ಬೆಂಗಳೂರು ಹಿತಕ್ಕೆ ನಮ್ಮ ತೀರ್ಮಾನ ಟೀಕಿಸುತ್ತಿರುವವರು, ಮುಂದೆ ಸ್ಮರಿಸುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

Bengaluru Urban:

Font size:

ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ, ಬಫರ್ ರಸ್ತೆ, ಎಲಿವೇಟೆಡ್ ಕಾರಿಡಾರ್, ಡಬಲ್ ಡೆಕ್ಕರ್ ರಸ್ತೆ ನಿರ್ಮಾಣ ಖಾತಾ ಪರಿವರ್ತನೆಗೆ ಲಂಚ ಪಡೆದ ಅಧಿಕಾರ ವಜಾ ಎಲ್ಲ ಕೆಲಸಗಳಿಗೂ ಕೋರ್ಟ್ ನಿಂದ ತಡೆಯಾಜ್ಞೆ 2 ವರ್ಷದಲ್ಲಿ ಮೇಕೆದಾಟುವಿಗೆ ಶಂಕುಸ್ಥಾಪನೆ ಮಾಡುವ ಆತ್ಮವಿಶ್ವಾಸ ತುಕ್ಕು ಹಿಡಿದ ಆಲೋಚನೆ ಸರಿಪಡಿಸಲು ಆಗುವುದಿಲ್ಲ ಜಕ್ಕೂರು ತರಬೇತಿ ಕೇಂದ್ರ ಸ್ಥಳಾಂತರ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಓಸಿ, ಸಿಸಿ ವಿಚಾರವಾಗಿ ಸಂಪುಟ ಸಭೆಯಲ್ಲಿ ಶೀಘ್ರ ತೀರ್ಮಾನ ಕೇಂದ್ರದ ನಿರ್ದೆಶನದಂತೆ ಮುನ್ಸಿಪಲ್ ಬಾಂಡ್ ಬೆಂಗಳೂರು ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ ಬರುತ್ತಿಲ್ಲ

ಬೆಂಗಳೂರು, ಮಾ.26:

“ಬೆಂಗಳೂರು ನಗರದ ಹಿತಕ್ಕೆ ನಾವು ಕೈಗೊಂಡಿರುವ ಅನೇಕ ತೀರ್ಮಾನಗಳ ಬಗ್ಗೆ ವಿರೋಧ ಪಕ್ಷದವರು ಟೀಕೆ ಮಾಡಬಹುದು, ಮಾಡಲಿ. ಆದರೆ ಮುಂದಿನ ಐದು ವರ್ಷಗಳ ನಂತರ ಡಿ.ಕೆ. ಶಿವಕುಮಾರ್ ಅವರು ಉತ್ತಮ ನಿರ್ಧಾರ ಕೈಗೊಂಡರು ಎಂದು ಹೇಳುತ್ತಾರೆ. ನನಗೆ ಅಷ್ಟೇ ಸಾಕು. ಈಗ ನಾನು ಬೇರೆಯವರಿಗೆ ಒಪ್ಪಿಸಲು ಆಗದೇ ಇರಬಹು, ಆದರೆ ಸಮಯ ಬಂದಾಗ ಅವರು ಒಪ್ಪುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿರೋಧ ಪಕ್ಷಗಳ ನಾಯಕರಿಗೆ ತಿರುಗೇಟು ನೀಡಿದರು.

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಚಾರವಾಗಿ ನಡೆದ ಚರ್ಚೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

“ಜಿಬಿಎ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಅನೇಕ ಚರ್ಚೆ ನಡೆಸಿದ್ದಾರೆ. ಅರ್.ಅಶೋಕ್ ಅವರು ಅಶ್ವಥ್ ನಾರಾಯಣ್ ಅವರು ಅನೇಕ ಸಲಹೆಗಳನ್ನು ನೀಡಿದ್ದಾರೆ. ಇವರ ಸಲಹೆಗಳನ್ನು ನಾನು ಒಪ್ಪುತ್ತೇನೆ. ಜೊತೆಗೆ ಟೀಕೆಯನ್ನೂ ಸಹ ಮಾಡಿದ್ದಾರೆ. ನಾನು ಟೀಕೆಯನ್ನು ಯಾವಾಗಲೂ ಸ್ವೀಕಾರ ಮಾಡುವವನು. ಟೀಕೆ ಇಲ್ಲದೇ ಹೋದರೆ ಯಾವುದೇ ಮನುಷ್ಯನನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಚಿನ್ನ ಪರೀಕ್ಷೆ ಮಾಡುವಾಗ ಬೆಂಕಿಗೆ ಹಾಕುತ್ತಾರೆ. ಮನುಷ್ಯನನ್ನು ಪರೀಕ್ಷೆ ಮಾಡುವಾಗ ಟೀಕೆಗಳು, ಆಪಾದ‌ನೆ ಮಾಡುತ್ತಾರೆ. ಇದನ್ನು ನಾವು ಯಾವ ರೀತಿ ತಿದ್ದಿಕೊಳ್ಳಬೇಕು ಎಂಬುದು ಇಲ್ಲಿ ಮುಖ್ಯವಾದುದು. ಟೀಕೆ ಮಾಡಿದರು ಎಂದ ತಕ್ಷಣ ನಾನು ಸಿಟ್ಟು ಮಾಡಿಕೊಳ್ಳುವುದು ಮಾಡುವುದಿಲ್ಲ” ಎಂದರು.

ಈ ಸದನದಲ್ಲಿ ಈ ಹಿಂದೆ ಇದ್ದ ನಾಯಕರಾದ ಬಂಗಾರಪ್ಪ, ಕಾಗೋಡು ತಿಮ್ಮಪ್ಪ, ಲಕ್ಕಪ್ಪ, ಮೇಲ್ಮನೆಯಲ್ಲಿ ನಾಣಯ್ಯ, ಎಕೆ ಸುಬ್ಬಯ್ಯ, ಎಂ.ಸಿ ನಾಣಯ್ಯ ಸೇರಿದಂತೆ ಅನೇಕರು ಚೆನ್ನಾಗಿ ಚರ್ಚೆ ಮಾಡುತ್ತಿದ್ದರು. ಆಗಿನ ಚರ್ಚೆಸಕಾರಾತ್ಮಕವಾಗಿ ನಡೆಯುತ್ತಿತ್ತು. ಚರ್ಚೆ ಈಗ ನಕರಾತ್ಮಕವಾಗಿ ಹೋಗುತ್ತಿದೆ. Positive thinkers always have a solution for every problem. Negative thinker always have problem for every solution. ಧನಾತ್ಮಕ ಎಂಬುದು ಯಾವಾಗಲೂ ಇರಬೇಕು. ಆಸಕ್ತಿ ಪಟ್ಟು ಬೆಂಗಳೂರು ಅಭಿವೃದ್ದಿ ಖಾತೆಯನ್ನು ವಹಿಸಿಕೊಂಡಿದ್ದೇನೆ. ನಾನು ಈ ಹಿಂದೆ ನಗರಾಭಿವೃದ್ದಿ ಸಚಿವನಾಗಿದ್ದೆ, ಇಂಧನ ಸಚಿವನಾಗಿದ್ದೆ, ನನಗೆ ಈಗ ಸಾಕಷ್ಟು ಅನುಭವ ಹೊಂದಿದ್ದು ಬೆಂಗಳೂರಿನಲ್ಲೂ ಬದಲಾವಣೆ ಮಾಡಬೇಕು ಎಂದು ಹೊರಟಿದ್ದೇನೆ. ಆದರೂ ಒಂದಷ್ಟು ಜನ ತಪ್ಪು ಕಂಡುಹಿಡಿದರು. ಇದು ವಿರೋಧ ಪಕ್ಷದ ಕರ್ತವ್ಯವೂ ಹೌದು” ಎಂದರು.

“ಕುಮಾರಸ್ವಾಮಿ ಅವರಿಗೆ ಇದೇ ಸದನದಲ್ಲಿ ಒಮ್ಮೆ ಡಿವಿಜಿ ಅವರ ಸಾಲುಗಳನ್ನು ಹೇಳಿದ್ದೆ. ಎದ್ದೆದ್ದು ಬೀಳುತಿಹೆ ಗುದ್ದಾಡಿ ಸೋಲುತಿಹೆ ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ, ಜಗವನ್ನು ಉದ್ದರಿಸುವೆ ಎನುತಿಹೆ ಸಖನೇ ನಿನ್ನ ಉದ್ದಾರ ಎಷ್ಟಾಯಿತೋ ಮಂಕುತಿಮ್ಮ ಎನ್ನುವ ಮಾತು ವಿರೋಧ ಪಕ್ಷದ ನಾಯಕರ ಮಾತು ಕೇಳಿ ನೆನಪಿಗೆ ಬಂತು. ನಾನು ಬೆಂಗಳೂರು ಅಭಿವೃದ್ಧಿ ಇಲಾಖೆ ಜವಾಬ್ದಾರಿ ಹೊತ್ತುಕೊಂಡ ಮೇಲೆ ಸಾಕಷ್ಟು ಅಧ್ಯಯನ ನಡೆಸಿದ್ದೇನೆ. ಬೆಂಗಳೂರಿನ ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೇನೆ. ಆಗ 70 ಲಕ್ಷ ಇದ್ದ ಜನಸಂಖ್ಯೆ ಈಗ 1.40 ಕೋಟಿ ಆಗಿದೆ. 1.30 ಲಕ್ಷ ವಾಹನಗಳಿವೆ. ಬೇರೆ ನಗರಗಳಲ್ಲಿ ದೊಡ್ಡ ರಸ್ತೆಗಳು ಶೇ.16 ರಷ್ಟಿವೆ. ನಮ್ಮಲ್ಲಿ ಶೇ. 8 ರಷ್ಟು ಮಾತ್ರ ಇದೆ. ಈ ಹಿಂದೆ ನೈಸ್ ರಸ್ತೆ ಮಾಡಿದರೂ ಪೂರ್ಣಗೊಳಿಸಲಿಲ್ಲ. ಫೆರಿಫೆರಲ್ ರಿಂಗ್ ರಸ್ತೆ ಅಂದು ಮಾಡಿದ್ದರೆ 3 ಸಾವಿರ ಕೋಟಿಗೆ ಮುಗಿದು ಹೋಗುತ್ತಾ ಇತ್ತು. ಈ ಎಲ್ಲಾ ಕಾರಣಗಳಿಂದ ಸಂಚಾರ ದಟ್ಟಣೆ ಉಂಟಾಗಿದೆ” ಎಂದರು.

“ಬೆಂಗಳೂರು ನಗರದ ಆಡಳಿತ ಸುಧಾರಣೆಗಾಗಿ 2025 ಮೇ 15 ರಂದು ಹೊಸ ನೋಟಿಫಿಕೇಶನ್ ಮಾಡಿ ಪ್ರಸ್ತುತ ಇರುವ ಪ್ರದೇಶಗಳನ್ನು ಸೇರಿ ಐದು ಪಾಲಿಕೆಗಳನ್ನು ಮಾಡಲಾಯಿತು. ಸೆಪ್ಟೆಂಬರ್ 2 ರಂದು 74 ನೇ ತಿದ್ದುಪಡಿ ತರಬೇಕು ಎಂದು ಹೊರಡಲಾಯಿತು. ಏಕಾಏಕಿ ತೀರ್ಮಾನ ಮಾಡಲಿಲ್ಲ. ವಿರೋಧ ಪಕ್ಷದ ನಾಯಕರ ಮಾತಿನಂತೆ ಸದನ ಸಮತಿ ರಚನೆ ಮಾಡಿ ಅವರು ನೀಡಿದ ಸಲಹೆಗಳನ್ನು ತೆಗೆದುಕೊಳ್ಳಲಾಯಿತು. ಇದರಲ್ಲಿ ತಪ್ಪುಗಳಿದ್ದರೆ ಅದನ್ನೂ ಸಹ ತಿದ್ದುಪಡಿ ಮಾಡಲಾಗುವುದು. ಈಗ 369 ವಾರ್ಡ್ ಗಳನ್ನು ಮಾಡಲಾಗಿದೆ. ಬೆಂಗಳೂರನ್ನು ಯಾವುದೇ ಕಾರಣಕ್ಕೂ ಒಡೆಯುತ್ತಿಲ್ಲ. ಇದು ಆಡಳಿತದ ವಿಕೇಂದ್ರಿಕರಣ. ಬೆಂಗಳೂರಿನಲ್ಲಿ ದೊಡ್ಡ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಅದಕ್ಕೆ ಸರ್ಕಾರ ಸಹಾಯ ಬೇಕುತ್ತದೆ ಅದಕ್ಕೆ ಜಿಬಿಎಗೆ ಮುಖ್ಯಮಂತ್ರಿಯವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗಿದೆ. ಬೆಂಗಳೂರಿಗೆ ಪ್ಲಾನಿಂಗ್ ಅಥಾರಿಟಿ ಇರಲಿಲ್ಲ ಅದನ್ನು ಸಹ ಬಗೆಹರಿಸಲಾಗಿದೆ. ಜಿಬಿಎ ಇದರ ಬಗ್ಗೆ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು.

“ಬೆಂಗಳೂರಿನ ಅಭಿವೃದ್ಧಿಗೆ 2008 ಬಿಜೆಪಿ ಸರ್ಕಾರ ಐದು ವರ್ಷಕ್ಕೆ 1960 ಕೋಟಿ ಅನುದಾನ ನೀಡಿತ್ತು. ನಮ್ಮ ಸರ್ಕಾರ 7 ಸಾವಿರ ಕೋಟಿ ನೀಡಿತ್ತು, ಬಿಜೆಪಿ 12 ಸಾವಿರ ಕೋಟಿಗೆ ಏರಿಕೆ ಮಾಡಿತ್ತು. ಹೀಗೆ ಹಂತ ಹಂತವಾಗಿ ನಾವು 3 ಸಾವಿರ ಕೋಟಿ, 2025 ರಲ್ಲಿ 7 ಸಾವಿರ ಕೋಟಿ ಹಾಗೂ ಮುಖ್ಯಮಂತ್ರಿಯವರ ಅನುದಾನದಲ್ಲಿ ಮತ್ತೆ 1,500 ಕೋಟಿ ನೀಡಿದ್ದಾರೆ. ಈ ವರ್ಷ 7 ಸಾವಿರ ಕೋಟಿ ನೀಡಲಾಗಿದೆ. ಹೀಗೆ ಕಾಲಕ್ಕೆ ತಕ್ಕಂತೆ ಅನುದಾನ ಜಾಸ್ತಿಯಾಗುತ್ತಾ ಹೋಗಿದೆ. ಬಿಜೆಪಿ 2020 ರಲ್ಲಿ ಬಿಜೆಪಿ ಸರ್ಕಾರ ಮಾಡಿದ ತೆರಿಗೆ ಕಾನೂನನ್ನು ಬದಲಾವಣೆ ಮಾಡಿಲ್ಲ. ನಾವು ಜನರಿಗೆ ಇನ್ನಷ್ಟು ಅನುಕೂಲ ಮಾಡಿಕೊಟ್ಟಿದ್ದೇವೆ. ಒಟಿಎಸ್, ಕಡಿಮೆ ದಂಡ ಸೇರಿದಂತೆ ಅನೇಕ ಅವಕಾಶ ಕೊಡಲಾಗಿದೆ. ಒಟಿಎಸ್ ಜಾರಿ ಮಾಡಿದ ಕಾರಣಕ್ಕೆ 1277 ಕೋಟಿ ಹೆಚ್ಚುವರಿ ಆದಾಯ ಬಂದಿದೆ” ಎಂದು ತಿಳಿಸಿದರು.

“ಮೋದಿಯವರು ಏಕೆ ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದು ಕರೆದರು. ಭವಿಷ್ಯದ ಎಲ್ಲಾ ಸವಾಲುಗಳಿಗೆ ಬೆಂಗಳೂರನ್ನು ಸಿದ್ದತೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರು ಮೂಲಕ ಭಾರತವನ್ನು ನೋಡಲಾಗುತ್ತದೆ ಎಂದು ಹೇಳಿದ್ದರು. ಜಾಗತಿಕ ನಾಯಕರು ಮೊದಲು ದೆಹಲಿಗೆ ಬರುತ್ತಿದ್ದರು ಈಗ ಸಮಯ ಬದಲಾಗಿದೆ ಮೊದಲು ಬೆಂಗಳೂರಿಗೆ ಬರುತ್ತಾರೆ ಎಂದಿದ್ದರು. ಇದು ಕೇವಲ ನಮ್ಮಿಂದ ಮಾತ್ರವಲ್ಲ, ಪ್ರತಿಭಾವಂತ ಯುವಕರು, ನಾಗರೀಕರು ಎಲ್ಲಾ ಸರ್ಕಾರಗಳಿಂದ ಸಾಧ್ಯವಾಗಿದೆ” ಎಂದು ತಿಳಿಸಿದರು.

ಬೆಂಗಳೂರು ನನಗೆ ಎಲ್ಲವನ್ನು ಕೊಟ್ಟಿದೆ, ನಾನು ಬೆಂಗಳೂರಿಗೆ ಕೊಡುಗೆ ನೀಡುವ ಬಯಕೆ ಇದೆ:

“ನಾನು ಬೆಂಗಳೂರಿನ ಶಾಸಕರಿಗೆ ಸಭೆಗಳಲ್ಲಿ ಒಂದು ಮಾತು ಹೇಳುತ್ತೇನೆ. ನಾನು ಬೇರೆ ಕಡೆಯಿಂದ ಬಂದವನು ಎಂದು ಭಾವಿಸಬೇಡಿ. ಬೆಂಗಳೂರು ಕರ್ನಾಟಕ ರಾಜ್ಯದ ಹೃದಯ ಎಂದು ಹೇಳಿದ್ದೇನೆ. ನಾನು ಬೆಂಗಳೂರಿನಲ್ಲಿ ಹುಟ್ಟಿಲ್ಲದಿರಬಹುದು. ಕನಕಪುರದಲ್ಲಿ ಹುಟ್ಟಿದರೂ ಅದು ಬೆಂಗಳೂರಿನ ಭಾಗ. ನನ್ನ 6ನೇ ವಯಸ್ಸಿಗೆ ಬೆಂಗಳೂರಿಗೆ ಬಂದವನು ಇಲ್ಲಿಯವರೆಗೂ ಇಲ್ಲೇ ನೆಲೆಸಿದ್ದೇನೆ. ಬೆಂಗಳೂರು ನನಗೆ ಎಲ್ಲವನ್ನು ಕೊಟ್ಟಿದ್ದು, ಬೆಂಗಳೂರಿಗೆ ನಾನು ಸ್ವಲ್ಪವಾದರೂ ಕೊಡುಗೆ ನೀಡಬೇಕು. ನಾನು ಇಲ್ಲಿ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ನಾನು ಹೆಚ್ಚು 10-15 ವರ್ಷ ರಾಜಕೀಯ ಮಾಡಬಹುದು. ನಮಗೆ ಸಿಕ್ಕ ಅವಕಾಶದಲ್ಲಿ ಏನಾದರೂ ಕೊಡುಗೆ ನೀಡಬೇಕು ಎಂದು ಪ್ರಯತ್ನಿಸುತ್ತಿದ್ದೇನೆ. ನಾನೊಬ್ಬನೇ ಎಲ್ಲವನ್ನು ಮಾಡಲು ಸಾಧ್ಯವಿಲ್ಲ. ನನ್ನ ಜತೆಗೆ ನೀವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಮೂಲ್ಯವಾದ ಸಲಹೆ ನೀಡಬೇಕು” ಎಂದು ಮನವಿ ಮಾಡಿದರು.

ಬೆಂಗಳೂರು ರಸ್ತೆ ಅಗಲೀಕರಣ ಅಸಾಧ್ಯ

“ಸಂಚಾರ ದಟ್ಟಣೆ ಬಗ್ಗೆ ನಮ್ಮ ಬಗ್ಗೆಯೇ ಹೆಚ್ಚು ಸುದ್ದಿ. ಮುಂಬೈ, ಹೈದರಾಬಾದ್, ದೆಹಲಿಯಲ್ಲಿ ನಮಗಿಂತ ಕೆಟ್ಟದಾಗಿ ಇದ್ದರೂ ನಮ್ಮ ಬಗ್ಗೆಯೇ ಹೆಚ್ಚು ಸುದ್ದಿ. ಟ್ರಾಫಿಕ್ ವಿಚಾರದಲ್ಲಿ ಅನೇಕ ಕ್ರಮ ಕೈಗೊಂಡಿದ್ದೇವೆ. ಬೆಂಗಳೂರಿನಲ್ಲಿ ಇರುವ ರಸ್ತೆ ಪ್ರಮಾಣ ಕೇವಲ 8% ಮಾತ್ರ. ರಸ್ತೆ ಅಗಲೀಕರಣ ಮಾಡಬೇಕು, 2013ರಲ್ಲಿ ಪರಿಹಾರ ವಿಚಾರವಾಗಿ ಬಂದ ಕಾಯ್ದೆ ಬಂದ ನಂತರ ಪರಿಹಾರ 2 ಪಟ್ಟು ನೀಡಬೇಕು. ಹೀಗಾಗಿ ರಸ್ತೆ ಅಗಲೀಕರಣ ಅಸಾಧ್ಯ. ಹೀಗಾಗಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮಾಡಲು ಮುಂದಾಗಿದ್ದೇವೆ. ಈ ಯೋಜನೆಗೆ ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ಕೈಬಿಡಲು ಆಗುವುದಿಲ್ಲ. ಅಲ್ಲಿನ ಭೂ ಮಾಲೀಕರಿಗೆ 2013ರ ಕಾಯ್ದೆ ಅನ್ವಯ ಪರಿಹಾರ ನೀಡಿದ್ದೇವೆ. ಪರಿಹಾರಕ್ಕೆ 5 ಅವಕಾಶಗಳನ್ನು ನೀಡಿದ್ದೇವೆ. ಮೊದಲ ಹಂತದ ಯೋಜನೆ ಜಾರಿಗೆ 80% ಭೂಸ್ವಾಧೀನ ಪ್ರಕ್ರಿಯೆಗೆ ಅನುಮತಿ ನೀಡಲಾಗಿದೆ. ಸಧ್ಯದಲ್ಲೇ ಟೆಂಡರ್ ಕರೆಯಲಾಗುವುದು. ಈ ರಸ್ತೆ ಆದರೆ ಬೆಂಗಳೂರಿನಲ್ಲಿ ಅರ್ಧ ಸಂಚಾರಿ ದಟ್ಟಣೆ ನಿವಾರಣೆಯಾಲಿದೆ. ಈ ಯೋಜನೆಗೆ ಒಂದೇ ದಿನದಲ್ಲಿ 26 ಸಾವಿರ ಕೋಟಿ ಸಾಲ ನೀಡಲು ಮುಂದಾದ ಹುಡ್ಕೋಗೆ ಧನ್ಯವಾದಗಳು” ಎಂದು ತಿಳಿಸಿದರು..

ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ಉತ್ತಮ ಆಯ್ಕೆ:

“ನಗರದ ಒಳಗೆ ರಸ್ತೆ ಅಗಲೀಕರಣ ಅಸಾಧ್ಯವಾಗಿರುವುದರಿಂದ ನಾನು ಕೇಂದ್ರ ಸಚಿವರಾದ ನಿತೀನ್ ಗಡ್ಕರಿ, ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ, ಟನಲ್ ರಸ್ತೆ ಮಾಡಲು ಮುಂದಾಗಿದ್ದೇವೆ. ಮುಂಬೈನಲ್ಲಿ 6-7 ಟನಲ್ ರಸ್ತೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಇದರ ಹೊರತಾಗಿ ಬೇರೆ ಆಯ್ಕೆಗಳಿಲ್ಲ. ಟನಲ್ ರಸ್ತೆಯಲ್ಲಿ ಕೆಲವು ಪಾಯಿಂಟ್ ಗಳಲ್ಲಿ 2-3 ಸಾವಿರ ಕೋಟಿ ಭೂಸ್ವಾಧೀನಕ್ಕೆ ಬೇಕಾಗುತ್ತದೆ. ಅದರ ಹೊರತಾಗಿ 17 ಸಾವಿರ ಕೋಟಿ ರಸ್ತೆ ನಿರ್ಮಾಣಕ್ಕೆ ಬೇಕಾಗುತ್ತದೆ. ಬೇರೆ ರಾಜ್ಯಗಳಲ್ಲಿ ಟನಲ್ ರಸ್ತೆಗೆ ಆಗಿರುವ ಟೆಂಡರ್ ಗೂ ನಮ್ಮ ಟೆಂಡರ್ ಗೂ ಬಹಳ ವ್ಯತ್ಯಾಸವಿದೆ. ನಮ್ಮಲ್ಲಿ 700-800 ಕೋಟಿ ಪ್ರತಿ ಕಿ.ಮೀ.ಗೆ ವೆಚ್ಚವಾಗಲಿದ್ದು, ಬೇರೆ ರಾಜ್ಯಗಳಲ್ಲಿ 1300-1400 ಕೋಟಿ ವೆಚ್ಚವಾಗಿದೆ” ಎಂದು ವಿವರಿಸಿದರು.

ಆಸ್ತಿ ದಾಖಲೆ ಡಿಜಿಟಲಿಕರಣ, ಇಖಾತಾ ಸೌಲಭ್ಯ

“ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಭೂಮಿ ಯೋಜನೆ ತಂದು ಪಹಣಿಗಳನ್ನು ಸರಿಪಡಿಸುವ ಯೋಜನೆ ಮಾಡಿದೆವು. ನಗರ ಪ್ರದೇಶದಲ್ಲಿ ಇದನ್ನು ಮಾಡಲು ಆಗಿರಲಿಲ್ಲ. ನಾನು ಅಧಿಕಾರ ವಹಿಸಿಕೊಂಡ ಬಳಿಕ ನೋಡಿದಾಗ ಬಿಡಿಎ ಹಾಗೂ ಪಾಲಿಕೆಗಳಲ್ಲಿ ದಾಖಲೆ ತಿದ್ದುವುದೇ ಕೆಲಸವಾಗಿದೆ. ಇದರಲ್ಲಿ ರಾಜಕೀಯದವರು, ಅಧಿಕಾರಿಗಳು ಸೇರಿಕೊಂಡಿದ್ದಾರೆ. ಹೀಗಾಗಿ ಆಸ್ತಿ ದಾಖಲೆ ಡಿಜಿಟಲ್ ಗೊಳಿಸಲು ಕೋಟ್ಯಂತರ ಪುಟಗಳ ದಾಖಲೆಯನ್ನು ಸ್ಕ್ಯಾನ್ ಮಾಡಿಸಲಾಗಿದೆ. ಇದಕ್ಕಾಗಿ ಇ ಖಾತೆ ತಂದಿದ್ದೇವೆ. ತೆರಿಗೆ ಸೋರಿಕೆ ತಡೆಗಟ್ಟಲು, ವಂಚನೆ ತಪ್ಪಿಸಲು ನಾವು ಆಸ್ತಿ ದಾಖಲೆಗಳಿಗೆ ಆಧಾರ್ ಕಾರ್ಡ್ ಜೋಡಿಸುತ್ತಿದ್ದೇವೆ. ಈ ವಿಚಾರವಾಗಿ ವಿರೋಧ ಪಕ್ಷದವರು ನಮ್ಮನ್ನು ಟೀಕೆ ಮಾಡುತ್ತಿದ್ದಾರೆ. ಮಾಡಲಿ, ಟೀಕೆ ಮಾಡುವುದು ತಪ್ಪಲ್ಲ. ನಾವು ಕೈಗೊಂಡಿರುವ ಕ್ರಮ ನೋಡಿ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ” ಎಂದು ತಿಳಿಸಿದ್ದಾರೆ.

ಲಂಚ ಪಡೆದ ಅಧಿಕಾರ ವಜಾಗೊಳಿಸಲಾಗಿದೆ:

“25 ಲಕ್ಷ ಆಸ್ತಿಗಳು ಬೆಂಗಳೂರು ನಗರದಲ್ಲಿವೆ. ಅದರಲ್ಲಿ 9 ಲಕ್ಷ ಎ ಖಾತಾಗಳನ್ನು ನೀಡಿದ್ದೇವೆ. ಡ್ರೋನ್ ಸರ್ವೆ ಬಗ್ಗೆ ವಿರೋಧ ಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದವರ ಸಲಹೆಗಳನ್ನು ಸ್ವೀಕರಿಸಿ, ಡ್ರೋನ್ ಸರ್ವೆಯಲ್ಲಿ ತಪ್ಪಿದ್ದರೆ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಲು ಅವಕಾಶ ಕಲ್ಪಿಸುತ್ತೇವೆ. ನಾವು ಆಸ್ತಿ ದಾಖಲೆಗಳನ್ನು ಹಾಗೂ ಆ ಜಾಗವನ್ನು ಮಾತ್ರ ಸರಿಪಡಿಸುತ್ತಿದ್ದು, ಅದರಲ್ಲಿ ಕಟ್ಟಿರುವ ಕಟ್ಟಡವನ್ನು ರೆಗ್ಯುಲರೈಸ್ ಮಾಡುತ್ತಿಲ್ಲ. ಇನ್ನು ಈ ಹಿಂದೆ ಮಾಡಿದ ಬಡಾವಣೆಗಳಲ್ಲಿ ರಸ್ತೆ ಜಾಗದ ಪಹಣಿಯಲ್ಲಿ ಹಳೇ ಮಾಲೀಕರ ಹೆಸರು ಇದ್ದವು. ಇದಕ್ಕೆ ಕಾನೂನು ತಂದು ನಗರದ ಎಲ್ಲಾ ರಸ್ತೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ತರಲಾಗಿದೆ. 1.20 ಲಕ್ಷ ಅರ್ಜಿಗಳು ಬಿಯಿಂದ ಎ ಖಾತಾ ಪರಿವರ್ತನೆಗೆ ಅರ್ಜಿ ಬಂದಿದ್ದು, 60 ಸಾವಿರ ಅರ್ಜಿಗಳು ವಿಲೇವಾರಿಯಾಗಿವೆ. 45 ಸಾವಿರ ವಜಾಗೊಂಡಿದ್ದು, 15 ಸಾವಿರ ಅರ್ಜಿಗಳು ವಿಲೇವಾರಿ ಪ್ರಕ್ರಿಯೆಯಲ್ಲಿವೆ. ಇನ್ನು ವಿರೋಧ ಪಕ್ಷದ ನಾಯಕ ಅಶೋಕ್ ಅವರು ಹೇಳಿದಂತೆ ಕೆಲವು ಅಧಿಕಾರಿಗಳು ಲಂಚ ಪಡೆಯುತ್ತಿರಬಹುದು. ಈ ಬಗ್ಗೆ ಅವರು ಗಮನ ಸೆಳೆದ ತಕ್ಷಣವೇ ನಮ್ಮ ಅಧಿಕಾರಿಗಳು ಪರಿಶೀಲಿಸಲಾಗಿದ್ದು, ಲಂಚ ಪಡೆದ ಅಧಿಕಾರಿಗಳನ್ನು ಈಗಾಗಲೇ ವಜಾಗೊಳಿಸಲಾಗಿದೆ.” ಎಂದರು.

ನಂಬಿಕೆ ನಕ್ಷೆ, ಒಟಿಎಸ್ ಮೂಲಕ ಲಕ್ಷಾಂತರ ನಾಗರಿಕರಿಗೆ ಪ್ರಯೋಜನ

“ಇನ್ನು ಕಟ್ಟಡ ನಕ್ಷೆ ಅನುಮೋದನೆ ವಿಚಾರದಲ್ಲೂ ಸಾರ್ವಜನಿಕರಿಗೆ ಸಾಕಷ್ಟು ಕಿರುಕುಳ ನೀಡಲಾಗುತ್ತಿತ್ತು. ಹೀಗಾಗಿ 50X80 ವಿಸ್ತೀರ್ಣದ ನಿವೇಷನದಲ್ಲಿ ನಿರ್ಮಿಸಲಾಗುವ ಕಟ್ಟಡ ನಕ್ಷೆಗಳನ್ನು ನಂಬಿಕೆ ನಕ್ಷೆ ಯೋಜನೆ ಮೂಲಕ ಅಧಿಕೃತ ವಾಸ್ತುಶಿಲ್ಪಿ ಹಾಗೂ ಇಂಜಿನಿಯರ್ ಗಳಿಂದ ಅನುಮತಿ ನೀಡುವ ವ್ಯವಸ್ಥೆ ತರಲಾಗಿದೆ. ಇದರಿಂದ ಜನರಿಗೆ ವೇಗವಾಗಿ ನಕ್ಷೆ ಅನುಮೋದನೆ ದೊರೆಯುತ್ತಿದೆ. ಇನ್ನು ತೆರಿಗೆ ಬಾಕಿ ಉಳಿಸಿಕೊಂಡಿದ್ದವರಿಗೆ ಒಟಿಎಸ್ ಜಾರಿ ಮಾಡಿ ಅವಕಾಶ ನೀಡಿ ಅವರಿಗೆ ಬಡ್ಡಿ ಮನ್ನಾ ಮಾಡಲಾಗಿದೆ. ಇದರಿಂದ ಬೆಂಗಳೂರಿನಲ್ಲಿ 2.60 ಲಕ್ಷ ಆಸ್ತಿ ಮಾಲೀಕರಿಗೆ ಇದರಿಂದ ಪ್ರಯೋಜನವಾಗಿದೆ. ಟಿಡಿಆರ್ ವಿಚಾರದಲ್ಲೂ ಐತಿಹಾಸಿಕ ನಿರ್ಧಾರ ಮಾಡಿ ನಾವು ಏಕರೂಪತೆ ತಂದಿದ್ದೇವೆ. ಸರ್ಕಾರವೇ ಈ ಟಿಡಿಆರ್ ವಿನಿಮಯ ಮಾಡಿಕೊಳ್ಳಲು ನಾವು ಆಲೋಚಿಸುತ್ತಿದ್ದೇವೆ” ಎಂದು ತಿಳಿಸಿದರು.

ಎಲ್ಲದಕ್ಕೂ ಕೋರ್ಟ್ ನಿಂದ ತಡೆಯಾಜ್ಞೆ:

“ಅಶ್ವತ್ಥ್ ನಾರಾಯಣ ಅವರು ಹೇಳಿರುವಂತೆ ಇನ್ನು ಮುಂದೆ ಬಿಡಿಎ ಮೂಲಕ ವರ್ಟಿಕಲ್ ಅಭಿವೃದ್ಧಿಯತ್ತ ಗಮನಹರಿಸಲಾಗುವುದು. ಎಫ್ಎಆರ್ ಕಡಿಮೆ ಮಾಡಲು ಪ್ರೀಮಿಯಂ ಎಫ್ಎಆರ್ ತೆಗೆದುಕೊಳ್ಳಲು ಹೇಳುತ್ತಿದ್ದಾರೆ. ಇದಕ್ಕೆ ನಾನು ಒಂದು ದರ ನಿಗದಿ ಮಾಡಿ ನಿಮ್ಮನ್ನು ಒಪ್ಪಿಸಿದೆ. ನಂತರ ನಿಮ್ಮವರೇ ರಾಜ್ಯಪಾಲರ ಬಳಿ ನನ್ನ ವಿರುದ್ಧ ತಕರಾರು ಹಾಕಿದರು. ನಾನು ಲಂಚ ಹೊಡೆಯುತ್ತಿದ್ದೇನೆ ಎಂದು ಆರೋಪಿಸಿರುವ ಕಾರಣ ಅದನ್ನು ಪಕ್ಕಕ್ಕಿಟ್ಟು 2020ರಲ್ಲಿ ತೀರ್ಮಾನ ಮಾಡಲಾಗಿದ್ದನ್ನೇ ಜಾರಿ ಮಾಡಿದ್ದೇನೆ. ಟಿಡಿಆರ್ ನಲ್ಲಿ ಸಣ್ಣ ಲಾಭಿ ಇದೆ. ಬೋಗಸ್ ಟಿಡಿಎಸ್ ಬರೆಸಿಕೊಂಡಿರುವವರು ಸುಪ್ರೀಂ ಕೋರ್ಟ್ ವರೆಗೂ ಹೋಗಿದ್ದಾರೆ. ಶಿವರಾಮ್ ಕಾರಂತ ಬಡಾವಣೆ ಸಂಪೂರ್ಣ ಸಿದ್ಧವಾಗಿದ್ದರೂ ನಾನು ನಿವೇಶನ ಖರೀದಿದಾರರಿಂದ ಅರ್ಜಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಈಗ ರೈತರಿಗೆ ನಿವೇಶನ ನೀಡಲು ಅವಕಾಶ ಕಲ್ಪಿಸಿದ್ದು, ಅದನ್ನು ಮಾಡುತ್ತಿದ್ದೇವೆ. ನಾವು 10 ಸಾವಿರ ಕೋಟಿ ಖರ್ಚು ಮಾಡಿ ಸರ್ಕಾರಕ್ಕೆ ಅರ್ಜಿ ಸ್ವೀಕರಿಸಲು ಆಗುತ್ತಿಲ್ಲ ಎಂದರೆ ನಮ್ಮಲ್ಲಿ ಎಷ್ಟು ಅಡೆತಡೆಗಳಿವೆ ಎಂದು ಅರ್ಥವಾಗುತ್ತದೆ” ಎಂದು ವಿವರಿಸಿದರು.

ಆಸ್ತಿ ದಾಖಲೆ ಡಿಜಿಟಲಿಕರಣ, ಇಖಾತಾ ಸೌಲಭ್ಯ

“ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಭೂಮಿ ಯೋಜನೆ ತಂದು ಪಹಣಿಗಳನ್ನು ಸರಿಪಡಿಸುವ ಯೋಜನೆ ಮಾಡಿದೆವು. ನಗರ ಪ್ರದೇಶದಲ್ಲಿ ಇದನ್ನು ಮಾಡಲು ಆಗಿರಲಿಲ್ಲ. ನಾನು ಅಧಿಕಾರ ವಹಿಸಿಕೊಂಡ ಬಳಿಕ ನೋಡಿದಾಗ ಬಿಡಿಎ ಹಾಗೂ ಪಾಲಿಕೆಗಳಲ್ಲಿ ದಾಖಲೆ ತಿದ್ದುವುದೇ ಕೆಲಸವಾಗಿದೆ. ಇದರಲ್ಲಿ ರಾಜಕೀಯದವರು, ಅಧಿಕಾರಿಗಳು ಸೇರಿಕೊಂಡಿದ್ದಾರೆ. ಹೀಗಾಗಿ ಆಸ್ತಿ ದಾಖಲೆ ಡಿಜಿಟಲ್ ಗೊಳಿಸಲು ಕೋಟ್ಯಂತರ ಪುಟಗಳ ದಾಖಲೆಯನ್ನು ಸ್ಕ್ಯಾನ್ ಮಾಡಿಸಲಾಗಿದೆ. ಇದಕ್ಕಾಗಿ ಇ ಖಾತೆ ತಂದಿದ್ದೇವೆ. ತೆರಿಗೆ ಸೋರಿಕೆ ತಡೆಗಟ್ಟಲು, ವಂಚನೆ ತಪ್ಪಿಸಲು ನಾವು ಆಸ್ತಿ ದಾಖಲೆಗಳಿಗೆ ಆಧಾರ್ ಕಾರ್ಡ್ ಜೋಡಿಸುತ್ತಿದ್ದೇವೆ. ಈ ವಿಚಾರವಾಗಿ ವಿರೋಧ ಪಕ್ಷದವರು ನಮ್ಮನ್ನು ಟೀಕೆ ಮಾಡುತ್ತಿದ್ದಾರೆ. ಮಾಡಲಿ, ಟೀಕೆ ಮಾಡುವುದು ತಪ್ಪಲ್ಲ. ನಾವು ಕೈಗೊಂಡಿರುವ ಕ್ರಮ ನೋಡಿ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ” ಎಂದು ತಿಳಿಸಿದ್ದಾರೆ.

ಲಂಚ ಪಡೆದ ಅಧಿಕಾರ ವಜಾಗೊಳಿಸಲಾಗಿದೆ:

“25 ಲಕ್ಷ ಆಸ್ತಿಗಳು ಬೆಂಗಳೂರು ನಗರದಲ್ಲಿವೆ. ಅದರಲ್ಲಿ 9 ಲಕ್ಷ ಎ ಖಾತಾಗಳನ್ನು ನೀಡಿದ್ದೇವೆ. ಡ್ರೋನ್ ಸರ್ವೆ ಬಗ್ಗೆ ವಿರೋಧ ಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದವರ ಸಲಹೆಗಳನ್ನು ಸ್ವೀಕರಿಸಿ, ಡ್ರೋನ್ ಸರ್ವೆಯಲ್ಲಿ ತಪ್ಪಿದ್ದರೆ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಲು ಅವಕಾಶ ಕಲ್ಪಿಸುತ್ತೇವೆ. ನಾವು ಆಸ್ತಿ ದಾಖಲೆಗಳನ್ನು ಹಾಗೂ ಆ ಜಾಗವನ್ನು ಮಾತ್ರ ಸರಿಪಡಿಸುತ್ತಿದ್ದು, ಅದರಲ್ಲಿ ಕಟ್ಟಿರುವ ಕಟ್ಟಡವನ್ನು ರೆಗ್ಯುಲರೈಸ್ ಮಾಡುತ್ತಿಲ್ಲ. ಇನ್ನು ಈ ಹಿಂದೆ ಮಾಡಿದ ಬಡಾವಣೆಗಳಲ್ಲಿ ರಸ್ತೆ ಜಾಗದ ಪಹಣಿಯಲ್ಲಿ ಹಳೇ ಮಾಲೀಕರ ಹೆಸರು ಇದ್ದವು. ಇದಕ್ಕೆ ಕಾನೂನು ತಂದು ನಗರದ ಎಲ್ಲಾ ರಸ್ತೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ತರಲಾಗಿದೆ. 1.20 ಲಕ್ಷ ಅರ್ಜಿಗಳು ಬಿಯಿಂದ ಎ ಖಾತಾ ಪರಿವರ್ತನೆಗೆ ಅರ್ಜಿ ಬಂದಿದ್ದು, 60 ಸಾವಿರ ಅರ್ಜಿಗಳು ವಿಲೇವಾರಿಯಾಗಿವೆ. 45 ಸಾವಿರ ವಜಾಗೊಂಡಿದ್ದು, 15 ಸಾವಿರ ಅರ್ಜಿಗಳು ವಿಲೇವಾರಿ ಪ್ರಕ್ರಿಯೆಯಲ್ಲಿವೆ. ಇನ್ನು ವಿರೋಧ ಪಕ್ಷದ ನಾಯಕ ಅಶೋಕ್ ಅವರು ಹೇಳಿದಂತೆ ಕೆಲವು ಅಧಿಕಾರಿಗಳು ಲಂಚ ಪಡೆಯುತ್ತಿರಬಹುದು. ಈ ಬಗ್ಗೆ ಅವರು ಗಮನ ಸೆಳೆದ ತಕ್ಷಣವೇ ನಮ್ಮ ಅಧಿಕಾರಿಗಳು ಪರಿಶೀಲಿಸಲಾಗಿದ್ದು, ಲಂಚ ಪಡೆದ ಅಧಿಕಾರಿಗಳನ್ನು ಈಗಾಗಲೇ ವಜಾಗೊಳಿಸಲಾಗಿದೆ.” ಎಂದರು.

ನಂಬಿಕೆ ನಕ್ಷೆ, ಒಟಿಎಸ್ ಮೂಲಕ ಲಕ್ಷಾಂತರ ನಾಗರಿಕರಿಗೆ ಪ್ರಯೋಜನ

“ಇನ್ನು ಕಟ್ಟಡ ನಕ್ಷೆ ಅನುಮೋದನೆ ವಿಚಾರದಲ್ಲೂ ಸಾರ್ವಜನಿಕರಿಗೆ ಸಾಕಷ್ಟು ಕಿರುಕುಳ ನೀಡಲಾಗುತ್ತಿತ್ತು. ಹೀಗಾಗಿ 50X80 ವಿಸ್ತೀರ್ಣದ ನಿವೇಷನದಲ್ಲಿ ನಿರ್ಮಿಸಲಾಗುವ ಕಟ್ಟಡ ನಕ್ಷೆಗಳನ್ನು ನಂಬಿಕೆ ನಕ್ಷೆ ಯೋಜನೆ ಮೂಲಕ ಅಧಿಕೃತ ವಾಸ್ತುಶಿಲ್ಪಿ ಹಾಗೂ ಇಂಜಿನಿಯರ್ ಗಳಿಂದ ಅನುಮತಿ ನೀಡುವ ವ್ಯವಸ್ಥೆ ತರಲಾಗಿದೆ. ಇದರಿಂದ ಜನರಿಗೆ ವೇಗವಾಗಿ ನಕ್ಷೆ ಅನುಮೋದನೆ ದೊರೆಯುತ್ತಿದೆ. ಇನ್ನು ತೆರಿಗೆ ಬಾಕಿ ಉಳಿಸಿಕೊಂಡಿದ್ದವರಿಗೆ ಒಟಿಎಸ್ ಜಾರಿ ಮಾಡಿ ಅವಕಾಶ ನೀಡಿ ಅವರಿಗೆ ಬಡ್ಡಿ ಮನ್ನಾ ಮಾಡಲಾಗಿದೆ. ಇದರಿಂದ ಬೆಂಗಳೂರಿನಲ್ಲಿ 2.60 ಲಕ್ಷ ಆಸ್ತಿ ಮಾಲೀಕರಿಗೆ ಇದರಿಂದ ಪ್ರಯೋಜನವಾಗಿದೆ. ಟಿಡಿಆರ್ ವಿಚಾರದಲ್ಲೂ ಐತಿಹಾಸಿಕ ನಿರ್ಧಾರ ಮಾಡಿ ನಾವು ಏಕರೂಪತೆ ತಂದಿದ್ದೇವೆ. ಸರ್ಕಾರವೇ ಈ ಟಿಡಿಆರ್ ವಿನಿಮಯ ಮಾಡಿಕೊಳ್ಳಲು ನಾವು ಆಲೋಚಿಸುತ್ತಿದ್ದೇವೆ” ಎಂದು ತಿಳಿಸಿದರು.

ಎಲ್ಲದಕ್ಕೂ ಕೋರ್ಟ್ ನಿಂದ ತಡೆಯಾಜ್ಞೆ:

“ಅಶ್ವತ್ಥ್ ನಾರಾಯಣ ಅವರು ಹೇಳಿರುವಂತೆ ಇನ್ನು ಮುಂದೆ ಬಿಡಿಎ ಮೂಲಕ ವರ್ಟಿಕಲ್ ಅಭಿವೃದ್ಧಿಯತ್ತ ಗಮನಹರಿಸಲಾಗುವುದು. ಎಫ್ಎಆರ್ ಕಡಿಮೆ ಮಾಡಲು ಪ್ರೀಮಿಯಂ ಎಫ್ಎಆರ್ ತೆಗೆದುಕೊಳ್ಳಲು ಹೇಳುತ್ತಿದ್ದಾರೆ. ಇದಕ್ಕೆ ನಾನು ಒಂದು ದರ ನಿಗದಿ ಮಾಡಿ ನಿಮ್ಮನ್ನು ಒಪ್ಪಿಸಿದೆ. ನಂತರ ನಿಮ್ಮವರೇ ರಾಜ್ಯಪಾಲರ ಬಳಿ ನನ್ನ ವಿರುದ್ಧ ತಕರಾರು ಹಾಕಿದರು. ನಾನು ಲಂಚ ಹೊಡೆಯುತ್ತಿದ್ದೇನೆ ಎಂದು ಆರೋಪಿಸಿರುವ ಕಾರಣ ಅದನ್ನು ಪಕ್ಕಕ್ಕಿಟ್ಟು 2020ರಲ್ಲಿ ತೀರ್ಮಾನ ಮಾಡಲಾಗಿದ್ದನ್ನೇ ಜಾರಿ ಮಾಡಿದ್ದೇನೆ. ಟಿಡಿಆರ್ ನಲ್ಲಿ ಸಣ್ಣ ಲಾಭಿ ಇದೆ. ಬೋಗಸ್ ಟಿಡಿಎಸ್ ಬರೆಸಿಕೊಂಡಿರುವವರು ಸುಪ್ರೀಂ ಕೋರ್ಟ್ ವರೆಗೂ ಹೋಗಿದ್ದಾರೆ. ಶಿವರಾಮ್ ಕಾರಂತ ಬಡಾವಣೆ ಸಂಪೂರ್ಣ ಸಿದ್ಧವಾಗಿದ್ದರೂ ನಾನು ನಿವೇಶನ ಖರೀದಿದಾರರಿಂದ ಅರ್ಜಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಈಗ ರೈತರಿಗೆ ನಿವೇಶನ ನೀಡಲು ಅವಕಾಶ ಕಲ್ಪಿಸಿದ್ದು, ಅದನ್ನು ಮಾಡುತ್ತಿದ್ದೇವೆ. ನಾವು 10 ಸಾವಿರ ಕೋಟಿ ಖರ್ಚು ಮಾಡಿ ಸರ್ಕಾರಕ್ಕೆ ಅರ್ಜಿ ಸ್ವೀಕರಿಸಲು ಆಗುತ್ತಿಲ್ಲ ಎಂದರೆ ನಮ್ಮಲ್ಲಿ ಎಷ್ಟು ಅಡೆತಡೆಗಳಿವೆ ಎಂದು ಅರ್ಥವಾಗುತ್ತದೆ” ಎಂದು ವಿವರಿಸಿದರು.

ಬೆಂಗಳೂರಿನ ಮೇಲೆ ಒತ್ತಡ ಇಳಿಸಲು ಬಿಡದಿ ಟೌನ್ ಶಿಪ್:

“ಈ ಮಧ್ಯೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಬೆಂಗಳೂರು ಬೆಳವಣಿಗೆ ಉತ್ತಂಗು ತಲುಪಿದ್ದು, ಈಗ ಬೆಂಗಳೂರಿನ ಹೊರವಲಯದಲ್ಲಿ ಪರ್ಯಾಯ ನಗರ ನಿರ್ಮಿಸಿ ಎಂದು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಈ ಹಿಂದೆ ಕುಮಾರಸ್ವಾಮಿ ಅವರು ನಂದಗುಡಿ, ಸೋಲೂರು, ಬಿಡದಿಯಲ್ಲಿ ಟೌನ್ ಶಿಪ್ ಮಾಡಲು ಹೇಗಿ, ನಂತರ ಬಿಟ್ಟುಬಿಟ್ಟರು. ಈಗ ನಾವು ಅದನ್ನು ಮಾಡಲು ಮುಂದಾಗಿದ್ದೇವೆ. ಇದರ ವಿರುದ್ಧ ನಿಮ್ಮನ್ನು ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡಿಸುತ್ತಿದ್ದಾರೆ. ಈ ಸ್ವಾಧೀನಪಡಿಸಿಕೊಂಡಿರುವ ಜಮೀನನ್ನು ಡಿನೋಟಿಫಿಕೇಶನ್ ಮಾಡಲು ಹೇಗೆ ಸಾಧ್ಯ. ಡಿನೋಟಿಫಿಕೇಶನ್ ಮಾಡಿದರೆ ನಮ್ಮ ಪರಿಸ್ಥಿತಿ ಏನಾಗುತ್ತದೆ ನಿಮಗೆ ಗೊತ್ತಿದೆ. ಬಿಡದಿಯಲ್ಲಿ ನೀರಿನ ಸೌಲಭ್ಯ ಇರುವುದರಿಂದ ಅಲ್ಲೇ ಟೌನ್ ಶಿಪ್ ಮಾಡಬೇಕಾಗಿದೆ. ಅಲ್ಲಿ ನೋಟಿಫಿಕೇಶನ್ ಆಗಿರುವ 8 ಸಾವಿರ ಎಕರೆಯಲ್ಲಿ ಎಐ ಸಿಟಿ ನಿರ್ಮಿಸುವ ವಿಚಾರವಾಗಿ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಇನ್ನು ಎರಡನೇ ವಿಮಾನ ನಿಲ್ದಾಣವನ್ನು ದಕ್ಷಿಣ ಭಾಗದಲ್ಲೇ ಮಾಡಬೇಕು. ಬೇರೆ ವಿಧಿ ಇಲ್ಲ” ಎಂದರು.

“ಕಸದ ವಿಚಾರದಲ್ಲಿನ ಮಾಫಿಯಾವನ್ನು ವಿರೋಧ ಪಕ್ಷದವರು ಹೇಗೆ ನಿಭಾಯಿಸಿದರೋ ಗೊತ್ತಿಲ್ಲ. ಅವರು 89 ಪ್ಯಾಕೇಜ್ ಮಾಡಿದರೂ ಕೋರ್ಟ್ ಗೆ ಹೋಗಿ ಗಲಾಟೆ ಮಾಡುತ್ತಾರೆ. ಜಾಹಿರಾತು ಪ್ರಕಟಿಸುವುದರಿಂದ ಎಲ್ಲದಕ್ಕೂ ಕೋರ್ಟ್ ಗೆ ಹೋಗುತ್ತಾರೆ. ಈಗ ನಾವು 33 ಪ್ಯಾಕೇಜ್ ಮಾಡಿ ಅಂತಿಮ ಹಂತಕ್ಕೆ ತಂದಿದ್ದೇವೆ. ನಾಲ್ಕು ಕಡೆ ಕಸ ವಿಲೇವಾರಿ ಮಾಡಲು ಮುಂದಾಗಿದ್ದೆ. ಜಾಗದ ತೊಂದರೆಯಿಂದ ಕೊನೆಗೆ ಎರಡು ಕಡೆ ಅಂತಿಮಗೊಳಿಸಿದ್ದು, ನೈಸ್ ಜಾಗ ಹಾಗೂ ದೊಡ್ಡಬಳ್ಳಾಪುರದಲ್ಲಿ ಈ ಹಿಂದೆ ಇದ್ದ ಜಾಗದಲ್ಲೇ ಮಾಡುತ್ತಿದ್ದೇವೆ. ಈ ಮಧ್ಯೆ ನಮ್ಮ ಕ್ಷೇತ್ರಗಳ ಮಧ್ಯೆ ಕಸದ ವಾಹನ ಸಾಗುತ್ತಿದೆ. ಇದಕ್ಕಾಗಿ ರಸ್ತೆ ಕೊಡಿ ಎಂದು ಕೆಲವು ಶಾಸಕರು 300 ಕೋಟಿ ಅಭಿವೃದ್ಧಿಗೆ ವಸೂಲಿ ಮಾಡಿದರು” ಎಂದು ತಿಳಿಸಿದರು.

ಹೊಸ ರಸ್ತೆ ನಿರ್ಮಾಣಕ್ಕಾಗಿ ಬಫರ್ ರಸ್ತೆ, ಎಲಿವೇಟೆಡ್ ಕಾರಿಡಾರ್, ಡಬಲ್ ಡೆಕ್ಕರ್:

“ನಾವು ಎಲಿವೇಟೆಡ್ ಕಾರಿಡಾರ್ ಮಾಡಲು ತೀರ್ಮಾನಿಸಿದ್ದೇವೆ. 109 ಕಿ.ಮೀ ಎಲಿವೇಟೆಡ್ ಕಾರಿಡಾರ್ ಗೆ ಮುಂದಾಗಿದ್ದು, ಶೀಘ್ರವೇ ಆರಂಭವಾಗಲಿದೆ. ಇನ್ನು ಬೆಂಗಳೂರಿನಲ್ಲಿ ಹೊಸ ರಸ್ತೆ ಸೃಷ್ಟಿಸಬೇಕು. ಹೇಗೆ ಸಾಧ್ಯ? ರಾಜಕಾಲುವೆ ಪಕ್ಕದ ಜಾಗದಲ್ಲಿ 300 ಕಿ.ಮೀ ರಸ್ತೆ ನಿರ್ಮಿಸಲು ತೀರ್ಮಾನಿಸಿದ್ದೇವೆ. ಈ ವಿಚಾರದಲ್ಲಿ ನಾವು ರಕ್ಷಣಾ ಇಲಾಖೆಯಿಂದ ಸೇನೆಯವರು ಸ್ವಲ್ಪ ಜಾಗ ಬಿಟ್ಟುಕೊಟ್ಟಿದ್ದಾರೆ. ಇದಕ್ಕಾಗಿ 3 ಸಾವಿರ ಕೋಟಿ ಯೋಜನೆ ರೂಪಿಸಿದ್ದು, 300 ಕೋಟಿ ನೀಡಿದ್ದೇವೆ. ಜಯನಗರದಲ್ಲಿ ನಿರ್ಮಿಸಿರುವ ಡಬಲ್ ಡೆಕ್ಕರ್ ರಸ್ತೆಯನ್ನು ಪ್ರಧಾನಮಂತ್ರಿಗಳಿಗೂ ತೋರಿಸಿದೆ. ನಾವು ಈ ಹಿಂದೆಯೇ ಬೆಂಗಳೂ ತುಂಬಾ ಇದೇ ಮಾದರಿ ಅನುಸರಿಸಬೇಕಾಗಿತ್ತು. ಪ್ರಧಾನಮಂತ್ರಿಗಳು ಈ ಮಾದರಿಯನ್ನು ಒಪ್ಪಿದರು. ಈಗ ನಾವು 40 ಕಿ.ಮೀ ಉದ್ದದ ಡಬಲ್ ಡೆಕ್ಕರ್ ನಿರ್ಮಿಸಲು ಮುಂದಾಗಿದ್ದು, ತಾಂತ್ರಿಕ ವರದಿಗಾಗಿ ಕಾಯಲಾಗುತ್ತಿದೆ. ಇದನ್ನು ಬಿಎಂಆರ್ ಸಿಎಲ್ ಹಾಗೂ ಪಾಲಿಕೆಯವರು ವೆಚ್ಚವನ್ನು 50-50 ಭರಿಸಲಿದ್ದಾರೆ. ಬೆಂಗಳೂರು ನಗರವನ್ನು ವಿಶ್ವದರ್ಜೆಗೆ ಏರಿಸಲು ಯೋಜನೆ ರೂಪಿಸಲಾಗುತ್ತಿದೆ. ಇದಕ್ಕಾಗಿ ಒಂದೂವರೆ ಲಕ್ಷ ಕೋಟಿಯಷ್ಟು ಮೊತ್ತದ ಯೋಜನೆಗಳಿಗೆ ಮುಂದಾಗಿದ್ದೇವೆ. ಮುಂದಿನ ಕೆಲ ವರ್ಷಗಳಲ್ಲಿ 350 ಕಿ.ಮೀ ಮೆಟ್ರೋ ಮಾರ್ಗ ವಿಸ್ತರಣೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಕಾವೇರಿ 6ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಸಂಪುಟದಲ್ಲಿ ಅನುಮೋದನೆ:

“ಇನ್ನು ನೀರಿನ ವಿಚಾರ ಬೆಂಗಳೂರಿನ ಸಮಸ್ಯೆಗಳಲ್ಲಿ ಒಂದು. ದೇಶದ ಬೇರೆ ನಗರಗಳು ಸಮುದ್ರದ ಪಕ್ಕ ಅಥವಾ ಸಮುದ್ರದ ಪಕ್ಕದಲ್ಲಿವೆ. ನಮ್ಮ ಬೆಂಗಳೂರಿಗೆ ಕಾವೇರಿ ಹೊರತಾಗಿ ಬೇರೆ ನೀರಿನ ಮೂಲವಿಲ್ಲ. ಬೆಂಗಳೂರಿನ ಕುಡಿಯುವ ನೀರಿನ 5ನೇ ಹಂತದ ಯೋಜನೆ ಅರ್ಧಕ್ಕೆ ನಿಂತಿತ್ತು. ನಂತರ ಎದುರಾಗಿದ್ದ ಅಡೆತಡೆಗಳನ್ನು ನಿವಾರಿಸಿ ಯೋಜನೆ ಪೂರ್ಣಗೊಳಿಸಿದೆವು. ಎತ್ತಿನಹೊಳೆ ಯೋಜನೆಗೂ ಅರಣ್ಯ ಪ್ರದೇಶದಿಂದ ಸಮಸ್ಯೆ ಎದುರಾಗಿತ್ತು, ಈಗ ಅನುಮತಿ ನೀಡಿದ್ದಾರೆ. ಆ ಯೋಜನೆ ಮುಂದುವರಿಯಲಿದೆ. ಬೆಂಗಳೂರು ನಗರಕ್ಕೆ 2250 ಎಂಎಲ್ ಡಿ ಸಾಮರ್ಥ್ಯದ ನೀರಿನ ಸಂಪರ್ಕ ನೀಡಲಾಗಿತ್ತು, ನಾವು 1850 ಎಂಎಲ್ಡಿ ನೀರು ಸಂಪರ್ಕ ಸೇರಿಸಿದ್ದು, ಇನ್ನು 400 ಎಂಎಲ್ ಡಿ ಸಾಮರ್ಥ್ಯದ ನೀರು ಬಾಕಿ ಇದೆ. ಜನರಿಗೆ ಕಂತಿನ ಮೂಲಕ ಪಾವತಿಗೆ ಅವಕಾಶ ನೀಡಿ ನೀರಿನ ಸಂಪರ್ಕ ಪಡೆಯಲು ಹೇಳಿದ್ದೇವೆ. ಇನ್ನು ಕಾವೇರಿ ಆರನೇ ಹಂತದ ಕುಡಿಯುವ ನೀರಿನ ಯೋಜನೆಗೆ 6 ಸಾವಿರ ಕೋಟಿ ಮೊತ್ತದ ಡಿಪಿಆರ್ ಸಿದ್ಧಪಡಿಸಿ, ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದಕ್ಕೆ ಜೈಕಾ ಸಂಸ್ಥೆ ಹಣಕಾಸು ನೆರವು ನೀಡಲು ಮುಂದಾಗಿದೆ. ನಗರದಲ್ಲಿ 15 ಸಾವಿರ ಕೊಳವೆ ಬಾವಿಗಳಿದ್ದು, ಕಳೆದ 2 ವರ್ಷ ಸುಮಾರು ಏಳೂವರೆ ಸಾವಿರ ಕೊಳವೆ ಬಾವಿ ಬತ್ತಿದವು. ಟ್ಯಾಂಕರ್ ಮಾಫಿಯಾ ನಿಯಂತ್ರಿಸಿ ಒಂದು ಹಂತಕ್ಕೆ ನಿಯಂತ್ರಿಸಿದ್ದೇವೆ. ಇನ್ನು ಬೆಂಗಳೂರಿನಲ್ಲಿ 15 ವರ್ಷಗಳಿಂದ ನೀರಿನ ದರ ಪರಿಷ್ಕರಣೆ ಮಾಡಿರಲಿಲ್ಲ. ನಾವು ಅದನ್ನು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಬಿಡಬ್ಲ್ಯೂಎಸ್ಎಸ್ ಬಿ ನಷ್ಟ ಎದುರಿಸುವುದಿಲ್ಲ. ಇನ್ನು ನಗರದಲ್ಲಿ ಸರಳ ಕಾವೇರಿ, ಸಂಚಾರಿ ಕಾವೇರಿ ಮೂಲಕ ನೀರನ್ನು ನೀಡುತ್ತಿದ್ದೇವೆ” ಎಂದು ತಿಳಿಸಿದರು.

2 ವರ್ಷದಲ್ಲಿ ಮೇಕೆದಾಟುವಿಗೆ ಶಂಕುಸ್ಥಾಪನೆ ಮಾಡುವ ಆತ್ಮವಿಶ್ವಾಸವಿದೆ, ಸಹಕರಿಸಿ:

“ಇನ್ನು ಮೇಕೆದಾಟು ಸಮತೇಲಿನ ಅಣೆಕಟ್ಟು ನಿರ್ಮಾಣದ ವಿಚಾರವಾಗಿ ಸುಪ್ರೀಂ ಕೋರ್ಟ್ ರಾಜ್ಯದ ಪರವಾಗಿ ಐತಿಹಾಸಿಕ ತೀರ್ಪು ನೀಡಿದ್ದು, ಆ ಪೀಠಕ್ಕೆ ಈ ಸದನದ ಮೂಲಕ ದೊಡ್ಡ ಧನ್ಯವಾದ ಅರ್ಪಿಸುತ್ತೇನೆ. ಅವರ ಜಾಗದಲ್ಲಿ ಅವರ ಯೋಜನೆ ಮಾಡಿಕೊಳ್ಳಲು ನಿಮ್ಮ ತಕರಾರು ಏಕೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದನ್ನು ಬಳಸಿಕೊಂಡು ನಾವು ನ್ಯಾಯಾಲಯದ ಮುಂದೆ ವಾದ ಮಂಡಿಸಿದೆವು. ಪರಿಣಾಮ ಕೋರ್ಟ್ ತಮಿಳುನಾಡಿನ ಅರ್ಜಿ ವಜಾಗೊಳಿಸಿತು. ಈ ಯೋಜನೆ ವಿಚಾರವಾಗಿ ನಾವುಂಟು ಹಾಗೂ ಕೇಂದ್ರ ಜಲ ಆಯೋಗವುಂಟು. ನಾವು ಪರಿಷ್ಕೃತ ಡಿಪಿಆರ್ ತಯಾರಿಸುತ್ತಿದ್ದು, ಮೇಕೆದಾಟು ಯೋಜನೆ ಆಗುತ್ತಿದ್ದಂತೆ ಬೆಂಗಳೂರಿಗೆ ಮುಂದಿನ 25-30 ವರ್ಷ ಯಾವುದೇ ರೀತಿಯ ನೀರಿನ ಸಮಸ್ಯೆ ಎದುರಾಗುವುದಿಲ್ಲ.

“ಈ ಯೋಜನೆ ಅತ್ಯಂತ ಕಡಿಮೆ ವೆಚ್ಚದ ಯೋಜನೆಯಾಗಿದೆ. ಸುಮಾರು 600 ಎಕರೆ ಭೂಸ್ವಾಧೀನಪಡಿಸಿಕೊಳ್ಳಬೇಕಿದ್ದು, ಉಳಿದಂತೆ ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಭೂಮಿ ನೀಡಲಾಗುವುದು. ಈ ಯೋಜನೆಯಲ್ಲಿ 400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು. ಈ ಯೋಜನೆಗೆ ನಮ್ಮ ಕ್ಷೇತ್ರದಲ್ಲಿ ನನ್ನ ಜಮೀನು ಮುಳುಗಡೆಯಾಗುತ್ತದೆ. ಏನು ಮಾಡಲು ಆಗುವುದಿಲ್ಲ. ಮುಂದಿನ 2 ವರ್ಷಗಳಲ್ಲಿ ಮೇಕೆದಾಟು ಯೋಜನೆಗೆ ಭೂಮಿ ಪೂಜೆ ಮಾಡುತ್ತೇನೆ ಎಂಬ ಆತ್ಮವಿಶ್ವಾಸ ಇದೆ. ಇದಕ್ಕೆ ವಿರೋಧ ಪಕ್ಷಗಳು ಸಹಕರಿಸಬೇಕು” ಎಂದು ಹೇಳಿದರು.

“ಈ ರೀತಿ ನಾವು ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುತ್ತಿದ್ದೇವೆ. ಅಧ್ಯಕ್ಷರೇ, ವಿಧಾನಸೌಧ ಕಟ್ಟುವಾಗ ಖೈದಿಗಳನ್ನು ಇದರ ನಿರ್ಮಾಣಕ್ಕೆ ಬಳಸಲಾಗಿತ್ತು. ಇದರ ನಿರ್ಮಾಣಕ್ಕೆ ಕಲ್ಲು ಹೊರಿಸಲಾಗುತ್ತಿದೆ ಎಂದು ಕೆಲವರು ಕೆಂಗಲ್ ಹನುಮಂತಯ್ಯ ಅವರಿಗೆ ಚಪ್ಪಲಿ ಎಸೆದಿದ್ದರು. ಇದು ದಾಖಲೆಗಳಲ್ಲಿ ಇವೆ. ಈ ರೀತಿ ಆಗುತ್ತದೆ. ರಾಜಕಾರಣದಲ್ಲಿ ಕೆಲವರು ಮೊಟ್ಟೆಯನ್ನು ಹೊಡೆಯುತ್ತಾರೆ, ಹೂವಿನ ಹಾರವನ್ನು ಹಾಕುತ್ತಾರೆ” ಎಂದರು.

ತುಕ್ಕು ಹಿಡಿದ ಆಲೋಚನೆ ಸರಿಪಡಿಸಲು ಆಗುವುದಿಲ್ಲ

“ಮೆಟ್ರೋ ಯೋಜನೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಪಾಲಿನ ವಿಚಾರದಲ್ಲಿ ಮುಖ್ಯಮಂತ್ರಿಗಳು ಹೇಳಿರುವುದು, ನಾನು ಪ್ರಶ್ನೆಯೋಂದಕ್ಕೆ ನೀಡಿರುವ ಉತ್ತರ ಸರಿಯಾಗಿದೆ. ನಮಗೆ ಭೂಸ್ವಾಧೀನ ಪ್ರಕ್ರಿಯೆ ಹೊರೆ, ಸಾಲದ ಹೊರೆ ಬಿಎಂಆರ್ ಸಿಎಲ್ ಹಾಗೂ ರಾಜ್ಯ ಸರ್ಕಾರದ್ದಾಗಿದೆ. ಕೇಂದ್ರ ಸರ್ಕಾರ ಇದುವರೆಗೂ ಮೆಟ್ರೋ ಯೋಜನೆಗಳಿಗ ಕೊಟ್ಟಿರುವುದು ಕೇವಲ 11 ಸಾವಿರ ಕೋಟಿ. ಇದುವರೆಗೂ ಮೆಟ್ರೋ ಯೋಜನೆಗೆ ಖರ್ಚಾಗಿರುವುದು 67 ಸಾವಿರ ಕೋಟಿ. 56 ಸಾವಿರ ಕೋಟಿ ಹಣ ರಾಜ್ಯ ಸರ್ಕಾರ, ಬೆಂಗಳೂರಿನ ನಾಗರೀಕರ ಹಣವಾಗಿದೆ. 50-50 ರಷ್ಟು ವೆಚ್ಚ ಭರಿಸುವ ಬಗ್ಗೆ ಒಪ್ಪಂದವಾಗಿದ್ದರೂ ನಮಗೆ ಅಷ್ಟು ಹಣ ಬರುತ್ತಿಲ್ಲ. ತುಕ್ಕು ಹಿಡಿದ ಕಬ್ಬಿಣ ಸರಿಪಡಿಸಬಹುದು, ತುಕ್ಕು ಹಿಡಿದ ಆಲೋಚನೆ ಸರಿಪಡಿಸಲು ಆಗುವುದಿಲ್ಲ” ಎಂದು ತಿಳಿಸಿದರು.

ಜಕ್ಕೂರು ತರಬೇತಿ ಕೇಂದ್ರ ಸ್ಥಳಾಂತರ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ:

“ಜಕ್ಕೂರು ವಿಮಾನ ಹಾರಾಟ ತರಬೇತಿ ಕೇಂದ್ರದಲ್ಲಿ ಕ್ಲಬ್ ನಿರ್ಮಾಣ ಮಾಡುವ ಪ್ರಸ್ತಾವನೆ ನಮ್ಮ ಸರ್ಕಾರದ ಮುಂದೆ ಬಂದಿದ್ದು ನಿಜ. ಆದರೆ ಮುಖ್ಯಮಂತ್ರಿಗಳು ಈಗ ಈ ಬಗ್ಗೆ ತೀರ್ಮಾನ ಮಾಡುವುದು ಬೇಡ ಎಂದರು. ಇಲ್ಲಿ ಭಾರತ ಮಂಟಪ, ಯಶೋಭೂಮಿ ಮಾದರಿಯಲ್ಲಿ ನಿರ್ಮಾಣ ಮಾಡಲು ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರು ಸೇರಿದಂತೆ ಅನೇಕರು ಸಲಹೆ ನೀಡಿದರು. ಇದಕ್ಕೆ ಅನುದಾನ ನೀಡುವುದಾಗಿಯೂ ಹೇಳಿದರು. ಈಗ ಸಧ್ಯಕ್ಕೆ ಜಕ್ಕೂರು ವಿಮಾನ ಹಾರಾಟ ತರಬೇತಿ ಕೇಂದ್ರವನ್ನು ಸ್ಥಳಾಂತರ ಮಾಡಲು ಮುಂದಾಗಿಲ್ಲ” ಎಂದು ಸ್ಪಷ್ಟಪಡಿಸಿದರು.

ಓಸಿ, ಸಿಸಿ ವಿಚಾರವಾಗಿ ಸಂಪುಟ ಸಭೆಯಲ್ಲಿ ತೀರ್ಮಾನ

“ಇನ್ನು ಒಸಿ ಹಾಗೂ ಸಿಸಿ ವಿಚಾರವಾಗಿ ವಿರೋಧ ಪಕ್ಷದ ಸದಸ್ಯರು ಪ್ರಸ್ತಾಪ ಮಾಡಿದ್ದಾರೆ. ಇದು ಬೆಂಗಳೂರು ನಗರ ಹಾಗೂ ಹಳ್ಳಿಗಳಲ್ಲಿ ಎದುರಾಗಿರುವ ಸಮಸ್ಯೆ. ಇಂಧನ ಇಲಾಖೆ ಸುಪ್ರೀಂ ಕೋರ್ಟ್ ಆದೇಶ ಬರುವ ಮುನ್ನವೇ 4 ಲಕ್ಷ ಗ್ರಾಹಕರಿಂದ ಹಣ ಕಟ್ಟಿಸಿಕೊಂಡಿದ್ದು, 1 ಲಕ್ಷದಷ್ಟು ಗ್ರಾಹಪಕರಿಗೆ ಅನುಮತಿ ನೀಡಿದ್ದೇವೆ. ನ್ಯಾಯಾಲಯದ ತೀರ್ಪಿನಲ್ಲಿ ಸರ್ಕಾರ ಕೆಲವು ಸಣ್ಣ ಪುಟ್ಟ ತೀರ್ಮಾನ ಮಾಡಬಹುದು ಎಂದು ಹೇಳಿದ್ದು ನಾವು 30X40 ವಿಸ್ತೀರ್ಣದ ನಿವೇಷನಕ್ಕೆ ವಿನಾಯಿತಿ ನೀಡಿದ್ದೇವೆ. ವಿರೋಧ ಪಕ್ಷದವರ ಸಲಹೆಗಳನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು” ಎಂದು ಭರವಸೆ ನೀಡಿದರು.

“30X40 ನಿವೇಶನದಲ್ಲಿ 6-7 ಮಹಡಿ ಕಟ್ಟಡ ನಿರ್ಮಿಸುತ್ತಿದ್ದಾರೆ. 40X60 ವಿಸ್ತೀರ್ಣದಲ್ಲಿ 8-10 ಮಹಡಿ ನಿರ್ಮಿಸುತ್ತಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು 8 ಬಾರಿ ಸಭೆ ಮಾಡಿದ್ದು, ಸಚಿವ ಸಂಪುಟದಲ್ಲಿ ನಾಲ್ಕು ಬಾರಿ ಚರ್ಚೆ ಮಾಡಲಾಗಿದೆ. ಜನರ ಹಿತದೃಷ್ಟಿಯಿಂದ ಈ ವಿಚಾರವಾಗಿ ಸರ್ಕಾರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಿದೆ” ಎಂದರು.

ಅಪಾರ್ಟ್ಮೆಂಟ್ ಕಾಯ್ದೆಗೆ ಸರ್ಕಾರ ಬದ್ಧ

“ಇನ್ನು ಅಪಾರ್ಟ್ಮೆಂಟ್ ಕಾಯ್ದೆ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದ್ದೇವೆ. ಈ ವಿಚಾರವಾಗಿ ವಿರೋಧ ಪಕ್ಷಗಳ ಶಾಸಕರ ಜತೆ ಚರ್ಚೆ ಮಾಡುತ್ತೇನೆ. ನಿಮ್ಮ ಅಭಿಪ್ರಾಯ ಸಂಗ್ರಹಿಸಲಾಗುವುದು. ನಂತರ ಸುಗ್ರೀವಾಜ್ಞೆ ಮೂಲಕವಾದರೂ ಇದನ್ನು ಜಾರಿಗೆ ತರಲಾಗುವುದು. ಇನ್ನು ವಾಹನ ನಿಲುಗಡೆ ನೀತಿ ಅಗತ್ಯವಿದ್ದು, ಇದಕ್ಕೆ ನೀತಿ ರೂಪಿಸಲಾಗುವುದು. ಎಲ್ಲೆಂದರಲ್ಲಿ ವಾಹನ ನಿಲುಡಗಡೆ ಮಾಡಲಾಗುತ್ತಿದ್ದು, ಪಿಪಿಪಿ ಮಾದರಿಯಲ್ಲಿ ಹಾಗೂ ಖಾಸಗಿ ಜಾಗದಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲು ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ನಿಮ್ಮ ಸಲಹೆಗಳೇನೆ ಇದ್ದರೂ ನನಗೆ ಲಿಖಿತ ರೂಪದಲ್ಲಿ ನೀಡಿ” ಎಂದು ಹೇಳಿದರು.

“ಇನ್ನು ರಸ್ತೆ ಗುಂಡಿ ಎಲ್ಲಾ ಕಡೆಯೂ ಇದೆ. ನಾವು ಬೆಂಗಳೂರಿನ ರಸ್ತೆ ಗುಂಡಿಗಳನ್ನು ಬಹುತೇಕ ಮುಚ್ಚಿದ್ದೇವೆ. 150 ಕಿ.ಮೀ ಹೊಸ ರಸ್ತೆಗೆ 1700 ಕೋಟಿ ವೆಚ್ಚ ಮಾಡಲಾಗಿದೆ. ಇಡೀ ದೇಶದಲ್ಲಿ ರಸ್ತೆ ಗುಂಡಿ ಕಂಡುಬಂದರೆ ಪಾಲಿಕೆಗೆ ತಿಳಿಸಿ ಎಂದು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದು ನಾವೇ ಮೊದಲು. ರಸ್ತೆ ಗುಂಡಿ ಮುಚ್ಚುವದು ನಿರಂತರ ಪ್ರಕ್ರಿಯೆಯಾಗಿದ್ದು, ನಾವು ಇದನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದರು.

ಸ್ಕೈಡೆಕ್ ಯೋಜನೆಗೆ ಶೀಘ್ರ ಟೆಂಡರ್:

“ಇನ್ನು ಬೆಂಗಳೂರಿನಲ್ಲಿ ಸ್ಕೈಡೆಕ್ ಮಾಡಲು ಮುಂದಾಗಿದ್ದೇವೆ. ಹೆಮ್ಮಿಗೆಪುರದ ಬಳಿ ನಿರ್ಮಾಣ ಮಾಡಲು ಎಲ್ಲರೂ ಒಪ್ಪಿದ್ದರು. ಆದರೆ ನೈಸ್ ಸಂಸ್ಥೆಯವರು ಅವಕಾಶ ನೀಡಲಿಲ್ಲ. ಅವರು ಎನ್ಒಸಿ ನೀಡಲು ನಿರಾಕರಿಸಿದರು. ನನಗೂ ಅವರಿಗೂ ತಿಕ್ಕಾಟವಾಯಿತು. ವಿಮಾನ ನಿಲ್ದಾಣದ ಸುತ್ತಮುತ್ತ ನಿರ್ದಿಷ್ಟ ದೂರದವರೆಗೆ ಎತ್ತರದ ಕಟ್ಟಡಗಳಿಗೆ ನಿರ್ಬಂಧ ಇರುವ ಕಾರಣ ಎನ್ ಜಿಎಫ್ ಬಳಿ ನಿರ್ಮಾಣ ಮಾಡುವ ಯೋಜನೆ ಕೈಬಿಡಲಾಯಿತು. ಇನ್ನು ಬೆಂಗಳೂರು ವಿವಿ ಆವರಣದಲ್ಲಿ ನಿರ್ಮಾಣ ಮಾಡಿದರೆ ಗಲಾಟೆಗಳು ಆಗುತ್ತವೆ ಎಂದು ಶಿಕ್ಷಣ ಸಚಿವರು ಹೇಳಿದರು. ಹೀಗಾಗಿ ಈಗ ಅದನ್ನು ಕೆಂಪೇಗೌಡ ಬಡಾವಣೆಯಲ್ಲಿ ಮಾಡಲು ನಿರ್ಧರಿಸಿದ್ದು ಟೆಂಡರ್ ಕರೆಯಲು ಸಿದ್ಧತೆ ನಡೆಯುತ್ತಿದೆ. ಆದಷ್ಟು ಬೇಗ ಇದನ್ನು ಪ್ರಾರಂಭಿಸಲಾಗುವುದು” ಎಂದು ತಿಳಿಸಿದರು.

ಕೇಂದ್ರದ ನಿರ್ದೆಶನದಂತೆ ಮುನ್ಸಿಪಲ್ ಬಾಂಡ್

ಈ ಮಧ್ಯೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಾರ್ಪೊರೇಷನ್ ಬಾಂಡ್ ವಿಚಾರ ಪ್ರಸ್ತಾಪಿಸಿದರು. ಇದಕ್ಕೆ ಉತ್ತರ ನೀಡಿದ ಶಿವಕುಮಾರ್ ಅವರು, “ಕೇಂದ್ರ ಸರ್ಕಾರ ನಗರ ನಿಧಿ ಸವಾಲು ಎಂದು ಮಾರ್ಗಸೂಚಿ ನೀಡಿದ್ದು, ಮುನ್ಸಿಪಲ್ ಬಾಂಡ್ ಮೂಲಕ ಹಣ ಸಂಗ್ರಹಿಸಿ ನಾವು ಸಬ್ಸಿಡಿ ನೀಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪ್ರತಿ ಪಾಲಿಕೆಗಳಿಗೆ 200 ಕೋಟಿ ಇಟ್ಟುಕೊಂಡಿದ್ದು, ಈ ಸುಧಾರಣೆ ಶಿಫಾರಸ್ಸು ಮಾಡಿರುವುದು ಕೇಂದ್ರ ಸರ್ಕಾರ. ಕೆಲವು ಸಂದರ್ಭದಲ್ಲಿ ನಾವು ನೀವು ಹೇಳಿದಂತೆ ಕೇಳಬೇಕಲ್ಲವೇ” ಎಂದು ತಿಳಿಸಿದರು.

“ಈಜಿಪುರ ಮೇಲ್ಸೇತುವೆ ಕಾಮಗಾರಿ ಜವಾಬ್ದಾರಿಯನ್ನು ಬೇರೆ ಗುತ್ತಿಗದಾರರಿಗೆ ಹಸ್ತಾಂತರಿಸಿದ್ದು, 25 ಕೋಟಿ ಅನುದಾನ ಬಾಕಿ ಇದ್ದು, ನಾಲ್ಕೈದು ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ” ಎಂದು ಭರವಸೆ ನೀಡಿದರು.

ನೆಲಮಂಗಲದಿಂದ ಬಿಡದಿವರೆಗೆ ಪರ್ಯಾಯ ರಸ್ತೆ:

ಈ ವೇಳೆ ಶಾಸಕರುಗಳು ವಾರಾಂತ್ಯದಲ್ಲಿ ನೆಲಮಂಗಲ ಕ್ರಾಸ್ ನಲ್ಲಿ ಸಂಚಾರ ದಟ್ಟಣೆ ಹೆಚ್ಚುವ ಬಗ್ಗೆ ಕೇಳಿದಾಗ, “ನಮ್ಮ ಸರ್ಕಾರ ಈ ವರ್ಷ 2006ರಲ್ಲಿ ಅಧಿಸೂಚನೆ ಹೊರಡಿಸಿರುವಂತೆ ನೆಲಮಂಗಲ, ಸೊಂಡೆಕೊಪ್ಪ, ತಾವರೆಕೆರೆ, ಬಿಡದಿ ಮಾರ್ಗವಾಗಿ ಒಂದು ಪರ್ಯಾಯ ರಸ್ತೆ ನಿರ್ಮಿಸಿ ದಟ್ಟಣೆ ಕಡಿಮೆ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಶೋಭಾ ಕರಂದ್ಲಾಜೆ ಹಾಗೂ ಸೋಮಶೇಖರ್ ಅವರು ತಾವರೆಕೆರೆವರೆಗೂ ಮೆಟ್ರೋ ವಿಸ್ತರಣೆಗೆ ಮನವಿ ಮಾಡಿದ್ದು, ಡಬಲ್ ಡೆಕ್ಕರ್ ಮಾಡಲು ಆಲೋಚನೆ ಮಾಡಲಾಗುತ್ತಿದೆ. ಬನಶಂಕರಿಯಲ್ಲಿ ಸ್ಕೈವಾಕ್ ನಿರ್ಮಾಣದ ವಿಚಾರವಾಗಿ ಶೀಘ್ರ ತೀರ್ಮಾನ ಮಾಡಲಾಗುವುದು. ಜಿ.ಟಿ ದೇವೇಗೌಡ ಅವರು ಕೆ.ಆರ್ ಮಾರುಕಟ್ಟೆ ಮೇಲೇತುವೆಯನ್ನು ಮುಂದುವರಿಸಿ ಕೆಂಗೇರಿವರೆಗೂ ವಿಸ್ತರಿಸಿ ಎಂದು ಸಲಹೆ ನೀಡಿದ್ದು ಅವರ ಸಲಹೆ ಪರಿಗಣಿಸುತ್ತೇವೆ” ಎಂದು ತಿಳಿಸಿದರು.

ಬೆಂಗಳೂರು ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ ಬರುತ್ತಿಲ್ಲ

“ಇಡೀ ದೇಶ ಬೆಂಗಳೂರನ್ನು ನೋಡುತ್ತಿದೆ. ಇಲ್ಲಿ ನಾವು ನಾವುಗಳು ಕೂತು ದಿನಬೆಳಗಾದರೆ ಟೀಕೆ ಮಾಡುವುದಲ್ಲ. ನಾನು ದಾವೋಸ್ ಸಮಿಟ್ ಗೆ ಹೋದಾಗ ಅಲ್ಲಿ ಬೆಂಗಳೂರಿಗೆ ನೀಡಲಾಗುತ್ತಿದ್ದ ಅದ್ಯತೆ ನೋಡಿದೆ. ಅಮೆರಿಕ ಹಾಗೂ ಯೂರೋಪ್ ರಾಷ್ಟ್ರಗಳಿಂದ ಅನೇಕ ಕಂಪನಿಗಳು ಹೂಡಿಕೆ ವಿಚಾರವಾಗಿ ಚರ್ಚೆ ಮಾಡಲು ಕಾಲಾವಕಾಶ ಕೇಳುತ್ತಿದ್ದು, ಈ ಅಧಿವೇಶನ ಮುಗಿದ ಬಳಿಕ ಚರ್ಚೆ ಮಾಡಲಾಗುವುದು. ಬೆಂಗಳೂರು ಬೇರೆ ನಗರಗಳಿಗೆ ಮಾದರಿಯಾಗಿದೆ. ಬೆಂಗಳೂರಿನಲ್ಲಿ ನೆಲಮಂಗಲ ಮೇಲ್ಸೇತುವೆ, ವಿಮಾನ ನಿಲ್ದಾಣ ಮೇಲ್ಸೇತುವೆ, ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ ಆಗಿದ್ದರೆ ಅದಕ್ಕೆ ಮನಮೋಹನ್ ಸಿಂಗ್ ಅವರ ಸರ್ಕಾರ ಕಾರಣ. ಆಗ ನರ್ಮ್ ಯೋಜನೆ ಮೂಲಕ ಸಾಕಷ್ಟು ಅನುದಾನ ಬರುತ್ತಿತ್ತು. ಈಗ ಬೆಂಗಳೂರು ನಗರದ ಅಭಿವೃದ್ಧಿಗೆ ಕೇಂದ್ರದಿಂದ ಯಾವುದೇ ಅನುದಾನ ಬರುತ್ತಿಲ್ಲ. ನಾನು ಈ ವಿಚಾರವಾಗಿ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದೆ, ನಿರ್ಮಲ ಸೀತರಾಮನ್ ಅವರು ಸಹಾಯ ಮಾಡುತ್ತಾರೆ ಎಂದು ಭಾವಿಸಿದ್ದೆ ಆದರೆ ಅವರು ಮಾಡಲಿಲ್ಲ” ಎಂದರು.

ಬೆಂಗಳೂರಿನ ಜತೆ ಬೇರೆ ನಗರಗಳ ಹೋಲಿಕೆ ಸಾಧ್ಯವಿಲ್ಲ:

“ಗ್ಲೋಬಲ್ ಟೆಕ್ ಮಾರ್ಕೆಟ್ ಟಾಪ್ ಟ್ಯಾಲೆಂಟ್ ಬಗ್ಗೆ ನಡೆದ ಸಮೀಕ್ಷೆಯಲ್ಲಿ ಬೆಂಗಳೂರು ಜಾಗತಿಕ ಮಟ್ಟದಲ್ಲಿ 6 ನೇ ಸ್ಥಾನದಲ್ಲಿದೆ. ಹೈದರಾಬಾದ್ 26 ನೇ ಸ್ಥಾನದಲ್ಲಿದೆ. ನಾವು ಹೈದರಾಬಾದ್ ಜೊತೆ ಸ್ಪರ್ಧೆಗೆ ಇಳಿಯುವ ಅವಶ್ಯಕತೆಯಿಲ್ಲ. ಹೈದರಾಬಾದ್ ಜತೆ ಬೆಂಗಳೂರು ಸ್ಪರ್ಧೆ ಮಾಡುವ ಸ್ಥಿತಿ ಇಲ್ಲ. ಈ ಹಿಂದೆ ಇರಾನ್ ಸೇರಿದಂತೆ ದೇಶದ ಶ್ರೀಮಂತರ ಮಕ್ಕಳು ಬೆಂಗಳೂರಿಗೆ ಬಂದು ಓದುತ್ತಿದ್ದರು. ಬೆಂಗಳೂರಿನಲ್ಲಿ 250 ಇಂಜಿನಿಯರಿಂಗ್ ಕಾಲೇಜು, 70 ಮೆಡಿಕಲ್ ಕಾಲೇಜುಗಳಿವೆ. ಈ ರೀತಿ ದೇಶದ ಬೇರೆ ಯಾವ ರಾಜ್ಯಗಳಲ್ಲಿ ಇಲ್ಲ. 13,940 ವೈದ್ಯರನ್ನು ನಮ್ಮ ರಾಜ್ಯ ತಯಾರು ಮಾಡುತ್ತಿದೆ. ಇಲ್ಲಿ ಬೆಳೆದ ಪ್ರತಿಭೆಗಳು ಹೊರ ದೇಶಗಳಿಗೆ ಹೋಗುತ್ತಿದ್ದಾರೆ. 50% ಪ್ರತಿಭೆಗಳು ಇಲ್ಲೇ ಉಳಿದುಕೊಂಡಿದ್ದಾರೆ” ಎಂದರು.

“ನೆದರ್ಲೆಂಡ್ ಪ್ರಧಾನಮಂತ್ರಿಗಳು ಬೆಂಗಳೂರಿಗೆ ಬಂದಾಗ ಅವರಿಗೆ ಬೆಂಗಳೂರಿಗೆ ಬಂದಿದ್ದು ಯಾಕೆ ಎಂದು ಕೇಳಿದೆ. ಅದಕ್ಕೆ ಅವರು ನಾವು ಸಿಲಿಕಾನ್ ವ್ಯಾಲಿಯಲ್ಲಿ ಅಧ್ಯಯನ ಮಾಡಿದಾಗ ಅಲ್ಲಿನ ಪ್ರತಿಭೆಗಳು ಮೂವರಲ್ಲಿ ಒಬ್ಬರು ಬೆಂಗಳೂರಿನವರು. ಹೀಗಾಗಿ ಇಲ್ಲಿ ವಿಪ್ರೋ, ಇನ್ಫೋಸಿಸ್ ಕಂಪನಿಗಳ ಜತೆ ವ್ಯಾಪಾರ ಮಾಡಲು ಬಂದಿದ್ದೇವೆ. ಎಂದುರು. ನಮ್ಮ ಮಕ್ಕಳು ಪ್ರತಿಭಾವಂತ ಹಾಗೂ ಸಮರ್ಥರಿದ್ದಾರೆ. ಇಸ್ರೋ, ಮೊದಲ ಕಾನೂನು ಶಾಲೆ, ಹೆಚ್ಎಂಟಿ ಕೈಗಾರಿಕೆ, ಐಐಟಿ ಸ್ಥಾಪನೆಯಾಗಿದ್ದು ಇಲ್ಲೇ. ಇದರಿಂದಾಗಿ ಬೆಂಗಳೂರು ಬೆಳೆದಿದ್ದು, ನಾವು ಇದನ್ನು ಕಾಪಾಡಿಕೊಂಡು ಹೋಗಬೇಕು ಎಂಬುದು ನಮ್ಮ ಬಯಕೆ” ಎಂದು ಹೇಳಿದರು.

ಬೆಂಗಳೂರು ಯಾವುದೇ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಬೆಂಗಳೂರು ನಡೆದ ಹಾದಿಯಲ್ಲಿ ಬೇರೆ ನಗರಗಳು ಸಾಗುವಂತೆ ಮಾಡಲಾಗುತ್ತಿದೆ. ಬೆಂಗಳೂರಿಗೆ ತನ್ನದೇ ಆದ ಸವಾಲುಗಳಿದ್ದು ಅವುಗಳನ್ನು ಸಮರ್ಥವಾಗಿ ನಿಭಾಯಿಸುತ್ತೇವೆ. ಬೆಂಗಳೂರಿನ ಬೆಳವಣಿಗೆಗೆ ಅನೇಕ ವಿದ್ಯಾವಂತರು, ಬುದ್ದಿವಂತರು, ಪ್ರಜ್ಞಾವಂತರು, ರಾಜಕೀಯ ನಾಯಕರು ಕೊಡುಗೆ ನೀಡಿದ್ದು ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ಎಲ್ಲರೂ ಸೇರಿ ಬೆಂಗಳೂರನ್ನು ಕಟ್ಟೊಣ. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ.

ಈ ಮಧ್ಯೆ ಶಾಸಕರಿಗೆ ಐಪಿಎಲ್ ಪಂದ್ಯಗಳ ಟಿಕೆಟ್ ನೀಡುವುದಿಲ್ಲ, ಗೌರವದಿಂದ ನಡೆಸಿಕೊಳ್ಳುವುದಿಲ್ಲ ಎಂದು ಕೆಲವು ಶಾಸಕರು ಆಕ್ಷೇಪ ವ್ಯಕ್ತಪಡಿಸಿದಾಗ, “ಶಾಸಕರು ಕೇಳುವುದರಲ್ಲಿ ತಪ್ಪಿಲ್ಲ. ಈ ವಿಚಾರವಾಗಿ ನಾನು ಕೆಎಸ್ ಸಿಎ ಅಧ್ಯಕ್ಷರನ್ನು ಕರೆಸಿ ಮಾತನಾಡುತ್ತೇನೆ. ನಾನು ಕೂಡ ಆ ಸಂಸ್ಥೆಯ ಮತ ಚಲಾಯಿಸುವ ಸದಸ್ಯನಾಗಿದ್ದೇನೆ” ಎಂದು ತಿಳಿಸಿದರು.

Comments

Leave a Comment

Prev Post ಮುಂಚೂಣಿಯಲ್ಲಿ ಇರಲು ಕರ್ನಾಟಕ ಬದ್ಧ;ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News