್. ಕಾಲೇಜಿನಲ್ಲಿ ಅನುದಾನಿತ ಹುದ್ದೆಯಲ್ಲಿ ಪರಿಚಾರಕರಾಗಿ ಕೆಲಸ ಮಾಡುತ್ತಿದ್ದ ಕಾಂತಪ್ಪ ಅವರ ಮರಣಾನಂತರದ ಕುಟುಂಬ ಪಿಂಚಣಿ ಮತ್ತು ಇತರ ಆರ್ಥಿಕ ಸೌಲಭ್ಯಗಳನ್ನು ಅವರ ಪತ್ನಿಗೆ ನಿರಾಕರಿಸಲಾಗಿತ್ತು.

ಈ ಬಗ್ಗೆ ಮೃತ ಕಾಂತಪ್ಪ ಅವರ ಪತ್ನಿ ಗಿರಿಜಾ ಅವರು ಕಾಲೇಜು ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳಿಗೆ ದೂರು ನೀಡಿದ್ದರು. ಕಾಲೇಜು ಶಿಕ್ಷಣ ಆಯುಕ್ತರ ಕಚೇರಿಯು ೨೦೨೫ರ ನವೆಂಬರ್ ೨೪ ರಂದು ಪ್ರಕರಣವನ್ನು ಪರಿಶೀಲಿಸಿ ಪಿಂಚಣಿ ಪ್ರಸ್ತಾವನೆ ಹಾಗೂ ಸೇವಾ ಪುಸ್ತಕವನ್ನು ಮರು ಟಪ್ಪಾಲಿನಲ್ಲಿ ಸಲ್ಲಿಸುವಂತೆ ಜಂಟಿ ನಿರ್ದೇಶಕರಾದ ಡಾ.ಕವಿತಾ ಅವರಿಗೆ ನಿರ್ದೇಶನ ನೀಡಿತ್ತು.

ಆದರೆ ಮಂಗಳೂರಿನ ಜಂಟಿ ನಿರ್ದೇಶಕರು ಈ ಬಗ್ಗೆ ಕ್ರಮ ವಹಿಸದೆ ನಿರ್ಲಕ್ಷ್ಯ ಮಾಡಿದ್ದರು. ಇದರಿಂದ ನೊಂದ ಗಿರಿಜಾ ಅವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.

ಲೋಕಾಯುಕ್ತ ದೂರಿನ ಸಂಖ್ಯೆ ವೆಬ್ ಸೈಟಿನಲ್ಲಿ ಲಭ್ಯವಿದೆ.೧೮೩೦೨/೨೦೨೫.
ಲೋಕಾ, ಎಂ.ವೈ.ಎಸ್

--------

*ಅಟೋ ಪ್ರಯಾಣ ದರ ಏರಿಕೆ.

ಮಂಗಳೂರು: ಆಟೋ ರಿಕ್ಷಾ ಪ್ರಯಾಣಿಕರಿಗೆ ಪರಿಷ್ಕೃತ ದರ ಜಾರಿಗೆ ಬರಲಿದ್ದು, ಮೊದಲ 1.5 ಕಿ.ಮೀ. ಪ್ರಯಾಣಕ್ಕೆ ಕನಿಷ್ಠ ₹40 ದರ ನಿಗದಿಪಡಿಸಲಾಗಿದೆ. ಗರಿಷ್ಠ ಮೂರು ಮಂದಿ ಪ್ರಯಾಣಿಕರಿಗೆ ಈ ದರ ಅನ್ವಯವಾಗಲಿದೆ. ನಂತರದ ಪ್ರತಿ ಹೆಚ್ಚುವರಿ ಕಿಲೋಮೀಟರ್‌ಗೆ ₹20 ದರ ವಿಧಿಸಬಹುದಾಗಿದೆ.

ಆಟೋ ಕಾಯುವಿಕೆಯ ಮೊದಲ 10 ನಿಮಿಷ ಉಚಿತವಾಗಿದ್ದು, ಬಳಿಕ ಪ್ರತಿ 15 ನಿಮಿಷಕ್ಕೆ ಅಥವಾ ಅದರ ಭಾಗಕ್ಕೆ ₹5 ದರ ವಿಧಿಸಲು ಅವಕಾಶ ನೀಡಲಾಗಿದೆ.

ಪ್ರಯಾಣಿಕರ ಲಗೇಜ್‌ಗೆ ಮೊದಲ 20 ಕೆ.ಜಿ.ವರೆಗೆ ಯಾವುದೇ ಶುಲ್ಕ ಇರುವುದಿಲ್ಲ. ನಂತರ ಪ್ರತಿ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹5 ದರ ವಿಧಿಸಬಹುದಾಗಿದೆ. ಲಗೇಜ್ ಸಾಗಿಸುವ ಸಂದರ್ಭದಲ್ಲಿ ಕನಿಷ್ಠ ಒಬ್ಬ ಪ್ರಯಾಣಿಕ ಕಡ್ಡಾಯವಾಗಿ ಜೊತೆಗಿರಬೇಕು.

ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಪರಿಷ್ಕೃತ ದರದ ಒಂದೂವರೆ ಪಟ್ಟು ದರವನ್ನು ಪ್ರಯಾಣಿಕರಿಂದ ಪಡೆಯಲು ಅವಕಾಶ ನೀಡಲಾಗಿದೆ.

Comments

Leave a Comment

Prev Post ದಿವಂಗತ ಮಾಜಿ ಸಚಿವ ವೀರಣ್ಣನವರ ಜನಪರ ಸೇವೆಗೆ ತುಮಕೂರಿನಲ್ಲಿ ನುಡಿ ನಮನ
Next Post ಜನರ ಮನೆ ಬಾಗಿಲಿಗೆ ಆಡಳಿತ – ಸೆಪ್ಟೆಂಬರ್ 5ರಿಂದ ಪ್ರಜಾಸೇವಾ ಅಭಿಯಾನ ಆರಂಭ"​;ಡಾ. ಶಾಲಿನಿ ರಜನೀಶ್ ಸರ್ಕಾರದ ಮುಖ್ಯ ಕಾರ್ಯದರ್ಶಿ

ದೇಶ ಹಾಗೂ ರಾಜ್ಯದ ಬೆಳವಣಿಗೆಗೆ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಎಲ್ಲರೂ ಜ್ಞಾನ ಹಂಚಿಕೊಂಡು ಬಾಳಬೇಕು ಬೆಂಗಳೂರಿನ ಹೆಮ್ಮೆ ಜ್ಯೋತಿ ನಿವಾಸ್ ಕಾಲೇಜು

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

Read all News