PRABHAVAA.COM

ಭೈರವೈಕ್ಯ ಬಾಲಗಂಗಾಧರನಾಥ ಮಹಾಸ್ವಾಮಿಗಳ 14ನೇ ಪುಣ್ಯಸಂಸ್ಮರಣೆ – ನೂತನ ಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಭವ್ಯ ಸನ್ಮಾನ ಸಮಾರಂಭ"

Bengaluru Urban:

Font size:

ಭೈರವೈಕ್ಯ ಬಾಲಗಂಗಾಧರನಾಥ ಮಹಾಸ್ವಾಮಿಗಳ 14ನೇ ಪುಣ್ಯಸಂಸ್ಮರಣೆ – ನೂತನ ಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಭವ್ಯ ಸನ್ಮಾನ ಸಮಾರಂಭ"

ಭೈರವೈಕ್ಯ ಬಾಲಗಂಗಾಧರನಾಥ ಮಹಾಸ್ವಾಮಿಗಳ 14ನೇ ಪುಣ್ಯಸಂಸ್ಮರಣೆ – ನೂತನ ಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಭವ್ಯ ಸನ್ಮಾನ ಸಮಾರಂಭ"

ಬೆಂಗಳೂರು, ಸೆ.10 - ಆದಿಚುಂಚನಗಿರಿ ಮಠದ ಪರಮಪೂಜ್ಯ ಭೈರವೈಕ್ಯ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಗಳ 14ನೇ ವರ್ಷದ ಪುಣ್ಯಸಂಸ್ಮರಣೆ ಕಾರ್ಯಕ್ರಮವನ್ನು ಭಕ್ತಿ-ಭಾವಪೂರ್ಣವಾಗಿ ಹಮ್ಮಿಕೊಳ್ಳಲಾಗಿದೆ. ನಾಡಿನ ಶ್ರೇಯೋಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಅರ್ಪಿಸಿದ ಮಹಾಸ್ವಾಮಿಗಳ ಸ್ಮರಣಾರ್ಥವಾಗಿ, ರಾಜ್ಯದ ನೂತನ ಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ವಿಶೇಷ ಅಭಿನಂದನೆ ಮತ್ತು ಸನ್ಮಾನ ಸಮಾರಂಭವನ್ನು 'ಮಾನ್ಯ ಮುಖ್ಯಮಂತ್ರಿಗಳ ಅಭಿನಂದನಾ ಸಮಿತಿ' ಆಯೋಜಿಸಿದೆ.

ಈ ಬೃಹತ್ ಸಮಾರಂಭವು ಸೆಪ್ಟೆಂಬರ್ 20, 2025 ಭಾನುವಾರದಂದು ಬೆಂಗಳೂರು ನಗರದ ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಅದ್ಧೂರಿಯಾಗಿ ನಡೆಯಲಿದೆ. ವಿಶೇಷವಾಗಿ, ಐತಿಹಾಸಿಕ "ಗಂಗ ರಾಜವಂಶದ ವೇದಿಕೆ"ಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ನಾಡಿನ ಪರಂಪರೆ ಮತ್ತು ಸಮುದಾಯದ ಒಗ್ಗಟ್ಟನ್ನು ಸಾರುವ ಮಹತ್ವದ ವೇದಿಕೆಯಾಗಲಿದೆ.

ಪರಮಪೂಜ್ಯ ಶ್ರೀಗಳ ದಿವ್ಯ ಆಶೀರ್ವಾದದೊಂದಿಗೆ ನಡೆಯುತ್ತಿರುವ ಈ ಅಭಿನಂದನಾ ಸಮಾರಂಭವು ಸಮುದಾಯದ ಸಂಘಟನೆ ಹಾಗೂ ಭವಿಷ್ಯದ ಸಮಾಜಮುಖಿ ಕಾರ್ಯಗಳಿಗೆ ದಿಕ್ಕೂಚಿಯಾಗಲಿದೆ. ನೂತನ ಸರ್ಕಾರವನ್ನು ಗೌರವಿಸುವುದು ಹಾಗೂ ಮಹಾಸ್ವಾಮಿಗಳ ಉದಾತ್ತ ಆದರ್ಶಗಳನ್ನು ಸ್ಮರಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಸಮಿತಿಯ ಪರವಾಗಿ, ಸಮುದಾಯದ ಹಿರಿಯರು, ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು, ಯುವಜನರು ಹಾಗೂ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಳಕಳಿಯಿಂದ ವಿನಂತಿಸಲಾಗಿದೆ. ಮಾಧ್ಯಮ ಮಿತ್ರರು ಈ ಮಾಹಿತಿಯನ್ನು ತಮ್ಮ ದಿನಪತ್ರಿಕೆಗಳು ಹಾಗೂ ವಾಹಿನಿಗಳ ಮೂಲಕ ನಾಡಿನಾದ್ಯಂತ ತಲುಪಿಸಲು ಸಹಕರಿಸಬೇಕೆಂದು ಸಮಿತಿಯು ಮನವಿ ಮಾಡಿದೆ.

ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದವರು ಕೆ.ಟಿ. ಚಂದ್ರು ನಟರಾಜ್ ಗೌಡ, ಜಯಶ್ರೀ ಗೌಡ, ವಿಶ್ವನಾಥ್ ಎನ್. ಗೌಡ, ವಿಜಯ್ ಕುಮಾರ್, ವಿನಯ್ ಕುಮಾರ್ ಹಾಗೂ ಪೂಜಾರಿ ರಘು ದೊಡ್ಡರಿ.

Comments

Leave a Comment

Prev Post ನೂರು ದಿನಗಳಲ್ಲಿ ಜನಪರ ಯೋಜನೆಗಳ ಘೋಷಣೆ, ರೈತ‑ಕಾರ್ಮಿಕರಿಗೆ ಸರ್ಕಾರದ ಹೊಸ ವರದಾನ
Next Post ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ - ಸಿದ್ದರಾಮಯ್ಯ ವಿಶ್ವಾಸ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News